AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರವಿಕೆ ಪ್ರಸಂಗ’ ಚಿತ್ರದ ಹಾಡು ಕೇಳಿದ್ರಾ? ಹೆಣ್ಮಕ್ಕಳಿಗೆ ಇಷ್ಟ ಆಗಲಿದೆ ಈ ಸಿನಿಮಾ

ಕೃಷ್ಣೇಗೌಡ ಅವರು ‘ರವಿಕೆ ಪ್ರಸಂಗ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಗೀತಾ ಭಾರತಿ ಭಟ್, ಸಂಪತ್ ಮೈತ್ರೇಯ ಮುಂತಾದವರು ನಟಿಸಿರುವ ಈ ಚಿತ್ರವನ್ನು ಆದಷ್ಟು ಬೇಗ ತೆರೆಗೆ ತರುವ ಗುರಿಯಿಟ್ಟುಕೊಂಡು ನಿರ್ದೇಶಕ-ನಿರ್ಮಾಪಕ ಸಂತೋಷ್ ಕೊಡೆಂಕೆರಿ ಕಾರ್ಯ ನಿರತರಾಗಿದ್ದಾರೆ.

‘ರವಿಕೆ ಪ್ರಸಂಗ’ ಚಿತ್ರದ ಹಾಡು ಕೇಳಿದ್ರಾ? ಹೆಣ್ಮಕ್ಕಳಿಗೆ ಇಷ್ಟ ಆಗಲಿದೆ ಈ ಸಿನಿಮಾ
ರವಿಕೆ ಪ್ರಸಂಗ ಹಾಡು ಬಿಡುಗಡೆ ಸಮಾರಂಭ
Follow us
ಮದನ್​ ಕುಮಾರ್​
|

Updated on: Sep 15, 2023 | 7:46 PM

ಹೊಸ ಬಗೆಯ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಿದರೆ ಖಂಡಿತವಾಗಿಯೂ ಪ್ರೇಕ್ಷಕರ ಗಮನ ಸೆಳೆಯಬಹುದು. ಸವಕಲು ವಿಷಯಗಳನ್ನು ಬಿಟ್ಟು, ಬೇರೆ ಕಥೆ ಹೇಳಿದರೆ ಆ ಚಿತ್ರದ ಮೇಲೆ ಜನರಿಗೆ ಕುತೂಹಲ ಮೂಡುತ್ತದೆ. ಅದಕ್ಕೆ ಉತ್ತಮ ಉದಾಹರಣೆ ಎಂದರೆ ‘ರವಿಕೆ ಪ್ರಸಂಗ’ (Ravike Prasanga) ಸಿನಿಮಾ. ಈ ಚಿತ್ರದ ಕಥೆ ಡಿಫರೆಂಟ್​ ಆಗಿದೆ. ಹೆಣ್ಮಕ್ಕಳ ರವಿಕೆ ಕುರಿತು ಈ ಸಿನಿಮಾ ತಯಾರಾಗಿದೆ ಎಂಬುದು ವಿಶೇಷ. ಇತ್ತೀಚೆಗೆ ಈ ಚಿತ್ರದ ಟೈಟಲ್​ ಸಾಂಗ್​ ಬಿಡುಗಡೆ ಮಾಡಲಾಗಿದೆ. ಈ ವೇಳೆ ಚಿತ್ರತಂಡದವರು ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ರವಿಕೆ ಪ್ರಸಂಗ’ ಸಿನಿಮಾದಲ್ಲಿ ‘ಬ್ರಹ್ಮ ಗಂಟು’ ಸೀರಿಯಲ್​ ಖ್ಯಾತಿಯ ನಟಿ ಗೀತಾ ಭಾರತಿ ಭಟ್ (Geetha Bharathi Bhat), ಪ್ರತಿಭಾವಂತ ಕಲಾವಿದ ಸಂಪತ್ ಮೈತ್ರೇಯ ಮುಂತಾದವರು ನಟಿಸಿದ್ದಾರೆ.

ಮಹಿಳೆಯರ ಬಗ್ಗೆ ಈಗಾಗಲೇ ಅನೇಕ ಹಾಡುಗಳನ್ನು ಬರೆಯಲಾಗಿದೆ. ಆದರೆ ರವಿಕೆಯ ಕುರಿತು ಹಾಡು ಬಂದಿದ್ದು ವಿರಳ. ‘ರವಿಕೆ ಪ್ರಸಂಗ’ ಸಿನಿಮಾದ ಈ ಹೊಸ ಹಾಡು ಸಂಪೂರ್ಣವಾಗಿ ರವಿಕೆಯ ಕುರಿತಾಗಿ ಇದೆ. ಈ ಗೀತೆಗೆ ಕಿರಣ್ ಕಾವೇರಪ್ಪ ಸಾಹಿತ್ಯ ಬರೆದಿದ್ದಾರೆ. ‘ರವಿ ರವಿ ರವಿಕೆ ಪ್ರಸಂಗ..’ ಎಂದು ಶುರುವಾಗುವ ಈ ಶೀರ್ಷಿಕೆ ಗೀತೆಯು ಜಂಕಾರ್ ಮ್ಯೂಸಿಕ್ ಮೂಲಕ ರಿಲೀಸ್​ ಆಗಿದೆ. ವಿನಯ್ ಶರ್ಮ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಚೈತ್ರಾ ಮತ್ತು ಚೇತನ್ ನಾಯಕ್ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ. ರಾಕೇಶ್ ಮಯ್ಯ, ಪದ್ಮಜಾ ರಾವ್, ಸುಮನ್ ರಂಗನಾಥ್, ರಘು ಪಾಂಡೇಶ್ವರ್, ಪ್ರವೀಣ್ ಅಥರ್ವ, ಕೃಷ್ಣಮೂರ್ತಿ ಕವತ್ತಾರ್, ಮೀನಾ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ರವಿಕೆ ಪ್ರಸಂಗ’ ಸಿನಿಮಾದ ಶೀರ್ಷಿಕೆ ಗೀತೆ:

ಕೃಷ್ಣೇಗೌಡ ಅವರು ‘ರವಿಕೆ ಪ್ರಸಂಗ’ ಸಿನಿಮಾದ ಶೀರ್ಷಿಕೆ ಗೀತೆಯನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಅವರು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ದೃಷ್ಟಿ ಮೀಡಿಯಾ ಆ್ಯಂಡ್​ ಪ್ರೊಡಕ್ಷನ್’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಈ ಸಿನಿಮಾ ಟೈಟಲ್ ಸಾಂಗ್ ಬಿಡುಗಡೆ ಮಾಡುವ ಮೂಲಕ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸುವ ಕೆಲಸ ಆಗಿದೆ. ಆದಷ್ಟು ಬೇಗ ‘ರವಿಕೆ ಪ್ರಸಂಗ’ ಚಿತ್ರವನ್ನು ತೆರೆಗೆ ತರುವ ಗುರಿಯಿಟ್ಟುಕೊಂಡು ನಿರ್ದೇಶಕ-ನಿರ್ಮಾಪಕ ಸಂತೋಷ್ ಕೊಡೆಂಕೆರಿ ಕಾರ್ಯ ನಿರತರಾಗಿದ್ದಾರೆ. ನಿರ್ಮಾಣದಲ್ಲಿ ಶಾಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ, ಶಿವರುದ್ರಯ್ಯ ಅವರು ಸಾಥ್​​ ನೀಡಿದ್ದಾರೆ. ಮುರಳಿಧರ್ ಎನ್. ಅವರ ಛಾಯಾಗ್ರಹಣ, ರಘು ಶಿವರಾಮ್ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: Tatsama Tadbhava Review: ಕೊಲೆ ಕೌತುಕದ ಕಥೆಯೊಂದಿಗೆ ನೋಡುಗರ ತಲೆಗೆ ಹುಳ ಬಿಡುವ ‘ತತ್ಸಮ ತದ್ಭವ’

ಪಾವನ ಸಂತೋಷ್ ಅವರು ಈ ಸಿನಿಮಾಗೆ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ‘ಮಹಿಳೆಯರಿಗೆ ಸೀರೆಗಿಂತಲೂ ರವಿಕೆ ಮೇಲೆ ಹೆಚ್ಚು ಪ್ರೀತಿ ಇರುತ್ತದೆ. ಆ ರವಿಕೆ ಬಗ್ಗೆ ನಾನು ಕಥೆ ಬರೆದಿದ್ದೇನೆ. ನನಗೆ ಸಹಕಾರ ನೀಡಿದ ಪತಿ ಸಂತೋಷ್ ಅವರಿಗೆ ಮತ್ತು ಇಡೀ ಚಿತ್ರತಂಡಕ್ಕೆ ಧನ್ಯವಾಗಳು’ ಎಂದು ಅವರು ಹೇಳಿದ್ದಾರೆ. ಹಿರಿಯ ನಟಿ ಪದ್ಮಜಾ ರಾವ್ ಮಾತನಾಡಿ, ‘ಈ ಸಿನಿಮಾ ತಂಡದಲ್ಲಿ ಕೆಲಸ ಮಾಡಿದ್ದು ನನಗೆ ಖುಷಿ ನೀಡಿದೆ. ರವಿಕೆ ಬಗ್ಗೆ ಮೂಡಿಬರುತ್ತಿರುವ ಈ ಸಿನಿಮಾ ಎಲ್ಲ ಹೆಣ್ಮಕ್ಕಳ ಮನಸ್ಸಿಗೆ ಹತ್ತಿರ ಆಗಲಿದೆ’ ಎಂದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್