AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ಕರುನಾಡಿನಾದ್ಯಂತ ‘ಗಂಧದ ಗುಡಿ’ ಗುಣಗಾನ; ಅಪ್ಪು ಡ್ರೀಮ್​ ಪ್ರಾಜೆಕ್ಟ್​ ನೋಡಲು ಮುಗಿಬಿದ್ದ ಜನ

Puneeth Rajkumar | Amoghavarsha: ಪುನೀತ್​ ರಾಜ್​ಕುಮಾರ್ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಅದ್ದೂರಿ ಸ್ವಾಗತ ಕೋರಿದ್ದಾರೆ. ವೃದ್ಧರು, ಮಕ್ಕಳು ಎನ್ನದೇ ಎಲ್ಲ ವಯೋಮಾನದವರು ಬಂದು ‘ಗಂಧದ ಗುಡಿ’ ಕಣ್ತುಂಬಿಕೊಳ್ಳುತ್ತಿದ್ದಾರೆ.

Gandhada Gudi: ಕರುನಾಡಿನಾದ್ಯಂತ ‘ಗಂಧದ ಗುಡಿ’ ಗುಣಗಾನ; ಅಪ್ಪು ಡ್ರೀಮ್​ ಪ್ರಾಜೆಕ್ಟ್​ ನೋಡಲು ಮುಗಿಬಿದ್ದ ಜನ
‘ಗಂಧದ ಗುಡಿ’ ನೋಡಲು ಮುಗಿಬಿದ್ದ ಫ್ಯಾನ್ಸ್​
TV9 Web
| Edited By: |

Updated on: Oct 28, 2022 | 8:50 AM

Share

ಈ ಒಂದು ದಿನಕ್ಕಾಗಿ ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳು ಒಂದು ವರ್ಷದಿಂದ ಕಾದಿದ್ದರು. ಅಪ್ಪು ಕಂಡಿದ್ದು ದೊಡ್ಡ ಕನಸು ಈ ‘ಗಂಧದ ಗುಡಿ’. ಬಹಳ ಪ್ರೀತಿಯಿಂದ ಇದನ್ನು ಜನರಿಗೆ ತೋರಿಸಬೇಕು ಎಂದು ಪುನೀತ್​ ಆಸೆ ಇಟ್ಟುಕೊಂಡಿದ್ದರು. ಆ ಆಸೆಯನ್ನು ಈಡೇರಿಸುವ ಸಲುವಾಗಿ ಡಾ. ರಾಜ್​ಕುಮಾರ್​ ಕುಟುಂಬ ಹಗಲಿರುಳು ಶ್ರಮಿಸಿದೆ. ಇಂದು (ಅಕ್ಟೋಬರ್​ 28) ರಾಜ್ಯಾದ್ಯಂತ ಅದ್ದೂರಿಯಾಗಿ ‘ಗಂಧದ ಗುಡಿ’ (Gandhada Gudi) ರಿಲೀಸ್​ ಆಗಿದೆ. ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಮುಗಿಬಿದ್ದು ಇದನ್ನು ನೋಡುತ್ತಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ಎಲ್ಲ ಜಿಲ್ಲೆಯಲ್ಲೂ ಅಪ್ಪು ಗುಣಗಾನ ಮಾಡಲಾಗುತ್ತಿದೆ. ಮುಂಜಾನೆಯ ಎಲ್ಲ ಶೋಗಳು ಹೌಸ್​ಫುಲ್​ ಆಗಿವೆ.

ದೊಡ್ಡ ಪರದೆ ಮೇಲೆ ಪುನೀತ್​ ರಾಜ್​ಕುಮಾರ್​ ಅವರನ್ನು ನೋಡಲು ಸಿಕ್ಕಿರುವ ಕೊನೆಯ ಅವಕಾಶ ಇದು. ಕರ್ನಾಟಕದ 225ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಾಕ್ಷ್ಯಚಿತ್ರ ಬಿಡುಗಡೆ ಆಗಿದೆ. ಗುರುವಾರವೇ (ಅ.27) ಹಲವು ಕಡೆಗಳಲ್ಲಿ ಪ್ರೀಮಿಯರ್​ ಶೋ ಆಯೋಜನೆಗೊಂಡಿತ್ತು. ಅಭಿಮಾನಿಗಳು ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಈ ಡಾಕ್ಯುಮೆಂಟರಿ ನೋಡಿ ಎಮೋಷನಲ್​ ಆಗುತ್ತಿದ್ದಾರೆ. ಇಂದು ಮುಂಜಾನೆಯೇ ಚಿತ್ರಮಂದಿರದ ಎದುರು ಸಾಲಾಗಿ ನಿಂತು, ಟಿಕೆಟ್​ ಪಡೆದು ಅಪ್ಪು ದರ್ಶನಕ್ಕೆ ಬಂದಿದ್ದಾರೆ ಅಪಾರ ಸಂಖ್ಯೆಯ ಅಭಿಮಾನಿಗಳು.

‘ಗಂಧದ ಗುಡಿ’ ಪ್ರದರ್ಶನ ಆಗುತ್ತಿರುವ ಎಲ್ಲ ಚಿತ್ರಮಂದಿರಗಳ ಎದುರಲ್ಲಿ ಅಪ್ಪು ಕಟೌಟ್​ಗಳು ರಾರಾಜಿಸುತ್ತಿವೆ. ತುಂಬ ಅದ್ದೂರಿಯಾಗಿ ಅಭಿಮಾನಿಗಳು ಈ ಸಾಕ್ಷ್ಯಚಿತ್ರಕ್ಕೆ ಸ್ವಾಗತ ಕೋರಿದ್ದಾರೆ. ಬಳ್ಳಾರಿಯಲ್ಲಿ ಇದನ್ನು ನೋಡಲು ಮುಗಿಬಿದ್ದ ಪ್ರೇಕ್ಷಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ವೃದ್ಧರು, ಮಕ್ಕಳು ಎನ್ನದೇ ಎಲ್ಲ ವಯೋಮಾನದವರು ಬಂದು ಈ ಡಾಕ್ಯುಮೆಂಟರಿ ಕಣ್ತುಂಬಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

‘ಗಂಧದ ಗುಡಿ’ ಡಾಕ್ಯುಮೆಂಟರಿಗೆ ಅಮೋಘವರ್ಷ ಅವರು ನಿರ್ದೇಶನ ಮಾಡಿದ್ದಾರೆ. ಪುನೀತ್​ ರಾಜ್​ಕುಮಾರ್​ ಅವರ ಪಿಆರ್​ಕೆ ಪ್ರೊಡಕ್ಷನ್ಸ್​ ಮೂಲಕ ಇದು ನಿರ್ಮಾಣ ಆಗಿದೆ. ದಾಖಲೆ ಪ್ರಮಾಣದಲ್ಲಿ ಈ ಚಿತ್ರ ಪ್ರದರ್ಶನ ಕಾಣುತ್ತಿದೆ. ಕರ್ನಾಟಕದ ಪ್ರಕೃತಿ ಸೌಂದರ್ಯ, ವನ್ಯ ಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಹಲವಾರು ವಿಷಯಗಳನ್ನು ಇದರಲ್ಲಿ ಹೇಳಲಾಗಿದೆ. ಅಪ್ಪು ಅವರ ಈ ಅಪರೂಪದ ಪ್ರಯತ್ನ ಎಲ್ಲರಿಗೂ ಇಷ್ಟ ಆಗುತ್ತಿದೆ.

ಗುರುವಾರ ಆಯೋಜಿಸಿದ್ದ ಪ್ರೀಮಿಯರ್​ ಶೋನಲ್ಲಿ ರಮ್ಯಾ, ಸುಧಾ ಮೂರ್ತಿ, ಅನುಶ್ರೀ, ಅಜಯ್​ ರಾವ್​, ದೇವರಾಜ್​, ನೆನಪಿರಲಿ ಪ್ರೇಮ್​, ಗುರು ಕಿರಣ್​, ಸಂಗೀತಾ ಶೃಂಗೇರಿ, ಅಮೃತಾ ಅಯ್ಯಂಗಾರ್​, ರೋಹಿತ್​ ಪದಕಿ, ಕುನಾಲ್​ ಗಾಂಜಾವಾಲಾ, ಅಭಿಷೇಕ್​ ಅಂಬರೀಷ್​, ಚೇತನ್ ಕುಮಾರ್​, ಸಂತೋಷ್​ ಆನಂದ್​ ರಾಮ್​ ಮುಂತಾದವರು ‘ಗಂಧದ ಗುಡಿ’ ವೀಕ್ಷಿಸಿ ಭಾವುಕರಾಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು