AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Garuda Ram Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್​’ ಗರುಡ ರಾಮ್​’; ಬಹುಭಾಷಾ ನಟನಾಗಿ ಬೆಳೆದ ಕನ್ನಡದ ಖಡಕ್​ ವಿಲನ್​

KGF Garuda Ram | Ramachandra Raju: ಅನೇಕ ಬಿಗ್​ ಬಜೆಟ್​ ಚಿತ್ರಗಳಿಗೆ ಖಳನಟನಾಗಿ ಗರುಡ ರಾಮ್​ ಆಯ್ಕೆ ಆಗುತ್ತಿದ್ದಾರೆ. ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

Garuda Ram Birthday: ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕೆಜಿಎಫ್​’ ಗರುಡ ರಾಮ್​’; ಬಹುಭಾಷಾ ನಟನಾಗಿ ಬೆಳೆದ ಕನ್ನಡದ ಖಡಕ್​ ವಿಲನ್​
ಗರುಡ ರಾಮ್
TV9 Web
| Edited By: |

Updated on: Jul 07, 2022 | 9:46 AM

Share

ಒಂದೇ ಒಂದು ‘ಕೆಜಿಎಫ್​’ (KGF Chapter 2) ಸಿನಿಮಾದಿಂದ ಅನೇಕರ ಬದುಕು ಬದಲಾಯಿತು. ಆ ಚಿತ್ರದಲ್ಲಿ ನಟಿಸಿದ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದರು. ಅದರಲ್ಲಿ ಕೆಲಸ ಮಾಡಿದ ತಂತ್ರಜ್ಞರು ಕೂಡ ಗಮನ ಸೆಳೆದರು. ನಾಯಕ ಯಶ್​, ನಾಯಕಿ ಶ್ರೀನಿಧಿ ಶೆಟ್ಟಿ ಮಾತ್ರವಲ್ಲದೇ ಬೇರೆ ಪಾತ್ರಧಾರಿಗಳ ವೃತ್ತಿಜೀವನಕ್ಕೂ ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದಿಂದ ದೊಡ್ಡ ಮೈಲೇಜ್​ ಸಿಕ್ಕಿತು. ಆ ಪೈಕಿ ಗರುಡ ಪಾತ್ರ ಮಾಡಿದ ನಟ ರಾಮಚಂದ್ರ ರಾಜು ಸಿಕ್ಕಾಪಟ್ಟೆ ಶೈನ್​ ಆದರು. ಆ ಸಿನಿಮಾ ಬಿಡುಗಡೆ ಆದ ಬಳಿಕ ಗರುಡ ರಾಮ್​ (Garuda Ram) ಎಂದೇ ಅವರು ಫೇಮಸ್​ ಆದರು. ಇಂದು (ಜುಲೈ 7) ಅವರಿಗೆ ಜನ್ಮದಿನದ (Garuda Ram Birthday) ಸಂಭ್ರಮ. ಆ ಪ್ರಯುಕ್ತ ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಕೂಡ ಶುಭ ಕೋರುತ್ತಿದ್ದಾರೆ.

ಮೊದಲ ಸಿನಿಮಾದಲ್ಲಿಯೇ ಪ್ಯಾನ್​ ಇಂಡಿಯಾ ಮಟ್ಟದ ಯಶಸ್ಸು ಸಿಗುವುದು ಎಂದರೆ ತಮಾಷೆಯ ಮಾತಲ್ಲ. ಅದಕ್ಕೆ ಪರಿಶ್ರಮದ ಜೊತೆಗೆ ಅದೃಷ್ಟವೂ ಬೇಕು. ‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ 2018ರಲ್ಲಿ ತೆರೆಕಂಡಿತು. ಅದು ರಾಮಚಂದ್ರ ರಾಜು ಅವರ ಚೊಚ್ಚಲ ಸಿನಿಮಾ. ಅವರು ಮಾಡಿದ್ದ ಗರುಡ ಪಾತ್ರಕ್ಕೆ ಸಖತ್ ತೂಕ ಇತ್ತು. ತಮ್ಮ ಖಡಕ್​ ಲುಕ್​ನಿಂದ ಆ ಪಾತ್ರಕ್ಕೆ ಅವರು ಜೀವ ತುಂಬಿದರು. ಇಡೀ ನರಾಚಿಯನ್ನು ಗಡಗಡ ನಡುಗಿಸುವಂತಹ ಆ ಪಾತ್ರವನ್ನು ಅವರು ಜೀವಿಸಿದ್ದರು ಎಂದೇ ಹೇಳಬೇಕು.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾದ ಗೆಲುವಿನಿಂದಾಗಿ ಗರುಡ ರಾಮ್​ ಅವರಿಗೆ ಹಲವು ಅವಕಾಶಗಳು ಹರಿದುಬರಲು ಆರಂಭಿಸಿದವು. ಪರಿಣಾಮವಾಗಿ ಅವರು ಬಹುಭಾಷಾ ನಟನಾಗಿ ಗುರುತಿಸಿಕೊಂಡರು. ತಮಿಳು, ತೆಲುಗು, ಮಲಯಾಳಂ ಭಾಷೆಯ ಸಿನಿಮಾಗಳಲ್ಲಿ ಅವರು ನಟಿಸಿದರು. ಅನೇಕ ಬಿಗ್​ ಬಜೆಟ್​ ಚಿತ್ರಗಳಿಗೆ ಅವರು ಖಳನಟನಾಗಿ ಆಯ್ಕೆ ಆಗುತ್ತಿದ್ದಾರೆ.

ಇದನ್ನೂ ಓದಿ
Image
‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ
Image
‘ಕೆಜಿಎಫ್​ 3’ ಚಿತ್ರದಲ್ಲಿ ಹೃತಿಕ್​ ರೋಷನ್​ ಇರ್ತಾರಾ? ಊರ ತುಂಬ ಹಬ್ಬಿದೆ ಹೊಸ ಗಾಸಿಪ್​
Image
1960ರಲ್ಲೇ ಪ್ಯಾನ್ ಇಂಡಿಯಾ ಸಿನಿಮಾ ಬಂದಿತ್ತು, ‘ಕೆಜಿಎಫ್​’ ಏನೂ ಹೊಸದಲ್ಲ ಎಂದ ಕಮಲ್ ಹಾಸನ್
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಪುರಿ ಜಗನ್ನಾಥ್​ ನಿರ್ದೇಶನ ಮಾಡುತ್ತಿರುವ ‘ಜನ ಗಣ ಮನ’ ಸಿನಿಮಾದ ಮೇಲೆ ಭಾರಿ ನಿರೀಕ್ಷೆ ಇದೆ. ಆ ಚಿತ್ರಕ್ಕೆ ವಿಜಯ್​ ದೇವರಕೊಂಡ ಹೀರೋ. ಈ ಸಿನಿಮಾದಲ್ಲಿ ಗರುಡ ರಾಮ್​ ಕೂಡ ನಟಿಸುತ್ತಿದ್ದಾರೆ. ‘ಕೆಜಿಎಫ್​’ ರೀತಿಯೇ ‘ಜನ ಗಣ ಮನ’ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ. ಆ ಚಿತ್ರದ ಮೂಲಕ ಮತ್ತೆ ಗರುಡ ರಾಮ್​ ಅಬ್ಬರಿಸಲಿ, ಅವರಿಗೆ ಇನ್ನಷ್ಟು ಯಶಸ್ಸು ಸಿಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

ಇದನ್ನೂ ಓದಿ: 10 ತಲೆ ಹೊತ್ತು ಬಂದ ‘ನ್ಯಾನೋ ನಾರಾಯಣಪ್ಪ’; ಹೀರೋ ಆದ ‘ಕೆಜಿಎಫ್​’ ತಾತನ ಫಸ್ಟ್​ ಲುಕ್​ ಇಲ್ಲಿದೆ

‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ