‘ಗಟ್ಟಿಮೇಳ’ ಸೀರಿಯಲ್ ನಟಿ ನಿಶಾ ಅಭಿನಯದ ‘ಅಂಶು’ ಸಿನಿಮಾ ಟ್ರೇಲರ್ ಹೇಗಿದೆ ನೋಡಿ..

ನಿಶಾ ರವಿಕೃಷ್ಣನ್ ಅವರು ‘ಅಂಶು’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಈ ಸಿನಿಮಾದ ಮೂಲಕ ಡೈರೆಕ್ಟರ್​ ಚನ್ನಕೇಶವ ಅವರು ಒಂದು ಸಮಾಜಮುಖಿ ಕಥೆಗೆ ಕಮರ್ಶಿಯಲ್ ಸ್ಪರ್ಶ ನೀಡಿದ್ದಾರೆ. ಇತ್ತೀಚೆಗೆ ‘ಅಂಶು’ ಚಿತ್ರದ ಟ್ರೇಲರ್​ ಬಿಡುಗಡೆ ಆಯಿತು. ನಿಶಾ ಅವರ ಇಮೇಜ್​ ಬದಲಿಸುವ ರೀತಿಯ ಕಹಾನಿ ಮತ್ತು ಪಾತ್ರ ಈ ಸಿನಿಮಾದಲ್ಲಿ ಇದೆ.

‘ಗಟ್ಟಿಮೇಳ’ ಸೀರಿಯಲ್ ನಟಿ ನಿಶಾ ಅಭಿನಯದ ‘ಅಂಶು’ ಸಿನಿಮಾ ಟ್ರೇಲರ್ ಹೇಗಿದೆ ನೋಡಿ..
ನಿಶಾ ರವಿಕೃಷ್ಣನ್​
Follow us
|

Updated on: Oct 10, 2024 | 8:51 PM

ಸೀರಿಯಲ್​ಗಳಲ್ಲಿ ಮಿಂಚಿ ನಂತರ ಹಿರಿತೆರೆಯಲ್ಲಿ ಖ್ಯಾತಿ ಗಳಿಸಿದ ಅನೇಕರು ಇದ್ದಾರೆ. ಅವರ ಸಾಲಿಗೆ ನಿಶಾ ರವಿಕೃಷ್ಣನ್ ಕೂಡ ಸೇರ್ಪಡೆ ಆಗುತ್ತಿದ್ದಾರೆ. ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ನಿಶಾ ಅವರು ಅಮೂಲ್ಯಾ ಎಂಬ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರು ‘ಅಂಶು’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟ್ರೇಲರ್​ ಗಮನ ಸೆಳೆಯುತ್ತಿದೆ. ಸಸ್ಪೆನ್ಸ್​ ಥ್ರಿಲ್ಲರ್​ ಶೈಲಿಯಲ್ಲಿ ಮೂಡಿಬಂದಿರುವ ಈ ಸಿನಿಮಾದ ಝಲಕ್ ತೋರಿಸುವಲ್ಲಿ ಟ್ರೇಲರ್​ ಯಶಸ್ಸಿ ಆಗಿದೆ. ಸಿನಿಮಾ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

‘ಅಂಶು’ ಸಿನಿಮಾದ ಟ್ರೇಲರ್​ನಲ್ಲಿ ಕಥೆಯ ಬಗ್ಗೆ ಸುಳಿವು ಬಿಟ್ಟುಕೊಡಲಾಗಿದೆ. ಇದು ಮಹಿಳಾ ಪ್ರಧಾನ ಸಿನಿಮಾ. ಇಡೀ ಸಿನಿಮಾದಲ್ಲಿ ನಿಶಾ ರವಿಕೃಷ್ಣನ್​ ಅವರ ಪಾತ್ರವೇ ಪ್ರಮುಖವಾಗಿ ಇರಲಿದೆ. ಪಕ್ಕಾ ಕಮರ್ಷಿಯಲ್​ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗುತ್ತದೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಟ್ರೇಲರ್​ ನೋಡಿದ ಪ್ರೇಕ್ಷಕರ ಮನಸ್ಸಿನಲ್ಲಿ ಕೌತುಕ ಹೆಚ್ಚಾಗಿದೆ.

‘ಅಂಶು’ ಸಿನಿಮಾದ ಟ್ರೇಲರ್​:

ಕಿರುತೆರೆ ಲೋಕಕ್ಕೂ ಸಿನಿಮಾಗೂ ಸಾಕಷ್ಟು ವ್ಯತ್ಯಾಸ ಇದೆ. ಧಾರಾವಾಹಿಗಳಲ್ಲಿ ನಿಶಾ ರವಿಕೃಷ್ಣನ್ ಅವರಿಗೆ ಇರುವ ಇಮೇಜ್​ ಬೇರೆ. ಆದರೆ ಆ ಇಮೇಜ್​ ಬದಲಿಸುವ ರೀತಿಯ ಪಾತ್ರವನ್ನು ಅವರು ‘ಅಂಶು’ ಸಿನಿಮಾದಲ್ಲಿ ಮಾಡಿದ್ದಾರೆ. ಎಂ.ಸಿ. ಚನ್ನಕೇಶವ ಅವರು ಈ ಸಿನಿಮಾಗೆ ನಿರ್ದೇಶನದ ಮಾಡಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಸಿನಿಮಾ. ಸಮಾಜದಲ್ಲಿ ನಡೆಯುವ ಘಟನೆಗಳನ್ನೇ ಸ್ಫೂರ್ತಿಯಾಗಿಟ್ಟುಕೊಂಡು ಈ ಸಿನಿಮಾ ಸಿದ್ಧವಾಗಿದೆ.

ಇದನ್ನೂ ಓದಿ: Bigg Boss TRP: ‘ಬಿಗ್ ಬಾಸ್’​ಗೆ ಸಿಕ್ತು ಭರ್ಜರಿ ಟಿಆರ್​ಪಿ; ದಾಖಲೆಗಳೆಲ್ಲ ಉಡೀಸ್  

‘ಅಂಶು’ ಚಿತ್ರವು ‘ಗ್ರಹಣ ಎಲ್​ಎಲ್​ಪಿ’ ಬ್ಯಾನರ್​ ಮೂಲಕ ನಿರ್ಮಾಣ ಆಗಿದೆ. ರತನ್ ಗಂಗಾಧರ್, ಕೃತಿ ನಾಣಯ್ಯ, ಸಂಪತ್ ಶಿವಶಂಕರ್ ಅವರು ನಿರ್ಮಾಣ ಮಾಡಿದ್ದಾರೆ. ಚಲುವರಾಜ್ ಅವರು ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಜೈಚಂದ್ರ, ಪ್ರಮೋದ್, ಡಾ. ಮಧುರಾಜ್, ವೀರನ್ ಗೌಡ ಸಹ ಈ ಸಿನಿಮಾದ ನಿರ್ಮಾಣದಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಸುನೀಲ್ ನರಸಿಂಹಮೂರ್ತಿ ಅವರ ಛಾಯಾಗ್ರಹಣ, ಕೆ.ಸಿ. ಬಾಲಸಾರಂಗನ್ ಅವರ ಸಂಗೀತ ನಿರ್ದೇಶನ, ವಿಘ್ನೇಶ್ ಅವರ ಹಿನ್ನೆಲೆ ಸಂಗೀತ ಈ ಸಿನಿಮಾಗಿದೆ. ಮಹೇಂದ್ರ ಗೌಡ ಅವರು ಸಂಭಾಷಣೆ ಮತ್ತು ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?