AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garuda Ram Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್​’ ಗರುಡ ರಾಮ್​’; ಬಹುಭಾಷಾ ನಟನಾಗಿ ಬೆಳೆದ ಕನ್ನಡದ ಖಡಕ್​ ವಿಲನ್​

KGF Garuda Ram | Ramachandra Raju: ಅನೇಕ ಬಿಗ್​ ಬಜೆಟ್​ ಚಿತ್ರಗಳಿಗೆ ಖಳನಟನಾಗಿ ಗರುಡ ರಾಮ್​ ಆಯ್ಕೆ ಆಗುತ್ತಿದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

Garuda Ram Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್​’ ಗರುಡ ರಾಮ್​’; ಬಹುಭಾಷಾ ನಟನಾಗಿ ಬೆಳೆದ ಕನ್ನಡದ ಖಡಕ್​ ವಿಲನ್​
ಗರುಡ ರಾಮ್
TV9 Web
| Edited By: |

Updated on: Jul 07, 2022 | 9:46 AM

Share

ಒಂದೇ ಒಂದು ‘ಕೆಜಿಎಫ್​’ (KGF Chapter 2) ಸಿನಿಮಾದಿಂದ ಅನೇಕರ ಬದುಕು ಬದಲಾಯಿತು. ಆ ಚಿತ್ರದಲ್ಲಿ ನಟಿಸಿದ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದರು. ಅದರಲ್ಲಿ ಕೆಲಸ ಮಾಡಿದ ತಂತ್ರಜ್ಞರು ಕೂಡ ಗಮನ ಸೆಳೆದರು. ನಾಯಕ ಯಶ್​, ನಾಯಕಿ ಶ್ರೀನಿಧಿ ಶೆಟ್ಟಿ ಮಾತ್ರವಲ್ಲದೇ ಬೇರೆ ಪಾತ್ರಧಾರಿಗಳ ವೃತ್ತಿಜೀವನಕ್ಕೂ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದಿಂದ ದೊಡ್ಡ ಮೈಲೇಜ್​ ಸಿಕ್ಕಿತು. ಆ ಪೈಕಿ ಗರುಡ ಪಾತ್ರ ಮಾಡಿದ ನಟ ರಾಮಚಂದ್ರ ರಾಜು ಸಿಕ್ಕಾಪಟ್ಟೆ ಶೈನ್​ ಆದರು. ಆ ಸಿನಿಮಾ ಬಿಡುಗಡೆ ಆದ ಬಳಿಕ ಗರುಡ ರಾಮ್​ (Garuda Ram) ಎಂದೇ ಅವರು ಫೇಮಸ್​ ಆದರು. ಇಂದು (ಜುಲೈ 7) ಅವರಿಗೆ ಜನ್ಮದಿನದ (Garuda Ram Birthday) ಸಂಭ್ರಮ. ಆ ಪ್ರಯುಕ್ತ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಕೂಡ ಶುಭ ಕೋರುತ್ತಿದ್ದಾರೆ.

ಮೊದಲ ಸಿನಿಮಾದಲ್ಲಿಯೇ ಪ್ಯಾನ್​ ಇಂಡಿಯಾ ಮಟ್ಟದ ಯಶಸ್ಸು ಸಿಗುವುದು ಎಂದರೆ ತಮಾಷೆಯ ಮಾತಲ್ಲ. ಅದಕ್ಕೆ ಪರಿಶ್ರಮದ ಜೊತೆಗೆ ಅದೃಷ್ಟವೂ ಬೇಕು. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ 2018ರಲ್ಲಿ ತೆರೆಕಂಡಿತು. ಅದು ರಾಮಚಂದ್ರ ರಾಜು ಅವರ ಚೊಚ್ಚಲ ಸಿನಿಮಾ. ಅವರು ಮಾಡಿದ್ದ ಗರುಡ ಪಾತ್ರಕ್ಕೆ ಸಖತ್ ತೂಕ ಇತ್ತು. ತಮ್ಮ ಖಡಕ್​ ಲುಕ್​ನಿಂದ ಆ ಪಾತ್ರಕ್ಕೆ ಅವರು ಜೀವ ತುಂಬಿದರು. ಇಡೀ ನರಾಚಿಯನ್ನು ಗಡಗಡ ನಡುಗಿಸುವಂತಹ ಆ ಪಾತ್ರವನ್ನು ಅವರು ಜೀವಿಸಿದ್ದರು ಎಂದೇ ಹೇಳಬೇಕು.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ಗೆಲುವಿನಿಂದಾಗಿ ಗರುಡ ರಾಮ್​ ಅವರಿಗೆ ಹಲವು ಅವಕಾಶಗಳು ಹರಿದುಬರಲು ಆರಂಭಿಸಿದವು. ಪರಿಣಾಮವಾಗಿ ಅವರು ಬಹುಭಾಷಾ ನಟನಾಗಿ ಗುರುತಿಸಿಕೊಂಡರು. ತಮಿಳು, ತೆಲುಗು, ಮಲಯಾಳಂ ಭಾಷೆಯ ಸಿನಿಮಾಗಳಲ್ಲಿ ಅವರು ನಟಿಸಿದರು. ಅನೇಕ ಬಿಗ್​ ಬಜೆಟ್​ ಚಿತ್ರಗಳಿಗೆ ಅವರು ಖಳನಟನಾಗಿ ಆಯ್ಕೆ ಆಗುತ್ತಿದ್ದಾರೆ.

ಇದನ್ನೂ ಓದಿ
Image
‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ
Image
‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​
Image
1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿರುವ ‘ಜನ ಗಣ ಮನ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇದೆ. ಆ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ. ಈ ಸಿನಿಮಾದಲ್ಲಿ ಗರುಡ ರಾಮ್​ ಕೂಡ ನಟಿಸುತ್ತಿದ್ದಾರೆ. ‘ಕೆಜಿಎಫ್​’ ರೀತಿಯೇ ‘ಜನ ಗಣ ಮನ’ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಗರುಡ ರಾಮ್​ ಅಬ್ಬರಿಸಲಿ, ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಇದನ್ನೂ ಓದಿ: 10 ತಲೆ ಹೊತ್ತು ಬಂದ ‘ನ್ಯಾನೋ ನಾರಾಯಣಪ್ಪ’; ಹೀರೋ ಆದ ‘ಕೆಜಿಎಫ್​’ ತಾತನ ಫಸ್ಟ್​ ಲುಕ್​ ಇಲ್ಲಿದೆ

‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?