AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರುಡ ಪುರಾಣ’ ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

Garuda Purana: ಮರ್ಡರ್ ಮಿಸ್ಟರ್ ಕತೆಯುಳ್ಳ 'ಗರುಡ ಪುರಾಣ' ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

'ಗರುಡ ಪುರಾಣ' ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್
ಗರುಡ ಪುರಾಣ
ಮಂಜುನಾಥ ಸಿ.
|

Updated on: Sep 26, 2023 | 8:54 PM

Share

ಒಟಿಟಿಗಳ (OTT) ಮೂಲಕ ಕಂಟೆಂಟ್ ವೀಕ್ಷಣೆ ಹೆಚ್ಚಾದಷ್ಟು, ಹೆಚ್ಚು ಹೆಚ್ಚು ಥ್ರಿಲ್ಲರ್, ಮರ್ಡರ್ ಮಿಸ್ಟರಿ ಕತೆಗಳು ಬರಲಾರಂಭಿಸಿವೆ. ಒಟಿಟಿಗಳಲ್ಲಿಯಂತೂ ಮರ್ಡರ್ ಮಿಸ್ಟರಿ ಸಿನಿಮಾ, ವೆಬ್ ಸರಣಿಗಳು ತುಂಬಿ ಹೋಗಿವೆ. ಈಗ ಕನ್ನಡದಲ್ಲಿ ಮತ್ತೊಂದು ಮರ್ಡರ್ ಮಿಸ್ಟರಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸಿನಿಮಾದ ಹೆಸರು ‘ಗರುಡ ಪುರಾಣ’. ಸಿನಿಮಾದ ಟೀಸರ್ ಅನ್ನು ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ.

ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ಅವರುಗಳು 27 ಫ್ರೇಮ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ‘ಗರುಡ ಪುರಾಣ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಮಂಜುನಾಥ್ ಬಿ ನಾಗಬಾ ಕತೆ, ಚಿತ್ರಕಥೆ ರಚಿಸಿ ನಿರ್ದೇಶನ ಮಾಡಿದ್ದಾರೆ. ಸಂಕಲನದ ಜವಾಬ್ದಾರಿಯನ್ನು ಅವರೇ ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿತ್ತು. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್, ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ:ಗಮನ ಸೆಳೆಯುತ್ತಿದೆ ಅಲೆಕ್ಸಾ ಟೀಸರ್: ಖಡಕ್ ಪಾತ್ರದಲ್ಲಿ ಅದಿತಿ ಪ್ರಭುದೇವ

ತಮ್ಮ ಬಗ್ಗೆ ಹಾಗೂ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಮಂಜುನಾಥ್ ನಾಗಬಾ, ”ಕಾಂತಾರ” ಸೇರಿದಂತೆ ಒಟ್ಟು 18 ಸಿನಿಮಾಗಳಿಗೆ ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡಿದ್ದೇನೆ. “ಕಾಂತಾರ” ಸಿನಿಮಾ ನನಗೆ ಒಳ್ಳೆಯ ಗುರುತು ತಂದುಕೊಟ್ಟ ಸಿನಿಮಾ. ರಿಷಬ್ ಶೆಟ್ಟಿ ಅವರಿಗೆ ಋಣಿಯಾಗಿರುತ್ತೇನೆ. ಈಗ ನಿರ್ದೇಶಿಸಿರುವ “ಗರುಡ ಪುರಾಣ” ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇ ಬೇಕು ಎಂಬ ಅಂಶ ನಮ್ಮ ಸಿನಿಮಾದಲ್ಲಿದೆ. ಹಾಗಾಗಿಯೇ “ಗರುಡ ಪುರಾಣ” ಎಂದು ಸಿನಿಮಾಕ್ಕೆ ಟೈಟಲ್ ನೀಡಿದ್ದೇವೆ‌. ಸಿನಿಮಾದ ಕತೆ ಮೂರು ಆಯಾಮಗಳಲ್ಲಿ ನಡೆಯುತ್ತದೆ. ಸಿನಿಮಾದ ಶೂಟಿಂಗ್ ಮುಗಿದಿದೆ. ಬಿಡುಗಡೆಗೆ ತಯಾರಾಗಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ನಮಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡುತ್ತಿರುವ ರಾಜು ಗೌಡ ಹಾಗೂ ತಿಪ್ಪರಾಜು ಅವರಿಗೆ ಧನ್ಯವಾದ ಎಂದರು. ಸಿನಿಮಾದ ನಾಯಕನಾಗಿಯೂ ಮಂಜುನಾಥ್ ನಟಿಸಿದ್ದಾರೆ.

ಸಿನಿಮಾದಲ್ಲಿ ನಾಯಕಿಯಾಗಿ ದಿಶಾ ಶೆಟ್ಟಿ ನಟಿಸಿದ್ದಾರೆ. “ಭಜರಂಗಿ” ಖ್ಯಾತಿಯ ಚೆಲುವರಾಜು ಸಹ ಸಿನಿಮಾದಲ್ಲಿದ್ದಾರೆ.  ಸಿನಿಮಾದ ಟೀಸರ್ ಕುತೂಹಲಕಾರಿಯಾಗಿದೆ. ಒಬ್ಬರ ಹಿಂದೊಬ್ಬರಂತೆ ಯುವತಿಯರು ಕಾಣೆಯಾಗುತ್ತಿರುತ್ತಾರೆ. ಅವರನ್ನು ಯಾರೋ ಅಪಹರಿಸಿ ಕೊಲೆ ಮಾಡುತ್ತಿರುತ್ತಾರೆ. ಈ ಕೊಲೆಗಳ ರಹಸ್ಯವನ್ನು ಬೇದಿಸಲು ಪೊಲೀಸರು ಯತ್ನಿಸುತ್ತಿರುತ್ತಾರೆ. ಈ ಕೊಲೆಗಳನ್ನು ಯಾರು ಮಾಡುತ್ತಿದ್ದಾರೆ, ಯಾಕೆ ಮಾಡುತ್ತಿದ್ದಾರೆ? ಅವರ ಉದ್ದೇಶವೇನು? ಯಾಕೆ ನಿರ್ದಿಷ್ಟ ಯುವತಿಯರನ್ನೇ ಕೊಲೆ ಮಾಡಲು ಆರಿಸಿಕೊಳ್ಳುತ್ತಿದ್ದಾರೆ ಎಂಬುದೇ ಸಿನಿಮಾದ ಕತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?