AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿಗೆ ‘ಗಂಧದ ಗುಡಿ’ ಹೊಸ ಪೋಸ್ಟರ್ ರಿಲೀಸ್; ಆನೆಯ ಜತೆ ಬಂದ ಪುನೀತ್ ರಾಜ್​ಕುಮಾರ್

‘ಪಿಆರ್​ಕೆ ಪ್ರೊಡಕ್ಷನ್ಸ್​’ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಗಣೇಶ ಚತುರ್ಥಿಗೆ ‘ಗಂಧದ ಗುಡಿ’ ಹೊಸ ಪೋಸ್ಟರ್ ರಿಲೀಸ್; ಆನೆಯ ಜತೆ ಬಂದ ಪುನೀತ್ ರಾಜ್​ಕುಮಾರ್
ಪುನೀತ್
TV9 Web
| Edited By: |

Updated on:Aug 31, 2022 | 2:50 PM

Share

ಇಂದು (ಆಗಸ್ಟ್​ 31) ಎಲ್ಲೆಡೆ ಗಣೇಶ ಚತುರ್ಥಿ (Ganesh Chaturthi) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಗಳನ್ನು ವಿಶೇಷವಾಗಿ ಸಿಂಗರಿಸಲಾಗುತ್ತಿದೆ. ಹಬ್ಬಗಳು ಬಂತೆಂದರೆ ಸಿನಿಪ್ರಿಯರ ಪಾಲಿಗೆ ಖುಷಿಯೋ ಖುಷಿ. ಬಹುತೇಕ ಚಿತ್ರತಂಡಗಳು ಈ ವಿಶೇಷ ದಿನದಂದು ತಮ್ಮ ಚಿತ್ರಗಳ ಬಗ್ಗೆ ಹೊಸಹೊಸ ಅಪ್​ಡೇಟ್ ನೀಡುತ್ತವೆ. ಪೋಸ್ಟರ್ ರಿಲೀಸ್ ಮಾಡಿ ಹಬ್ಬಕ್ಕೆ ಶುಭ ಕೋರುತ್ತಾರೆ. ಗಣೇಶ ಚತುರ್ಥಿಯಂದು ಈ ಸಂಪ್ರದಾಯ ಮುಂದುವರಿದಿದೆ. ಅನೇಕ ಸಿನಿಮಾ ತಂಡಗಳು ಹೊಸ ಪೋಸ್ಟರ್ ರಿಲೀಸ್ ಮಾಡಿವೆ. ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ತಂಡದವರೂ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರು ಕನ್ನಡ ಚಿತ್ರರಂಗದ ಬಗ್ಗೆ ಸಾಕಷ್ಟು ಕನಸುಗಳನ್ನು ಕಂಡಿದ್ದರು. ಹೊಸ ಹೊಸ ಆಲೋಚನೆಗಳೊಂದಿಗೆ ಪ್ರೇಕ್ಷಕರ ಎದುರು ಬರುವ ಉದ್ದೇಶ ಇಟ್ಟುಕೊಂಡಿದ್ದರು. ‘ಪಿಆರ್​ಕೆ ಪ್ರೊಡಕ್ಷನ್ಸ್​’ ಸ್ಥಾಪಿಸಿ ಹೊಸಬರಿಗೆ ಅವಕಾಶ ನೀಡುವ ಕೆಲಸವೂ ನಡೆಯುತ್ತಿತ್ತು. ಇದೇ ನಿರ್ಮಾಣ ಸಂಸ್ಥೆ ಅಡಿಯಲ್ಲಿ ‘ಗಂಧದ ಗುಡಿ’ ಸಾಕ್ಷ್ಯ ಚಿತ್ರ ನಿರ್ಮಾಣ ಆಗುತ್ತಿತ್ತು. ಇದರ ಕೆಲಸಗಳು ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಈಗ ಈ ಡಾಕ್ಯುಮೆಂಟರಿ ರಿಲೀಸ್​ಗೆ ರೆಡಿ ಇದೆ.

ಇದನ್ನೂ ಓದಿ
Image
‘ಕಿಶೋರ್ ಪತ್ತಿಕೊಂಡಗೆ ಮೆದುಳಿನ ಸರ್ಜರಿ ಆಗಿದೆ, ಅವರು ಔಟ್​ ಆಫ್​ ಡೇಂಜರ್​’; ಧೀರೇನ್ ರಾಮ್​ಕುಮಾರ್
Image
Kishore Pathikonda: ‘ಜೇಮ್ಸ್​’ ನಿರ್ಮಾಪಕ ಕಿಶೋರ್​ ಪತ್ತಿಕೊಂಡ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
Image
ಆತ್ಮೀಯತೆಯಿಂದ ಮಾತನಾಡಿದ ಶಿವರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್​ರಾಜ್​ಕುಮಾರ್; ಇಲ್ಲಿದೆ ವಿಡಿಯೋ
Image
ಪುನೀತ್​ ನಟನೆಯ ‘ಜೇಮ್ಸ್’ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಸಂಪೂರ್ಣ ರಿಪೋರ್ಟ್​

ಗಣೇಶ ಚತುರ್ಥಿ ಅಂಗವಾಗಿ ‘ಗಂಧದ ಗುಡಿ’ಯ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪುನೀತ್ ಅವರು ಆನೆಯ ಜತೆ ನಿಂತಿದ್ದಾರೆ. ‘ಸರ್ವರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ಭಗವಂತನು ನಿಮಗೆಲ್ಲರಿಗೂ ಸುಖ ಸಮೃದ್ಧಿ, ಉತ್ತಮ ಆರೋಗ್ಯ ಹಾಗೂ ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಈ ಪೋಸ್ಟರ್​ಗೆ ಕ್ಯಾಪ್ಶನ್ ನೀಡಲಾಗಿದೆ.

2021ರ ಅಕ್ಟೋಬರ್ 29ರಂದು ಅಪ್ಪು ನಿಧನ ಹೊಂದಿದರು. ಈ ಕಾರಣಕ್ಕೆ ಈ ವರ್ಷ ಅಕ್ಟೋಬರ್ 28ರಂದು ‘ಗಂಧದ ಗುಡಿ’ಯನ್ನು ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಡಾಕ್ಯುಮೆಂಟರಿಗಳು ಒಟಿಟಿ ಹಾಗೂ ಯೂಟ್ಯೂಬ್​ಗೆ ಮಾತ್ರ ಸೀಮಿತವಾಗಿರುತ್ತದೆ. ಆದರೆ, ‘ಗಂಧದ ಗುಡಿ’ಯನ್ನು ಪುನೀತ್ ಅವರ ಆಸೆಯಂತೆ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡಲಾಗುತ್ತಿದೆ. ಇದಕ್ಕೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳಿಂದ ಉತ್ತಮ ಬೆಂಬಲ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್ ಹೆಗಲಮೇಲೆ ಕೈ ಹಾಕಿ ನಿಂತ ಗಣಪ; ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪುನೀತ್ ರಾಜ್​ಕುಮಾರ್ ನಿಧನದ ನಂತರದಲ್ಲಿ ‘ಪಿಆರ್​ಕೆ ಪ್ರೊಡಕ್ಷನ್​’ ಜವಾಬ್ದಾರಿಯನ್ನು ಅಶ್ವಿನಿ ಪುನೀತ್ ರಾಜ್​ಕುಮಾರ್ ವಹಿಸಿಕೊಂಡಿದ್ದಾರೆ. ಹೊಸಬರ ಸಿನಿಮಾಗೆ ಬೆಂಬಲ ನೀಡುವ ಕೆಲಸ ಕೂಡ ಮುಂದುವರೆದಿದೆ.

Published On - 2:45 pm, Wed, 31 August 22

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ