‘ರವಿಕೆ ಪ್ರಸಂಗ’ ಚಿತ್ರದ ಹಾಡು ಕೇಳಿದ್ರಾ? ಹೆಣ್ಮಕ್ಕಳಿಗೆ ಇಷ್ಟ ಆಗಲಿದೆ ಈ ಸಿನಿಮಾ

ಕೃಷ್ಣೇಗೌಡ ಅವರು ‘ರವಿಕೆ ಪ್ರಸಂಗ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಗೀತಾ ಭಾರತಿ ಭಟ್, ಸಂಪತ್ ಮೈತ್ರೇಯ ಮುಂತಾದವರು ನಟಿಸಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವ ಗುರಿಯಿಟ್ಟುಕೊಂಡು ನಿರ್ದೇಶಕ-ನಿರ್ಮಾಪಕ ಸಂತೋಷ್ ಕೊಡೆಂಕೆರಿ ಕಾರ್ಯ ನಿರತರಾಗಿದ್ದಾರೆ.

‘ರವಿಕೆ ಪ್ರಸಂಗ’ ಚಿತ್ರದ ಹಾಡು ಕೇಳಿದ್ರಾ? ಹೆಣ್ಮಕ್ಕಳಿಗೆ ಇಷ್ಟ ಆಗಲಿದೆ ಈ ಸಿನಿಮಾ
ರವಿಕೆ ಪ್ರಸಂಗ ಹಾಡು ಬಿಡುಗಡೆ ಸಮಾರಂಭ
Follow us
|

Updated on: Sep 15, 2023 | 7:46 PM

ಹೊಸ ಬಗೆಯ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿದರೆ ಖಂಡಿತವಾಗಿಯೂ ಪ್ರೇಕ್ಷಕರ ಗಮನ ಸೆಳೆಯಬಹುದು. ಸವಕಲು ವಿಷಯಗಳನ್ನು ಬಿಟ್ಟು, ಬೇರೆ ಕಥೆ ಹೇಳಿದರೆ ಆ ಚಿತ್ರದ ಮೇಲೆ ಜನರಿಗೆ ಕುತೂಹಲ ಮೂಡುತ್ತದೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ ‘ರವಿಕೆ ಪ್ರಸಂಗ’ (Ravike Prasanga) ಸಿನಿಮಾ. ಈ ಚಿತ್ರದ ಕಥೆ ಡಿಫರೆಂಟ್​ ಆಗಿದೆ. ಹೆಣ್ಮಕ್ಕಳ ರವಿಕೆ ಕುರಿತು ಈ ಸಿನಿಮಾ ತಯಾರಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಈ ಚಿತ್ರದ ಟೈಟಲ್​ ಸಾಂಗ್​ ಬಿಡುಗಡೆ ಮಾಡಲಾಗಿದೆ. ಈ ವೇಳೆ ಚಿತ್ರತಂಡದವರು ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ರವಿಕೆ ಪ್ರಸಂಗ’ ಸಿನಿಮಾದಲ್ಲಿ ‘ಬ್ರಹ್ಮ ಗಂಟು’ ಸೀರಿಯಲ್​ ಖ್ಯಾತಿಯ ನಟಿ ಗೀತಾ ಭಾರತಿ ಭಟ್ (Geetha Bharathi Bhat), ಪ್ರತಿಭಾವಂತ ಕಲಾವಿದ ಸಂಪತ್ ಮೈತ್ರೇಯ ಮುಂತಾದವರು ನಟಿಸಿದ್ದಾರೆ.

ಮಹಿಳೆಯರ ಬಗ್ಗೆ ಈಗಾಗಲೇ ಅನೇಕ ಹಾಡುಗಳನ್ನು ಬರೆಯಲಾಗಿದೆ. ಆದರೆ ರವಿಕೆಯ ಕುರಿತು ಹಾಡು ಬಂದಿದ್ದು ವಿರಳ. ‘ರವಿಕೆ ಪ್ರಸಂಗ’ ಸಿನಿಮಾದ ಈ ಹೊಸ ಹಾಡು ಸಂಪೂರ್ಣವಾಗಿ ರವಿಕೆಯ ಕುರಿತಾಗಿ ಇದೆ. ಈ ಗೀತೆಗೆ ಕಿರಣ್ ಕಾವೇರಪ್ಪ ಸಾಹಿತ್ಯ ಬರೆದಿದ್ದಾರೆ. ‘ರವಿ ರವಿ ರವಿಕೆ ಪ್ರಸಂಗ..’ ಎಂದು ಶುರುವಾಗುವ ಈ ಶೀರ್ಷಿಕೆ ಗೀತೆಯು ಜಂಕಾರ್ ಮ್ಯೂಸಿಕ್ ಮೂಲಕ ರಿಲೀಸ್​ ಆಗಿದೆ. ವಿನಯ್ ಶರ್ಮ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಚೈತ್ರಾ ಮತ್ತು ಚೇತನ್ ನಾಯಕ್ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ. ರಾಕೇಶ್ ಮಯ್ಯ, ಪದ್ಮಜಾ ರಾವ್, ಸುಮನ್ ರಂಗನಾಥ್, ರಘು ಪಾಂಡೇಶ್ವರ್, ಪ್ರವೀಣ್ ಅಥರ್ವ, ಕೃಷ್ಣಮೂರ್ತಿ ಕವತ್ತಾರ್, ಮೀನಾ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ರವಿಕೆ ಪ್ರಸಂಗ’ ಸಿನಿಮಾದ ಶೀರ್ಷಿಕೆ ಗೀತೆ:

ಕೃಷ್ಣೇಗೌಡ ಅವರು ‘ರವಿಕೆ ಪ್ರಸಂಗ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ದೃಷ್ಟಿ ಮೀಡಿಯಾ ಆ್ಯಂಡ್​ ಪ್ರೊಡಕ್ಷನ್’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈ ಸಿನಿಮಾ ಟೈಟಲ್ ಸಾಂಗ್ ಬಿಡುಗಡೆ ಮಾಡುವ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸುವ ಕೆಲಸ ಆಗಿದೆ. ಆದಷ್ಟು ಬೇಗ ‘ರವಿಕೆ ಪ್ರಸಂಗ’ ಚಿತ್ರವನ್ನು ತೆರೆಗೆ ತರುವ ಗುರಿಯಿಟ್ಟುಕೊಂಡು ನಿರ್ದೇಶಕ-ನಿರ್ಮಾಪಕ ಸಂತೋಷ್ ಕೊಡೆಂಕೆರಿ ಕಾರ್ಯ ನಿರತರಾಗಿದ್ದಾರೆ. ನಿರ್ಮಾಣದಲ್ಲಿ ಶಾಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ, ಶಿವರುದ್ರಯ್ಯ ಅವರು ಸಾಥ್​​ ನೀಡಿದ್ದಾರೆ. ಮುರಳಿಧರ್ ಎನ್. ಅವರ ಛಾಯಾಗ್ರಹಣ, ರಘು ಶಿವರಾಮ್ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: Tatsama Tadbhava Review: ಕೊಲೆ ಕೌತುಕದ ಕಥೆಯೊಂದಿಗೆ ನೋಡುಗರ ತಲೆಗೆ ಹುಳ ಬಿಡುವ ‘ತತ್ಸಮ ತದ್ಭವ’

ಪಾವನ ಸಂತೋಷ್ ಅವರು ಈ ಸಿನಿಮಾಗೆ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ‘ಮಹಿಳೆಯರಿಗೆ ಸೀರೆಗಿಂತಲೂ ರವಿಕೆ ಮೇಲೆ ಹೆಚ್ಚು ಪ್ರೀತಿ ಇರುತ್ತದೆ. ಆ ರವಿಕೆ ಬಗ್ಗೆ ನಾನು ಕಥೆ ಬರೆದಿದ್ದೇನೆ. ನನಗೆ ಸಹಕಾರ ನೀಡಿದ ಪತಿ ಸಂತೋಷ್ ಅವರಿಗೆ ಮತ್ತು ಇಡೀ ಚಿತ್ರತಂಡಕ್ಕೆ ಧನ್ಯವಾಗಳು’ ಎಂದು ಅವರು ಹೇಳಿದ್ದಾರೆ. ಹಿರಿಯ ನಟಿ ಪದ್ಮಜಾ ರಾವ್ ಮಾತನಾಡಿ, ‘ಈ ಸಿನಿಮಾ ತಂಡದಲ್ಲಿ ಕೆಲಸ ಮಾಡಿದ್ದು ನನಗೆ ಖುಷಿ ನೀಡಿದೆ. ರವಿಕೆ ಬಗ್ಗೆ ಮೂಡಿಬರುತ್ತಿರುವ ಈ ಸಿನಿಮಾ ಎಲ್ಲ ಹೆಣ್ಮಕ್ಕಳ ಮನಸ್ಸಿಗೆ ಹತ್ತಿರ ಆಗಲಿದೆ’ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್