‘ಸಹಾರಾ’ ಚಿತ್ರದ ಹಾಡು ಬಿಡುಗಡೆ ಮಾಡಿದ ನಟ ಗಣೇಶ್​; ಜೂ.7ಕ್ಕೆ ಸಿನಿಮಾ ರಿಲೀಸ್

ಈ ವಾರ (ಜೂನ್​ 7) ‘ಸಹಾರಾ’ ಸಿನಿಮಾ ರಿಲೀಸ್​ ಆಗುತ್ತಿದೆ. ಇದರಲ್ಲಿ ಸಾರಿಕಾ ರಾವ್​ ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಮಂಜೇಶ್ ಭಗವತ್ ಅವರು ನಿರ್ದೇಶನ ಮಾಡಿದ್ದಾರೆ. ಖ್ಯಾತ ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ‘ಸಹಾರಾ’ ಸಿನಿಮಾದ ಒಂದು ಹಾಡನ್ನು ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.

‘ಸಹಾರಾ’ ಚಿತ್ರದ ಹಾಡು ಬಿಡುಗಡೆ ಮಾಡಿದ ನಟ ಗಣೇಶ್​; ಜೂ.7ಕ್ಕೆ ಸಿನಿಮಾ ರಿಲೀಸ್
ಗೋಲ್ಡನ್​ ಸ್ಟಾರ್​ ಗಣೇಶ್​, ಸಾರಿಕಾ ರಾವ್​, ಮಂಜೇಶ್ ಭಗವತ್

Updated on: Jun 06, 2024 | 2:50 PM

ಕೆಲವು ಕಾರಣಗಳಿಂದ ‘ಸಹಾರಾ’ ಸಿನಿಮಾ (Sahara Movie) ಮೇಲೆ ನಿರೀಕ್ಷೆ ಮೂಡಿದೆ. ಕನ್ನಡದ ಈ ಸಿನಿಮಾದಲ್ಲಿ ಕ್ರೀಡಾ ಆಧಾರಿತ ಕಥೆ ಇದೆ. ಜೂನ್ 7ರಂದು ಈ ಸಿನಿಮಾ ತೆರೆ ಕಾಣಲಿದೆ. ‘ಸಹಾರಾ’ ಸಿನಿಮಾದಲ್ಲಿ ಸಾರಿಕಾ ರಾವ್ (Sarika Rao) ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇದು ಕನ್ನಡ ಚಿತ್ರರಂಗದಲ್ಲಿ ಒಂದು ಹೊಸ ಪ್ರಯತ್ನ ಎಂದರೆ ತಪ್ಪಿಲ್ಲ. ಯಾಕೆಂದರೆ, ‘ಸಹಾರಾ’ ಸಿನಿಮಾದಲ್ಲಿ ಮಹಿಳಾ ಕ್ರಿಕೆಟರ್​ ಕುರಿತಾದ ಕಥೆ ಇದೆ. ಸ್ಯಾಂಡಲ್​ವುಡ್​ನಲ್ಲಿ ಈ ರೀತಿಯ ವಸ್ತು ವಿಷಯ ಇಟ್ಟುಕೊಂಡ ಬಂದ ಮೊದಲ ಸಿನಿಮಾ ಇದು. ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅವರು ಈ ಸಿನಿಮಾದ ಹಾಡೊಂದನ್ನು ರಿಲೀಸ್​ ಮಾಡಿ, ಶುಭ ಕೋರಿದ್ದಾರೆ.

ಈ ಸಿನಿಮಾದ ಕಥೆಯ ಬಗ್ಗೆ ಚಿತ್ರತಂಡ ಮಾಹಿತಿ ನೀಡಿದೆ. ಮಂಡ್ಯದ ಹುಡುಗಿಯೊಬ್ಬಳು ಕ್ರಿಕೆಟ್ ಆಟಗಾರ್ತಿ ಆಗುವ‌ ಕನಸನ್ನು ಕಾಣುತ್ತಾಳೆ. ಆ ಕನಸನ್ನು ನನಸಾಗಿಸುವ ಪ್ರಯತ್ನದಲ್ಲಿ ಆಕೆಗೆ ಕೆಲವು ಅಡೆತಡೆಗಳು ಎದುರಾಗುತ್ತವೆ. ಅವುಗಳನ್ನು ಮೀರಿ‌ ಆಕೆ ಸಾಧನೆಯ ಮೆಟ್ಟಿಲು ಏರುತ್ತಾಳೆ. ಈ ಎಲ್ಲ ವಿವರಗಳನ್ನು ಎಳೆ ಎಳೆಯಾಗಿ ತೆರೆದಿಡಲಿದೆ ‘ಸಹಾರಾ’ ಸಿನಿಮಾ. ಆ ಕಾರಣದಿಂದ ಈ ಚಿತ್ರದ ಬಗ್ಗೆ ಸಿನಿ‌ಪ್ರೇಮಿಗಳಲ್ಲಿ ಕೌತುಕ ಮೂಡಿದೆ.

ಗಣೇಶ್​ ಬಿಡುಗಡೆ ಮಾಡಿದ ಸಾಂಗ್​ ಸದ್ದು ಮಾಡಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ‘ಸಹಾರಾ’ ಸಿನಿಮಾಗೆ ಮಂಜೇಶ್ ಭಗವತ್ ಅವರು ನಿರ್ದೇಶನ ಮಾಡಿದ್ದಾರೆ. ಅಂಕುಶ್ ರಜತ್ ಅವರು ವಿಲನ್​ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೂರಜ್ ಜೋಯಿಸ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಆಂಟೊನಿ ರುತ್ ವಿನ್ಸೆಂಟ್ ಅವರು ಮುಖ್ಯ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ವಿಜಯ್ ಎಂ. ಕುಮಾರ್ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: ಕನ್ನಡದ ‘ಸಹಾರಾ’ ಸಿನಿಮಾ ಟ್ರೇಲರ್​ ಬಿಡುಗಡೆ ಮಾಡಿದ ಕ್ರಿಕೆಟರ್​ ಕೃಷ್ಣಪ್ಪ ಗೌತಮ್

‘ಸಹಾರಾ’ ಸಿನಿಮಾಗೆ ಅನೇಕರ ಬೆಂಬಲ ಸಿಕ್ಕಿದೆ. ಈ ಮೊದಲು ಕ್ರಿಕೆಟರ್​ ಕೃಷ್ಣಪ್ಪ ಗೌತಮ್ ಅವರು ಈ ಚಿತ್ರದ ಟ್ರೇಲರ್​ ರಿಲೀಸ್​ ಮಾಡಿ ಶುಭ ಹಾರೈಸಿದ್ದರು. ಈ ಚಿತ್ರಕ್ಕೆ ಕಿಚ್ಚ ಸುದೀಪ್ ನಿರೂಪಣೆ ಮಾಡಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಡಿಜಿಟಲ್​ನಲ್ಲಿ ಟ್ರೇಲರ್​ ಅನಾವರಣ ಮಾಡಿದ್ದರು. ‘ಮಾ ಕ್ರಿಯೆಷನ್ಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದ್ದು, ಎಂ. ಗೌಡ ಬಂಡವಾಳ ಹೂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us