AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಾ ಧಾರಾವಾಹಿ ನಟಿ ಭವ್ಯಾ ಗೌಡಗೆ ಬೆಳ್ಳಿತೆರೆ ಆಫರ್​; ಸಿನಿಮಾ ಯಾವುದು?

ವಿಸ್ಮಯಾ ಗೌಡ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಡಿಯರ್​ ಕಣ್ಮಣಿ ಚಿತ್ರಕ್ಕೆ ಭವ್ಯಾ ಗೌಡ ನಾಯಕಿಯಾಗಿ ಎಂಟ್ರಿಕೊಟ್ಟಿದ್ದಾರೆ. ಈ ಮೊದಲು ನಟಿ ಸಾತ್ವಿಕಾ ಚಿತ್ರ ತಂಡ ಸೇರಿಕೊಂಡಿದ್ದರು.

ಗೀತಾ ಧಾರಾವಾಹಿ ನಟಿ ಭವ್ಯಾ ಗೌಡಗೆ ಬೆಳ್ಳಿತೆರೆ ಆಫರ್​; ಸಿನಿಮಾ ಯಾವುದು?
ಭವ್ಯಾ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on:Mar 29, 2021 | 2:24 PM

Share

ಹೀರೋಯಿನ್​ಗಳಿಗೆ ಕಿರುತೆರೆಯಲ್ಲಿ ನಟಿಸುತ್ತಿರುವಾಗ ಬೆಳ್ಳಿ ಪರದೆಯಲ್ಲಿ ನಟಿಸೋಕೆ ಆಫರ್​ ಬರೋದು ಕಾಮನ್. ಕಿರುತೆರೆಯಿಂದ ಹಿರಿತೆರೆಗೆ ಬಂದು ಮಿಂಚಿದ ಅನೇಕ ಕಲಾವಿದರಿದ್ದಾರೆ. ಈಗ ಈ ಸಾಲಿಗೆ ಗೀತಾ ಧಾರಾವಾಹಿ ಮೂಲಕ ಮನೆ ಮಾತಾಗಿರುವ ಭವ್ಯ ಗೌಡ ಕೂಡ ಸೇರ್ಪಡೆ ಆಗಿದ್ದಾರೆ. ಅವರು, ಈಗ ಸ್ಯಾಂಡಲ್​ವುಡ್​ಗೆ ಕಾಲಿಡೋಕೆ ಸಜ್ಜಾಗಿದ್ದಾರೆ. ಅಷ್ಟಕ್ಕೂ ಆ ಸಿನಿಮಾ ಯಾವುದು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ವಿಸ್ಮಯಾ ಗೌಡ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಡಿಯರ್​ ಕಣ್ಮಣಿ ಚಿತ್ರಕ್ಕೆ ಭವ್ಯಾ ಗೌಡ ನಾಯಕಿಯಾಗಿ ಎಂಟ್ರಿಕೊಟ್ಟಿದ್ದಾರೆ. ಈ ಮೊದಲು ನಟಿ ಸಾತ್ವಿಕ ಚಿತ್ರ ತಂಡ ಸೇರಿಕೊಂಡಿದ್ದರು. ಈಗ ಚಿತ್ರಕ್ಕೆ ಹೊಸ ಎಂಟ್ರಿಯಾಗಿ ಭವ್ಯಾ ಗೌಡ ಸೇರಿಕೊಂಡಿದ್ದಾರೆ.

ಡಿಯರ್​ ಕಣ್ಮಣಿಗೆ ಕಿಶನ್​ ಬಿಳಗಲಿ ಮತ್ತು ಪ್ರವೀಣ್ ಹೀರೋ. ಹಾಗಾಗಿ ಈ ಸಿನಿಮಾದಲ್ಲಿ ಇಬ್ಬರು ಹೀರೋಯಿನ್​ ಇದ್ದಾರೆ. ಸಾತ್ವಿಕಾ ಮತ್ತು ಭವ್ಯಾ ಗೌಡ ಅವರನ್ನು ನಾಯಕಿಯಾಗಿ ಚಿತ್ರತಂಡ ಆಯ್ಕೆ ಮಾಡಿಕೊಂಡಿದೆ. ಆದರೆ ಯಾರು ಯಾರಿಗೆ ಜೋಡಿಯಾಗಲಿದ್ದಾರೆ ಎಂಬುದನ್ನು ಸಿನಿಮಾ ನೋಡಿಯೇ ತಿಳಿದುಕೊಳ್ಳಬೇಕು.

ಗೀತಾ ಧಾರಾವಾಹಿಯಲ್ಲಿ ಭವ್ಯಾ ಗೌಡ ಪಾತ್ರ ಭಿನ್ನವಾಗಿತ್ತು. ಕಾಲೇಜು ಹುಡುಗಿಯಾಗಿ ಅವರು ನಟಿಸುತ್ತಿದ್ದಾರೆ. ಆದರೆ, ಈ ಪಾತ್ರಕ್ಕಿಂತ ಡಿಯರ್​ ಕಣ್ಮಣಿ ಸಿನಿಮಾದ ಪಾತ್ರ ಭಿನ್ನವಾಗಿರಲಿದೆಯಂತೆ. ಈ ಮೊದಲಿನಿಂದಲೂ ಅವರು ಸಿನಿಮಾ ಆಫರ್​ಗಾಗಿ ಕಾದಿದ್ದರು. ಒಂದೊಳ್ಳೆಯ ಕಥೆ ಸಿಕ್ಕರೆ ನಟಿಸುವ ಆಲೋಚನೆ ಅವರದ್ದಾಗಿತ್ತು. ಈಗ ಕೊನೆಗೂ ಅವರಿಗೆ ಬೆಳ್ಳಿ ತೆರೆ ಆಫರ್​ ಸಿಕ್ಕಂತಾಗಿದೆ.

ಈ ಸಿನಿಮಾಗೆ ಇತ್ತೀಚೆಗಷ್ಟೇ ಕಿಚ್ಚ ಸುದೀಪ್​ ಚಾಲನೆ ನೀಡಿದ್ದರು. ಹೀಗಾಗಿ, ಸಿನಿಮಾಗೆ ಆರಂಭದಲ್ಲೇ ಜನಪ್ರಿಯತೆ ಸಿಕ್ಕಿತ್ತು. ಈಗ ಚಿತ್ರಕ್ಕೆ ಭವ್ಯಾ ಗೌಡ ಕೂಡ ಸೇರ್ಪಡೆಯಾಗಿರುವುದು ಪಾತ್ರವರ್ಗ ಹಿರಿದಾದಂತಾಗಿದೆ. ಗೀತಾ ಧಾರಾವಾಹಿ ಮೂಲಕ ಭವ್ಯಾ ಮನೆ ಮಾತಾಗಿದ್ದಾರೆ. ಈಗ ಅವರು ಬೆಳ್ಳಿ ಪರದೆಗೆ ಕಾಲಿಡುತ್ತಿದ್ದಾರೆ ಎನ್ನುವ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರಂತೆ.

ಇದನ್ನೂ ಓದಿ: ಬೇಸಿಗೆಯಲ್ಲೂ ಯಶ್​ ಪುತ್ರಿ ಎಷ್ಟೊಂದು ಕೂಲ್​! ಮುದ್ದು ಗೊಂಬೆ ಆಯ್ರಾ ಲುಕ್​ಗೆ ಮನಸೋಲದವರಿಲ್ಲ

Published On - 4:03 pm, Sat, 27 March 21

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ