AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’: ಮೈಸೂರಿನಲ್ಲಿ ಹಾಡು ಬಿಡುಗಡೆ

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ರೊಮ್ಯಾಂಟಿಕ್, ಕೌಟುಂಬಿಕ ಸಿನಿಮಾ ‘ಕೃಷ್ಣಂ ಪ್ರಣಯಂ ಸಖಿ’ ಬಿಡುಗಡೆಗೆ ಸಜ್ಜಾಗಿದ್ದು, ಸಿನಿಮಾದ ಮೊದಲ ಹಾಡು ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ ಬಿಡುಗಡೆ ಆಗಲಿದೆ.

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’: ಮೈಸೂರಿನಲ್ಲಿ ಹಾಡು ಬಿಡುಗಡೆ
ಗಣೇಶ್
ಮಂಜುನಾಥ ಸಿ.
|

Updated on: May 23, 2024 | 10:45 PM

Share

ಗೋಲ್ಡನ್ ಸ್ಟಾರ್ ಗಣೇಶ್ (Ganesh) ‘ಕೃಷ್ಣಂ ಪ್ರಣಯ ಸಖಿ’ ಹೆಸರಿನ ರೊಮ್ಯಾಂಟಿಕ್ ಕೌಟುಂಬಿಕ ಕತೆಯೊಂದಿಗೆ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಸಿನಿಮಾ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಬಿಡುಗಡೆ ಆಗಿತ್ತು. ಇದೀಗ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾನಲ್ಲಿ ಗಣೇಶ್ ನಟಿಸಿದ್ದು, ಸಿನಿಮಾದ ಮೊದಲ ಹಾಡು ಮೈಸೂರಿನಲ್ಲಿ ಬಿಡುಗಡೆ ಆಗಲಿದೆ. ಗಣೇಶ್ ಸಿನಿಮಾದ ಹಾಡುಗಳು ತಮ್ಮ ಮಧುರತೆಯಿಂದ ಗಮನ ಸೆಳೆಯುತ್ತವೆ, ಈ ಸಿನಿಮಾದ ಹಾಡುಗಳು ಸಹ ಗಣೇಶ್​ರ ಹಿಟ್ ಹಾಡುಗಳ ಪಟ್ಟಿ ಸೇರುವ ಭರವಸೆ ಚಿತ್ರತಂಡದ್ದು.

ನಿರ್ದೇಶಕ ಶ್ರೀನಿವಾಸರಾಜು ‘ಕೃಷ್ಣ ಪ್ರಣಯ ಸಖಿ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಪೋಸ್ಟರ್ ಗಳು ಈಗಾಗಲೇ ಬಿಡುಗಡೆ ಆಗಿ ಮೆಚ್ಚುಗೆ ಗಳಿಸಿವೆ. ಇದೀಗ ಈ ಸಿನಿಮಾದ ಮೊದಲ ಹಾಡು ಮೇ 25 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಈ ಸಿನಿಮಾಕ್ಕೆ ಸಂಗೀತ ನೀಡಿದ್ದು, ಸಿನಿಮಾದ ಆರು ಮಧುರವಾದ ಹಾಡುಗಳಿವೆ. ಮೇ 25ಕ್ಕೆ ಬಿಡುಗಡೆ ಆಗಲಿರುವ ಹಾಡನ್ನು ನಿಶಾನ್ ರಾಯ್ ಅವರು ಬರೆದಿದ್ದು, ಜನಪ್ರಿಯ ಗಾಯಕ ಚಂದನ್ ಶೆಟ್ಟಿ ಹಾಡಿದ್ದಾರೆ. ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಹ ನೀಡಲಾಗುತ್ತಿದೆ.

ಇದನ್ನೂ ಓದಿ:ಅನಿಲ್ ಕುಂಬ್ಳೆ ಆತಿಥ್ಯಕ್ಕೆ ಮನಸೋತ ಗೋಲ್ಡನ್ ಸ್ಟಾರ್ ಕುಟುಂಬ

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಅಡಿಯಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ವಿಯೆಟ್ನಾಂ ಸೇರಿದಂತೆ ಹಲವು ಸುಂದರವಾದ ತಾಣಗಳಲ್ಲಿ ಚಿತ್ರತಂಡ ಚಿತ್ರೀಕರಣ ಮಾಡಿದೆ. ಸದ್ಯದಲ್ಲೇ ಸಿನಿಮಾವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ‌.

“ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ 41 ನೇ ಸಿನಿಮಾ. ಗಣೇಶ್ ಎದುರು ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ