‘ಗರುಡ ಪುರಾಣ’ ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

Garuda Purana: ಮರ್ಡರ್ ಮಿಸ್ಟರ್ ಕತೆಯುಳ್ಳ 'ಗರುಡ ಪುರಾಣ' ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಗರುಡ ಪುರಾಣ' ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್
ಗರುಡ ಪುರಾಣ
Follow us
|

Updated on: Sep 26, 2023 | 8:54 PM

ಒಟಿಟಿಗಳ (OTT) ಮೂಲಕ ಕಂಟೆಂಟ್ ವೀಕ್ಷಣೆ ಹೆಚ್ಚಾದಷ್ಟು, ಹೆಚ್ಚು ಹೆಚ್ಚು ಥ್ರಿಲ್ಲರ್, ಮರ್ಡರ್ ಮಿಸ್ಟರಿ ಕತೆಗಳು ಬರಲಾರಂಭಿಸಿವೆ. ಒಟಿಟಿಗಳಲ್ಲಿಯಂತೂ ಮರ್ಡರ್ ಮಿಸ್ಟರಿ ಸಿನಿಮಾ, ವೆಬ್ ಸರಣಿಗಳು ತುಂಬಿ ಹೋಗಿವೆ. ಈಗ ಕನ್ನಡದಲ್ಲಿ ಮತ್ತೊಂದು ಮರ್ಡರ್ ಮಿಸ್ಟರಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸಿನಿಮಾದ ಹೆಸರು ‘ಗರುಡ ಪುರಾಣ’. ಸಿನಿಮಾದ ಟೀಸರ್ ಅನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ.

ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ಅವರುಗಳು 27 ಫ್ರೇಮ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ‘ಗರುಡ ಪುರಾಣ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಮಂಜುನಾಥ್ ಬಿ ನಾಗಬಾ ಕತೆ, ಚಿತ್ರಕಥೆ ರಚಿಸಿ ನಿರ್ದೇಶನ ಮಾಡಿದ್ದಾರೆ. ಸಂಕಲನದ ಜವಾಬ್ದಾರಿಯನ್ನು ಅವರೇ ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್, ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ:ಗಮನ ಸೆಳೆಯುತ್ತಿದೆ ಅಲೆಕ್ಸಾ ಟೀಸರ್: ಖಡಕ್ ಪಾತ್ರದಲ್ಲಿ ಅದಿತಿ ಪ್ರಭುದೇವ

ತಮ್ಮ ಬಗ್ಗೆ ಹಾಗೂ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಮಂಜುನಾಥ್ ನಾಗಬಾ, ”ಕಾಂತಾರ” ಸೇರಿದಂತೆ ಒಟ್ಟು 18 ಸಿನಿಮಾಗಳಿಗೆ ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡಿದ್ದೇನೆ. “ಕಾಂತಾರ” ಸಿನಿಮಾ ನನಗೆ ಒಳ್ಳೆಯ ಗುರುತು ತಂದುಕೊಟ್ಟ ಸಿನಿಮಾ. ರಿಷಬ್ ಶೆಟ್ಟಿ ಅವರಿಗೆ ಋಣಿಯಾಗಿರುತ್ತೇನೆ. ಈಗ ನಿರ್ದೇಶಿಸಿರುವ “ಗರುಡ ಪುರಾಣ” ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು ಎಂಬ ಅಂಶ ನಮ್ಮ ಸಿನಿಮಾದಲ್ಲಿದೆ. ಹಾಗಾಗಿಯೇ “ಗರುಡ ಪುರಾಣ” ಎಂದು ಸಿನಿಮಾಕ್ಕೆ ಟೈಟಲ್ ನೀಡಿದ್ದೇವೆ‌. ಸಿನಿಮಾದ ಕತೆ ಮೂರು ಆಯಾಮಗಳಲ್ಲಿ ನಡೆಯುತ್ತದೆ. ಸಿನಿಮಾದ ಶೂಟಿಂಗ್ ಮುಗಿದಿದೆ. ಬಿಡುಗಡೆಗೆ ತಯಾರಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ನಮಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಿರುವ ರಾಜು ಗೌಡ ಹಾಗೂ ತಿಪ್ಪರಾಜು ಅವರಿಗೆ ಧನ್ಯವಾದ ಎಂದರು. ಸಿನಿಮಾದ ನಾಯಕನಾಗಿಯೂ ಮಂಜುನಾಥ್ ನಟಿಸಿದ್ದಾರೆ.

ಸಿನಿಮಾದಲ್ಲಿ ನಾಯಕಿಯಾಗಿ ದಿಶಾ ಶೆಟ್ಟಿ ನಟಿಸಿದ್ದಾರೆ. “ಭಜರಂಗಿ” ಖ್ಯಾತಿಯ ಚೆಲುವರಾಜು ಸಹ ಸಿನಿಮಾದಲ್ಲಿದ್ದಾರೆ.  ಸಿನಿಮಾದ ಟೀಸರ್ ಕುತೂಹಲಕಾರಿಯಾಗಿದೆ. ಒಬ್ಬರ ಹಿಂದೊಬ್ಬರಂತೆ ಯುವತಿಯರು ಕಾಣೆಯಾಗುತ್ತಿರುತ್ತಾರೆ. ಅವರನ್ನು ಯಾರೋ ಅಪಹರಿಸಿ ಕೊಲೆ ಮಾಡುತ್ತಿರುತ್ತಾರೆ. ಈ ಕೊಲೆಗಳ ರಹಸ್ಯವನ್ನು ಬೇದಿಸಲು ಪೊಲೀಸರು ಯತ್ನಿಸುತ್ತಿರುತ್ತಾರೆ. ಈ ಕೊಲೆಗಳನ್ನು ಯಾರು ಮಾಡುತ್ತಿದ್ದಾರೆ, ಯಾಕೆ ಮಾಡುತ್ತಿದ್ದಾರೆ? ಅವರ ಉದ್ದೇಶವೇನು? ಯಾಕೆ ನಿರ್ದಿಷ್ಟ ಯುವತಿಯರನ್ನೇ ಕೊಲೆ ಮಾಡಲು ಆರಿಸಿಕೊಳ್ಳುತ್ತಿದ್ದಾರೆ ಎಂಬುದೇ ಸಿನಿಮಾದ ಕತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ