‘ಸಹಾರಾ’ ಚಿತ್ರದ ಹಾಡು ಬಿಡುಗಡೆ ಮಾಡಿದ ನಟ ಗಣೇಶ್​; ಜೂ.7ಕ್ಕೆ ಸಿನಿಮಾ ರಿಲೀಸ್

ಈ ವಾರ (ಜೂನ್​ 7) ‘ಸಹಾರಾ’ ಸಿನಿಮಾ ರಿಲೀಸ್​ ಆಗುತ್ತಿದೆ. ಇದರಲ್ಲಿ ಸಾರಿಕಾ ರಾವ್​ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಮಂಜೇಶ್ ಭಗವತ್ ಅವರು ನಿರ್ದೇಶನ ಮಾಡಿದ್ದಾರೆ. ಖ್ಯಾತ ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ‘ಸಹಾರಾ’ ಸಿನಿಮಾದ ಒಂದು ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

‘ಸಹಾರಾ’ ಚಿತ್ರದ ಹಾಡು ಬಿಡುಗಡೆ ಮಾಡಿದ ನಟ ಗಣೇಶ್​; ಜೂ.7ಕ್ಕೆ ಸಿನಿಮಾ ರಿಲೀಸ್
ಗೋಲ್ಡನ್​ ಸ್ಟಾರ್​ ಗಣೇಶ್​, ಸಾರಿಕಾ ರಾವ್​, ಮಂಜೇಶ್ ಭಗವತ್
Follow us
|

Updated on: Jun 06, 2024 | 2:50 PM

ಕೆಲವು ಕಾರಣಗಳಿಂದ ‘ಸಹಾರಾ’ ಸಿನಿಮಾ (Sahara Movie) ಮೇಲೆ ನಿರೀಕ್ಷೆ ಮೂಡಿದೆ. ಕನ್ನಡದ ಈ ಸಿನಿಮಾದಲ್ಲಿ ಕ್ರೀಡಾ ಆಧಾರಿತ ಕಥೆ ಇದೆ. ಜೂನ್ 7ರಂದು ಈ ಸಿನಿಮಾ ತೆರೆ ಕಾಣಲಿದೆ. ‘ಸಹಾರಾ’ ಸಿನಿಮಾದಲ್ಲಿ ಸಾರಿಕಾ ರಾವ್ (Sarika Rao) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಪ್ರಯತ್ನ ಎಂದರೆ ತಪ್ಪಿಲ್ಲ. ಯಾಕೆಂದರೆ, ‘ಸಹಾರಾ’ ಸಿನಿಮಾದಲ್ಲಿ ಮಹಿಳಾ ಕ್ರಿಕೆಟರ್​ ಕುರಿತಾದ ಕಥೆ ಇದೆ. ಸ್ಯಾಂಡಲ್​ವುಡ್​ನಲ್ಲಿ ಈ ರೀತಿಯ ವಸ್ತು ವಿಷಯ ಇಟ್ಟುಕೊಂಡ ಬಂದ ಮೊದಲ ಸಿನಿಮಾ ಇದು. ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರು ಈ ಸಿನಿಮಾದ ಹಾಡೊಂದನ್ನು ರಿಲೀಸ್​ ಮಾಡಿ, ಶುಭ ಕೋರಿದ್ದಾರೆ.

ಈ ಸಿನಿಮಾದ ಕಥೆಯ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಮಂಡ್ಯದ ಹುಡುಗಿಯೊಬ್ಬಳು ಕ್ರಿಕೆಟ್ ಆಟಗಾರ್ತಿ ಆಗುವ‌ ಕನಸನ್ನು ಕಾಣುತ್ತಾಳೆ. ಆ ಕನಸನ್ನು ನನಸಾಗಿಸುವ ಪ್ರಯತ್ನದಲ್ಲಿ ಆಕೆಗೆ ಕೆಲವು ಅಡೆತಡೆಗಳು ಎದುರಾಗುತ್ತವೆ. ಅವುಗಳನ್ನು ಮೀರಿ‌ ಆಕೆ ಸಾಧನೆಯ ಮೆಟ್ಟಿಲು ಏರುತ್ತಾಳೆ. ಈ ಎಲ್ಲ ವಿವರಗಳನ್ನು ಎಳೆ ಎಳೆಯಾಗಿ ತೆರೆದಿಡಲಿದೆ ‘ಸಹಾರಾ’ ಸಿನಿಮಾ. ಆ ಕಾರಣದಿಂದ ಈ ಚಿತ್ರದ ಬಗ್ಗೆ ಸಿನಿ‌ಪ್ರೇಮಿಗಳಲ್ಲಿ ಕೌತುಕ ಮೂಡಿದೆ.

ಗಣೇಶ್​ ಬಿಡುಗಡೆ ಮಾಡಿದ ಸಾಂಗ್​ ಸದ್ದು ಮಾಡಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ‘ಸಹಾರಾ’ ಸಿನಿಮಾಗೆ ಮಂಜೇಶ್ ಭಗವತ್ ಅವರು ನಿರ್ದೇಶನ ಮಾಡಿದ್ದಾರೆ. ಅಂಕುಶ್ ರಜತ್ ಅವರು ವಿಲನ್​ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೂರಜ್ ಜೋಯಿಸ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಆಂಟೊನಿ ರುತ್ ವಿನ್ಸೆಂಟ್ ಅವರು ಮುಖ್ಯ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ವಿಜಯ್ ಎಂ. ಕುಮಾರ್ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: ಕನ್ನಡದ ‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ ಮಾಡಿದ ಕ್ರಿಕೆಟರ್​ ಕೃಷ್ಣಪ್ಪ ಗೌತಮ್

‘ಸಹಾರಾ’ ಸಿನಿಮಾಗೆ ಅನೇಕರ ಬೆಂಬಲ ಸಿಕ್ಕಿದೆ. ಈ ಮೊದಲು ಕ್ರಿಕೆಟರ್​ ಕೃಷ್ಣಪ್ಪ ಗೌತಮ್ ಅವರು ಈ ಚಿತ್ರದ ಟ್ರೇಲರ್​ ರಿಲೀಸ್​ ಮಾಡಿ ಶುಭ ಹಾರೈಸಿದ್ದರು. ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಡಿಜಿಟಲ್​ನಲ್ಲಿ ಟ್ರೇಲರ್​ ಅನಾವರಣ ಮಾಡಿದ್ದರು. ‘ಮಾ ಕ್ರಿಯೆಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದ್ದು, ಎಂ. ಗೌಡ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್