AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGVV: ಗರುಡ ಗಮನ ವೃಷಭ ವಾಹನ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ರಾಜ್ ಬಿ. ಶೆಟ್ಟಿ

Garudagamana Vrishabhavahana ಚಿತ್ರದಲ್ಲಿ ರಾಜ್​.ಬಿ.ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ತೆರೆಯ ಮೇಲೆ ಯಾವ ರೀತಿಯ ಕಮಾಲ್ ಮಾಡಲಿದ್ದಾರೆ ಎಂದು ಕಾದುನೋಡಬೇಕಿದೆ.

GGVV: ಗರುಡ ಗಮನ ವೃಷಭ ವಾಹನ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಿದ ರಾಜ್ ಬಿ. ಶೆಟ್ಟಿ
ಗರುಡ ಗಮನ ವೃಷಭ ವಾಹನ ಚಿತ್ರದ ಪೋಸ್ಟರ್​
Skanda
| Edited By: |

Updated on: Feb 04, 2021 | 4:45 PM

Share

ಕನ್ನಡ ಚಿತ್ರರಂಗದಲ್ಲಿ ಒಂದೊಂದೇ ಸಿನಿಮಾಗಳು ತೆರೆ ಕಾಣಲು ಮುಹೂರ್ತ ನಿಗದಿಪಡಿಸಿಕೊಳ್ಳುತ್ತಿವೆ. ಕೊರೊನಾ (Corona) ನಂತರ ಮತ್ತೆ ಚಿತ್ರಮಂದಿರಗಳು ತುಂಬಿಕೊಳ್ಳುವ ಸೂಚನೆ ಸಿಕ್ಕಿದ್ದು, ಈಗ ಕರ್ನಾಟಕ ಸರ್ಕಾರವೂ ಶೇ. 100ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದೆ. ಇದೇ ಹೊತ್ತಿನಲ್ಲಿ ಕನ್ನಡದ ವಿಶಿಷ್ಟ ಪ್ರತಿಭೆ ಎಂದೇ ಗುರುತಿಸಿಕೊಂಡ ರಾಜ್​ ಬಿ. ಶೆಟ್ಟಿ ತಮ್ಮ ನೂತನ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಿದ್ದಾರೆ. ಕಳೆದ ಜೂನ್​ನಲ್ಲೇ ಬಿಡುಗಡೆಯಾಗಬೇಕಿದ್ದ ರಾಜ್​ ಬಿ. ಶೆಟ್ಟಿ (Raj B Shetty) ನಿರ್ದೇಶನದ ‘ಗರುಡಗಮನ ವೃಷಭವಾಹನ’ (Garudagamana Vrishabhavahana) ಚಿತ್ರ ಕೊರೊನಾ ದೆಸೆಯಿಂದ ಬಿಡುಗಡೆಯಾಗದೆ ಬಾಕಿ ಉಳಿದಿದ್ದು, ಇದೀಗ ಹೊಸ ದಿನಾಂಕ ನಿಗದಿಯಾಗಿದೆ.

ಈ ಕುರಿತು ಚಿತ್ರತಂಡ ಅಧಿಕೃತ ಘೋಷಣೆ ಮಾಡಿದ್ದು, ಜೂನ್ 4 ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದೆ. ಶಿವ ಮತ್ತು ಹರಿಯ ಪ್ರಪಂಚಕ್ಕೆ ಬರಲು ತಯಾರಾಗಿರಿ, ಮಂಗಳಾದೇವಿಗೆ ಸ್ವಾಗತ ಎಂದು ಪೋಸ್ಟ್ ಮಾಡಿರುವ ರಾಜ್​ ಬಿ.ಶೆಟ್ಟಿ ಚಿತ್ರದ ಕುರಿತು ಮತ್ತಷ್ಟು ಕುತೂಹಲ ಹುಟ್ಟುವಂತೆ ಮಾಡಿದ್ದಾರೆ.

ಚಿತ್ರದಲ್ಲಿ ರಾಜ್​ ಬಿ.ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ತೆರೆಯ ಮೇಲೆ ಯಾವ ರೀತಿಯ ಕಮಾಲ್ ಮಾಡಲಿದ್ದಾರೆ ಎಂದು ಕಾದುನೋಡಬೇಕಿದೆ. ಸಿನಿರಸಿಕರಲ್ಲಿ ಗರುಡ ಗಮನ ವೃಷಭ ವಾಹನ ಚಿತ್ರದ ಬಗ್ಗೆ ಭಾರೀ ನಿರೀಕ್ಷೆ ಇದ್ದು, ಚಿತ್ರ ಬಿಡುಗಡೆಯಾಗುವುದಕ್ಕೆ ಅಭಿಮಾನಿಗಳು ತುದಿಗಾಲಲ್ಲಿ ಕಾಯುತ್ತಿದ್ದಾರೆ.

Prayashaha: ‘ಪ್ರಾಯಶಃ’ ಗಿಟಾರ್, ಕೊಳಲಿನ ಕರೆ ನಿಮ್ಮ ಮನಗೆಲ್ಲದೇ ಇರದು

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ