AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​

Puneeth Rajkumar: ಅಪ್ಪು ಕನಸಿನ ಪ್ರಾಜೆಕ್ಟ್​ ಅನ್ನು ಅಭಿಮಾನಿಗಳು ಹೆಮ್ಮೆಯಿಂದ ನೋಡಲು ಆಸಕ್ತಿ ತೋರಿಸುತ್ತಿದ್ದಾರೆ. ರಾಜ್ಯಾದ್ಯಂತ ‘ಗಂಧದ ಗುಡಿ’ ಗುಂಗು ಜೋರಾಗಿದೆ.

Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Oct 27, 2022 | 2:53 PM

Share

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ‘ಗಂಧದ ಗುಡಿ’ ಪ್ರಾಜೆಕ್ಟ್​ ಬಗ್ಗೆ ಸಾಕಷ್ಟು ಕನಸು ಇಟ್ಟುಕೊಂಡಿದ್ದರು. ಆದರೆ ಅದು ನನಸಾಗುವುದಕ್ಕೂ ಮುನ್ನವೇ ಅವರು ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಭೌತಿಕವಾಗಿ ಅಪ್ಪು ಇಲ್ಲದಿದ್ದರೂ ಕೂಡ ಅವರು ಕಂಡ ಕನಸನ್ನು ನನಸಾಗಿಸಲಾಗುತ್ತಿದೆ. ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರವನ್ನು ದೊಡ್ಡ ಮಟ್ಟದಲ್ಲಿ ರಿಲೀಸ್​ ಮಾಡಲಾಗುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಸಜ್ಜಾಗಿದ್ದಾರೆ. ವಿಶೇಷ ಏನೆಂದರೆ, ರಿಲೀಸ್​ ಆಗುವುದಕ್ಕೂ ಮುನ್ನವೇ ಈ ಡಾಕ್ಯುಮೆಂಟರಿ ದಾಖಲೆ ಬರೆದಿದೆ. ಬೆಂಗಳೂರಿನ ಮಾಲ್​ಗಳಲ್ಲಿ ಮೊದಲ ಬಾರಿಗೆ ಏಕಕಾಲಕ್ಕೆ 50ಕ್ಕೂ ಹೆಚ್ಚು ಶೋಗಳಲ್ಲಿ ಪ್ರದರ್ಶನ ಕಾಣುವ ಮೂಲಕ ‘ಗಂಧದ ಗುಡಿ’ ದಾಖಲೆ ಬರೆಯುತ್ತಿದೆ.

ಈ ಶುಕ್ರವಾರ (ಅಕ್ಟೋಬರ್​ 28) ‘ಗಂಧದ ಗುಡಿ’ ಗ್ರ್ಯಾಂಡ್​ ರಿಲೀಸ್​ ಆಗುತ್ತಿದೆ. ಅದಕ್ಕೂ ಒಂದು ದಿನ ಮುನ್ನ ಅನೇಕ ಕಡೆಗಳಲ್ಲಿ ಪ್ರೀಮಿಯರ್​ ಪ್ರದರ್ಶನ ಆಯೋಜನೆಗೊಂಡಿದೆ. ಅದರ ಎಲ್ಲ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿವೆ. ಅಪ್ಪು ಕನಸಿನ ಪ್ರಾಜೆಕ್ಟ್​ ಅನ್ನು ಅಭಿಮಾನಿಗಳು ಹೆಮ್ಮೆಯಿಂದ ನೋಡಲು ಆಸಕ್ತಿ ತೋರಿಸುತ್ತಿದ್ದಾರೆ. ರಾಜ್ಯಾದ್ಯಂತ ‘ಗಂಧದ ಗುಡಿ’ ಗುಂಗು ಜೋರಾಗಿದೆ.

ಬೆಂಗಳೂರಿನ ಎಲ್ಲ ಪ್ರಮುಖ ಮಾಲ್​ಗಳಲ್ಲಿ ಅ.28ರ ಬೆಳಗ್ಗೆ 10 ಗಂಟೆಗೂ ಮುನ್ನ ಬರೋಬ್ಬರಿ 50 ಶೋಗಳಲ್ಲಿ ‘ಗಂಧದ ಗುಡಿ’ ಪ್ರದರ್ಶನ ಕಾಣುತ್ತಿದೆ. ಈ ಕುರಿತು ‘ಕೆಆರ್​ಜಿ ಸ್ಟುಡಿಯೋಸ್​’ನ ಕಾರ್ತಿಕ್​ ಗೌಡ ಅವರು ಟ್ವೀಟ್​ ಮಾಡಿದ್ದಾರೆ. ಈ ಸಾಕ್ಷ್ಯಚಿತ್ರ ನೋಡಲು ಜನರು ಸಖತ್​ ಆಸಕ್ತಿ ತೋರಿಸುತ್ತಿದ್ದಾರೆ. ಅದಕ್ಕೆ ಅನುಗುಣವಾಗಿ ಶೋ ಸಂಖ್ಯೆ ಹೆಚ್ಚುತ್ತಿದೆ.

ಇದನ್ನೂ ಓದಿ
Image
Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್
Image
Gandhada Gudi: ರಮ್ಯಾ ಕೈ ಸೇರಿತು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​ ಆಮಂತ್ರಣ ಪತ್ರಿಕೆ
Image
Gandhada Gudi: ‘ಗಂಧದ ಗುಡಿ’ ಟ್ರೇಲರ್ ರಿಲೀಸ್ ವೇಳೆ ಅಶ್ವಿನಿ ಪುನೀತ್​ ರಾಜ್​ಕುಮಾರ್ ಹೇಳಿದ್ದು ಒಂದೇ ಮಾತು..
Image
Gandhada Gudi: ಅ.21ರಂದು ‘ಗಂಧದ ಗುಡಿ’ ಪ್ರೀ-ರಿಲೀಸ್​ ಇವೆಂಟ್​; ವಿಶೇಷವಾಗಿ ಸಿದ್ಧವಾಗಿದೆ ಆಮಂತ್ರಣ ಪತ್ರಿಕೆ

‘ಗಂಧದ ಗುಡಿ’ ಬಗ್ಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಮಾತು:

‘ಇದರಲ್ಲಿ ನಟನೆ ಇಲ್ಲ. ಅಪ್ಪು ಅವರ ಜರ್ನಿಯನ್ನೇ ನೇರವಾಗಿ ಸೆರೆ ಹಿಡಿಯಲಾಗಿದೆ. ನನಗೆ ಇದರ ಬಗ್ಗೆ ತುಂಬ ಹೆಮ್ಮೆ ಇದೆ. ಕನ್ನಡದ ಜನತೆಗೆ ಪುನೀತ್​ ಅವರ ಮೂಲಕ ಕರ್ನಾಟಕವನ್ನು ತೋರಿಸುವ ಕಾರ್ಯ ಆಗುತ್ತಿದೆ. ಶೂಟಿಂಗ್​ ವೇಳೆ ಅವರು ಅವರಾಗಿಯೇ ಇದ್ದರು. ಪ್ರತಿ ಹಂತದ ಶೂಟಿಂಗ್​ನಲ್ಲೂ ಅವರು ಖುಷಿಯಾಗಿದ್ದರು’ ಎಂದು ಅಶ್ವಿನಿ​ ಹೇಳಿದ್ದಾರೆ.

ಕೆಲವೇ ನಿಮಿಷಗಳಲ್ಲಿ ಪ್ರೀಮಿಯರ್​ ಶೋ ಟಿಕೆಟ್​ಗಳು ಸೋಲ್ಡ್​ ಔಟ್​ ಆಗಿರುವುದು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಖುಷಿ ನೀಡಿದೆ. ‘ಇದು ನನಗೆ ಹೆಮ್ಮೆ ಕೊಟ್ಟಿರುವ ಪ್ರಾಜೆಕ್ಟ್​. ಒಂದು ಕಡೆ ಬೇಸರ, ಇನ್ನೊಂದು ಕಡೆ ಖುಷಿ ಇದೆ. ಎಲ್ಲರೂ ಗಂಧದ ಗುಡಿ ನೋಡಿ, ಆಶೀರ್ವದಿಸಿ’ ಎಂದು ಅವರು ಕೇಳಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ