AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಗೆ ‘ಗಂಧದ ಗುಡಿ’ ಹೊಸ ಪೋಸ್ಟರ್ ರಿಲೀಸ್; ಆನೆಯ ಜತೆ ಬಂದ ಪುನೀತ್ ರಾಜ್​ಕುಮಾರ್

‘ಪಿಆರ್​ಕೆ ಪ್ರೊಡಕ್ಷನ್ಸ್​’ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಗಣೇಶ ಚತುರ್ಥಿಗೆ ‘ಗಂಧದ ಗುಡಿ’ ಹೊಸ ಪೋಸ್ಟರ್ ರಿಲೀಸ್; ಆನೆಯ ಜತೆ ಬಂದ ಪುನೀತ್ ರಾಜ್​ಕುಮಾರ್
ಪುನೀತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 31, 2022 | 2:50 PM

ಇಂದು (ಆಗಸ್ಟ್​ 31) ಎಲ್ಲೆಡೆ ಗಣೇಶ ಚತುರ್ಥಿ (Ganesh Chaturthi) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಗಳನ್ನು ವಿಶೇಷವಾಗಿ ಸಿಂಗರಿಸಲಾಗುತ್ತಿದೆ. ಹಬ್ಬಗಳು ಬಂತೆಂದರೆ ಸಿನಿಪ್ರಿಯರ ಪಾಲಿಗೆ ಖುಷಿಯೋ ಖುಷಿ. ಬಹುತೇಕ ಚಿತ್ರತಂಡಗಳು ಈ ವಿಶೇಷ ದಿನದಂದು ತಮ್ಮ ಚಿತ್ರಗಳ ಬಗ್ಗೆ ಹೊಸಹೊಸ ಅಪ್​ಡೇಟ್ ನೀಡುತ್ತವೆ. ಪೋಸ್ಟರ್ ರಿಲೀಸ್ ಮಾಡಿ ಹಬ್ಬಕ್ಕೆ ಶುಭ ಕೋರುತ್ತಾರೆ. ಗಣೇಶ ಚತುರ್ಥಿಯಂದು ಈ ಸಂಪ್ರದಾಯ ಮುಂದುವರಿದಿದೆ. ಅನೇಕ ಸಿನಿಮಾ ತಂಡಗಳು ಹೊಸ ಪೋಸ್ಟರ್ ರಿಲೀಸ್ ಮಾಡಿವೆ. ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ತಂಡದವರೂ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗದ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ ಪ್ರೇಕ್ಷಕರ ಎದುರು ಬರುವ ಉದ್ದೇಶ ಇಟ್ಟುಕೊಂಡಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸ್ಥಾಪಿಸಿ ಹೊಸಬರಿಗೆ ಅವಕಾಶ ನೀಡುವ ಕೆಲಸವೂ ನಡೆಯುತ್ತಿತ್ತು. ಇದೇ ನಿರ್ಮಾಣ ಸಂಸ್ಥೆ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಗಣೇಶ ಚತುರ್ಥಿ ಅಂಗವಾಗಿ ‘ಗಂಧದ ಗುಡಿ’ಯ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪುನೀತ್ ಅವರು ಆನೆಯ ಜತೆ ನಿಂತಿದ್ದಾರೆ. ‘ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ಭಗವಂತನು ನಿಮಗೆಲ್ಲರಿಗೂ ಸುಖ ಸಮೃದ್ಧಿ, ಉತ್ತಮ ಆರೋಗ್ಯ ಹಾಗೂ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಈ ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿದೆ.

2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಹೆಗಲಮೇಲೆ ಕೈ ಹಾಕಿ ನಿಂತ ಗಣಪ; ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ‘ಪಿಆರ್​ಕೆ ಪ್ರೊಡಕ್ಷನ್​’ ಜವಾಬ್ದಾರಿಯನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ವಹಿಸಿಕೊಂಡಿದ್ದಾರೆ. ಹೊಸಬರ ಸಿನಿಮಾಗೆ ಬೆಂಬಲ ನೀಡುವ ಕೆಲಸ ಕೂಡ ಮುಂದುವರೆದಿದೆ.

Published On - 2:45 pm, Wed, 31 August 22

ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​