AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಧದ ಗುಡಿ’ಯಲ್ಲಿ ಪುನೀತ್ ಹೇಳುವ ಡೈಲಾಗ್​ಗೆ ವಿಧಿಯನ್ನು ಶಪಿಸಿದ ಫ್ಯಾನ್ಸ್​; ಅಂಥದ್ದೇನಿದೆ?

‘ಗಂಧದ ಗುಡಿ’ ಡಾಕ್ಯುಮೆಂಟರಿ ಮಾದರಿಯಲ್ಲಿದೆ. ಇಲ್ಲಿ ಸಿನಿಮೀಯ ಅಂಶಗಳು ಇಲ್ಲ. ಪುನೀತ್ ಅವರು ಜನಸಾಮಾನ್ಯರಂತೆ ಕಾಣಿಸಿಕೊಂಡಿದ್ದಾರೆ. ಹಲವು ಕುಗ್ರಾಮಗಳಿಗೆ ತೆರಳುವ ಅವರು ಮಕ್ಕಳ ಜತೆ ಮಕ್ಕಳಂತೆ ಬೆರೆತಿದ್ದಾರೆ.

‘ಗಂಧದ ಗುಡಿ’ಯಲ್ಲಿ ಪುನೀತ್ ಹೇಳುವ ಡೈಲಾಗ್​ಗೆ ವಿಧಿಯನ್ನು ಶಪಿಸಿದ ಫ್ಯಾನ್ಸ್​; ಅಂಥದ್ದೇನಿದೆ?
ಪುನೀತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 28, 2022 | 2:43 PM

Share

ಪುನೀತ್ ರಾಜ್​ಕುಮಾರ್ (Puneeth Rajkumar) ಅವರ ‘ಗಂಧದ ಗುಡಿ’ ಇಂದು (ಅಕ್ಟೋಬರ್ 28) ರಿಲೀಸ್ ಆಗಿದೆ. ಇದು ಪುನೀತ್ ಅವರ ಕನಸಿನ ಕೂಸಾಗಿತ್ತು. ಇದನ್ನು ನೋಡಿ ಫ್ಯಾನ್ಸ್ ಭಾವುಕರಾಗುತ್ತಿದ್ದಾರೆ. ಆ್ಯಂಕರ್ ಅನುಶ್ರೀ ಸೇರಿ ಅನೇಕರು ಕಣ್ಣೀರು ಹಾಕಿದ್ದಾರೆ. ಪುನೀತ್ ಅವರ ಕೊನೆಯ ಸಿನಿಮಾ ಇದು ಎಂಬ ಕಾರಣಕ್ಕೆ ಅಭಿಮಾನಿಗಳು ಭಾವುಕರಾಗುತ್ತಿದ್ದಾರೆ. ಈಗ ‘ಗಂಧದ ಗುಡಿ’ಯ (Gandhada Gudi) ಕೆಲ ಡೈಲಾಗ್​ಗಳನ್ನು ಕೇಳಿ ಫ್ಯಾನ್ಸ್ ಭಾವುಕರಾಗುತ್ತಿದ್ದಾರೆ. ಎಲ್ಲರೂ ವಿಧಿಯನ್ನು ಶಪಿಸುತ್ತಿದ್ದಾರೆ.

‘ಗಂಧದ ಗುಡಿ’ ಡಾಕ್ಯುಮೆಂಟರಿ ಮಾದರಿಯಲ್ಲಿದೆ. ಇಲ್ಲಿ ಸಿನಿಮೀಯ ಅಂಶಗಳು ಇಲ್ಲ. ಪುನೀತ್ ಅವರು ಜನಸಾಮಾನ್ಯರಂತೆ ಕಾಣಿಸಿಕೊಂಡಿದ್ದಾರೆ. ಹಲವು ಕುಗ್ರಾಮಗಳಿಗೆ ತೆರಳುವ ಅವರು ಮಕ್ಕಳ ಜತೆ ಮಕ್ಕಳಂತೆ ಬೆರೆತಿದ್ದಾರೆ. ಈ ಡಾಕ್ಯುಮೆಂಟರಿಯಲ್ಲಿ ಬರುವ ಕೆಲ ಸಂಭಾಷಣೆಗಳನ್ನು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಪುನೀತ್ ರಾಜ್​ಕುಮಾರ್ ಅವರಿಗೆ ಹಾವೆಂದರೆ ಭಯ. ಚಿಕ್ಕ ವಯಸ್ಸಿನಲ್ಲಿ ಸಿನಿಮಾ ಮಾಡುವಾಗ ಪುನೀತ್ ಕತ್ತಿಗೆ ಹಾವನ್ನು ಸುತ್ತಲಾಗಿತ್ತು. ಹಾವು ಉಸಿರಾಡುವ ಶಬ್ದ ಪುನೀತ್​ಗೆ ಸರಿಯಾಗಿ ಕೇಳಿಸಿತ್ತು. ಆಗಿನಿಂದ ಪುನೀತ್​ಗೆ ಹಾವೆಂದರೆ ಭಯ. ಕಾಡಲ್ಲಿ ಸುತ್ತಾಡುವಾಗ ಹಾವಿದೆ ಎಂಬ ವಿಚಾರ ತಿಳಿದು ಪುನೀತ್ ಭಯಗೊಂಡಿದ್ದರು. ‘ಮೂರು ಸಿನಿಮಾ ಒಪ್ಪಿಕೊಂಡಿದ್ದೇನೆ. ಮನೆಯಲ್ಲಿ ಹೆಂಡತಿ ಮಕ್ಕಳು ಇದ್ದಾರೆ. ನಾವು ಸೇಫ್ ಆಗಿ ಬೆಂಗಳೂರು ತಲುಪುತ್ತೀವಿ ತಾನೇ’ ಎಂದು ಪುನೀತ್ ಪ್ರಶ್ನೆ ಮಾಡಿದ್ದರು. ಇದನ್ನು ನೆನಪಿಸಿಕೊಂಡು ಅಭಿಮಾನಿಗಳು ಭಾವುಕರಾಗಿದ್ದಾರೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಇದನ್ನೂ ಓದಿ: Gandhada Gudi Review: ‘ಗಂಧದ ಗುಡಿ’: ಪುನೀತ್ ನಮಗಾಗಿ ಕೊಟ್ಟುಹೋದ ಮರೆಯಲಾಗದ ಸಂದೇಶ

ಹಾವನ್ನು ಹಿಡಿಯುವ ದೃಶ್ಯವೊಂದು ಬರುತ್ತದೆ. ಉರಗ ತಜ್ಞರೊಬ್ಬರು ಹಾವನ್ನು ರಕ್ಷಿಸುತ್ತಾರೆ. ಹಾವನ್ನು ರಕ್ಷಿಸಿದ ನಂತರದಲ್ಲಿ ಪುನೀತ್ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಳ್ಳುತ್ತಾರೆ. ‘ಒಂದೊಮ್ಮೆ ನಿಮ್ಮ ಮನೆಗೆ ಹಾವು ಬಂದರೆ ನನಗೆ ಕರೆ ಮಾಡಿ’ ಎಂಬ ಪುನೀತ್ ಮನವಿ ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿದೆ. ‘ಸಮಯ ಸಿಕ್ಕಾಗಲೆಲ್ಲ ಪ್ರಕೃತಿ ಮಧ್ಯೆ ಕಳೆಯಬೇಕು’ ಎಂದು ಪುನೀತ್ ಹೇಳಿಕೊಳ್ಳುತ್ತಾರೆ. ಈ ರೀತಿಯ ಡೈಲಾಗ್​ಗಳು ಪುನೀತ್ ಅಭಿಮಾನಿಗಳಿಗೆ ಬೇಸರ ಮೂಡಿಸುತ್ತಿದೆ. ಪುನೀತ್ ಅವರನ್ನು ಕರೆದುಕೊಂಡ ವಿಧಿಯನ್ನು ಎಲ್ಲರೂ ಶಪಿಸುತ್ತಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ