AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’: ಯಶ್​​ ಎದುರು ಕಿಯಾರಾ ಆಯ್ಕೆ ಆಗಿದ್ದು ಹೇಗೆ? ಏಕೆ?

Toxic movie case: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ ಇಷ್ಟು ಮಂದಿ ನಟಿಯರಲ್ಲಿ ಕಿಯಾರಾ ಅಡ್ವಾಣಿ ಅವರದ್ದು ಬಹು ಮುಖ್ಯ ಪಾತ್ರ ಎನ್ನಲಾಗುತ್ತಿದೆ. ಇದು ಅವರ ಪಾಲಿಗೆ ಮೊದಲ ಕನ್ನಡ ಸಿನಿಮಾ ಆಗಿದ್ದು, ‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರು ಕಿಯಾರಾ ಅವರನ್ನೇ ‘ಟಾಕ್ಸಿಕ್’ ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದೇಕೆ ಎಂಬುದನ್ನು ಹೇಳಿಕೊಂಡಿದ್ದಾರೆ.

‘ಟಾಕ್ಸಿಕ್’: ಯಶ್​​ ಎದುರು ಕಿಯಾರಾ ಆಯ್ಕೆ ಆಗಿದ್ದು ಹೇಗೆ? ಏಕೆ?
Kiara Advani
ಮಂಜುನಾಥ ಸಿ.
|

Updated on: Mar 28, 2026 | 9:05 PM

Share

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 04ಕ್ಕೆ ತೆರೆಗೆ ಬರಲಿದೆ. ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ ‘ಟಾಕ್ಸಿಕ್’ ಸಿನಿಮಾ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ ಇಷ್ಟು ಮಂದಿ ನಟಿಯರಲ್ಲಿ ಕಿಯಾರಾ ಅಡ್ವಾಣಿ ಅವರದ್ದು ಬಹು ಮುಖ್ಯ ಪಾತ್ರ ಎನ್ನಲಾಗುತ್ತಿದೆ. ಇದು ಅವರ ಪಾಲಿಗೆ ಮೊದಲ ಕನ್ನಡ ಸಿನಿಮಾ ಆಗಿದ್ದು, ‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರು ಕಿಯಾರಾ ಅವರನ್ನೇ ‘ಟಾಕ್ಸಿಕ್’ ಸಿನಿಮಾಕ್ಕೆ ಆಯ್ಕೆ ಮಾಡಿಕೊಂಡಿದ್ದೇಕೆ ಎಂಬುದನ್ನು ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್ ದಾಸ್, ‘ನಾಡಿಯಾ ಪಾತ್ರಕ್ಕೆ ಕಿಯಾರಾ ಅವರೇ ನನ್ನ ಮೊದಲ ಮತ್ತು ಏಕೈಕ ಆಯ್ಕೆಯಾಗಿದ್ದರು” ಎಂದು ತಿಳಿಸಿದ್ದಾರೆ. ಈ ಪಾತ್ರವು ಏಕಕಾಲದಲ್ಲಿ ಮೃದುತ್ವ ಮತ್ತು ಉಗ್ರತೆಯನ್ನು ಬೇಡುವ ಪಾತ್ರ ಆಗಿತ್ತು. ಆ ಎರಡೂ ಕಿಯಾರಾ ಅಡ್ವಾಣಿ ಅವರಲ್ಲಿದೆ. ಕಿಯಾರಾ ಅವರ ಸ್ಕ್ರೀನ್ ಪ್ರೆಸೆನ್ಸ್‌ನಲ್ಲಿ ಒಂದು ಸಹಜವಾದ ಮಾನವೀಯ ಗುಣವಿದೆ, ಅದು ಈ ಪಾತ್ರಕ್ಕೆ ಬಹಳ ಅವಶ್ಯಕವಾಗಿತ್ತು ಎಂದು ಅವರು ಹೇಳಿದ್ದಾರೆ.

ಕಿಯಾರಾ ಅವರು ಪಾತ್ರವನ್ನು ಕೇವಲ ನಿರ್ದೇಶಕರು ಹೇಳಿದಷ್ಟು ಮಾತ್ರವೇ ನಟಿಸದೇ, ಪಾತ್ರದ ಭಾವನಾತ್ಮಕ ಆಳವನ್ನು ಅರ್ಥಮಾಡಿಕೊಂಡು ನಟಿಸುತ್ತಾರೆ. ಕ್ಯಾಮೆರಾ ಎದುರು ಬರುವ ಮೊದಲೇ ಅವರು ತಮ್ಮ ಮನಸ್ಸಿನಲ್ಲಿ ಆ ಪಾತ್ರವಾಗಿ ಬದುಕಿರುತ್ತಾರೆ. ಅವರ ಶಿಸ್ತು ಮತ್ತು ಪಾತ್ರದ ಬಗ್ಗೆ ಅವರಿಗಿರುವ ಕುತೂಹಲವು ಚಿತ್ರೀಕರಣದ ಪ್ರಕ್ರಿಯೆಯನ್ನು ಕೇವಲ ಒಂದು ಕಡೆಯ ನಿರ್ದೇಶನವಾಗಿಸದೆ, ಅರ್ಥಪೂರ್ಣ ಸಂವಾದವನ್ನಾಗಿ ಬದಲಿಸುತ್ತದೆ ಎಂದು ಗೀತು ಮೋಹನ್​​ದಾಸ್ ಪ್ರಶಂಸಿಸಿದ್ದಾರೆ.

ಇದನ್ನೂ ಓದಿ:ಗ್ಲಾಮರಸ್ ಅವತಾರದಲ್ಲಿ ನಟಿ ಭಾಗ್ಯಶ್ರೀ ಬೋರ್ಸೆ: ವಿಡಿಯೋ ನೋಡಿ

‘ನಾಡಿಯಾ’ ಪಾತ್ರವು ಕಿಯಾರಾ ಅವರನ್ನು ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಬಹಳಷ್ಟು ಪರೀಕ್ಷಿಸಿದೆ. ಅವರು ಈ ಪಾತ್ರಕ್ಕೆ ತಮ್ಮ ಸಂಪೂರ್ಣ ಶಕ್ತಿಯನ್ನು ಧಾರೆ ಎರೆದಿದ್ದಾರೆ. ಕೆಲವು ದೃಶ್ಯಗಳಲ್ಲಿ ಕಿಯಾರಾ ನಟಿಸುತ್ತಿದ್ದಾಗ, ಆ ಪಾತ್ರವು ಕಣ್ಣೆದುರೇ ಜೀವಂತವಾಗಿ ಉಸಿರಾಡುತ್ತಿರುವಂತೆ ನನಗೆ ಭಾಸವಾಯಿತು ಎಂದು ನಿರ್ದೇಶಕಿ ಗೀತು ಮೋಹನ್​​ದಾಸ್ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಕಿಯಾರಾ ಅಡ್ವಾಣಿ ಅವರು ಜುಲೈ 2025 ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ, ಈ ದೊಡ್ಡ ಪ್ರಾಜೆಕ್ಟ್ ಮೂಲಕ ಮತ್ತೆ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. ‘ಟಾಕ್ಸಿಕ್’ ಚಿತ್ರವು ಜೂನ್ 4 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಯಶ್ ಅವರೊಂದಿಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ಮೆಮೊರಿ ಸುಧಾರಿಸಿಕೊಳ್ಳಿ ಎಂದು ಅಧಿಕಾರಿ ಟೇಬಲ್ ಮೇಲೆ ಬಾದಾಮಿ ಎಸೆದ ವ್ಯಕ್ತಿ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ವಿದ್ಯಾರ್ಥಿನಿಯರ ಬಳಿ ಅಂಗಡಿ ನೋಡಿಕೊಳ್ಳಿ ಎಂದು ಹೇಳಿ ಹೋದ ಮಾಲೀಕ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!