AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ’: ಶಿವರಾಜ್​ಕುಮಾರ್​

‘ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

‘ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ’: ಶಿವರಾಜ್​ಕುಮಾರ್​
ಶಕ್ತಿಧಾಮದ ಮಕ್ಕಳ ಜೊತೆ ಶಿವರಾಜ್​ಕುಮಾರ್​
ಮದನ್​ ಕುಮಾರ್​
|

Updated on: Oct 02, 2023 | 4:16 PM

Share

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನವನ್ನು (Gandhi Jayanti) ಇಂದು (ಅಕ್ಟೋಬರ್​ 2) ಎಲ್ಲಡೆ ಆಚರಿಸಲಾಗುತ್ತಿದೆ. ಹಾಗೆಯೇ ಲಾಲ್​ ಬಹದ್ದೂರ್​ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಗಿದೆ. ಶಾಲೆ, ಕಾಲೇಜು, ಸರ್ಕಾರಿ ಕಚೇರಿ ಮುಂತಾದ ಕಡೆಗಳಲ್ಲಿ ಈ ನಾಯಕರ ಜನ್ಮದಿನವನ್ನು ಸೆಲೆಬ್ರೇಟ್​ ಮಾಡಲಾಗಿದೆ. ನಟ ಶಿವರಾಜ್​ಕುಮಾರ್​ (Shivarajkumar) ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ (Mahatma Gandhi) ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್​ಕುಮಾರ್​ ಅವರು ಪೋಸ್​ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರು ಶುಭ ಕೋರಿದ್ದಾರೆ.

‘ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ. ಶಕ್ತಿಧಾಮದ ಮಕ್ಕಳ ಬಗ್ಗೆ ಡಾ. ರಾಜ್​ಕುಮಾರ್​ ಅವರ ಕುಟುಂಬ ಬಹಳ ಕಾಳಜಿ ಹೊಂದಿದೆ. ಹಲವು ವಿಶೇಷ ದಿನಗಳಲ್ಲಿ ಶಿವರಾಜ್​ಕುಮಾರ್​ ಅವರು ಅಲ್ಲಿಗೆ ಭೇಟಿ ನೀಡುತ್ತಾರೆ. ಇಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಅಲ್ಲಿಗೆ ಶಿವಣ್ಣ ತೆರಳಿದ್ದಾರೆ.

ಸಿನಿಮಾ ವಿಚಾರಕ್ಕೆ ಬರುವುದಾದರೆ, ಶಿವರಾಜ್​ಕುಮಾರ್​ ನಟನೆಯ ‘ಘೋಸ್ಟ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅಕ್ಟೋಬರ್​ 19ರಂದು ಈ ಚಿತ್ರ ಅದ್ದೂರಿಯಾಗಿ ತೆರೆ ಕಾಣಲಿದೆ. ಈ ಸಿನಿಮಾಗೆ ಶ್ರೀನಿ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಅನುಪಮ್​ ಖೇರ್​, ಅರ್ಚನಾ ಜೋಯಿಸ್​ ಮುಂತಾದವರು ‘ಘೋಸ್ಟ್​’ ಚಿತ್ರದಲ್ಲಿ ನಟಿಸಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಮಹಾತ್ಮ ಗಾಂಧಿ-ಲಾಲ್​ ಬಹದ್ದೂರ್​ ಶಾಸ್ತ್ರಿ ಜನ್ಮದಿನ; ಇಬ್ಬರೂ ನಾಯಕರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

‘ಘೋಸ್ಟ್​’ ಟ್ರೇಲರ್​ನಲ್ಲಿ ಹಲವು ಅಂಶಗಳು ಹೈಲೈಟ್​ ಆಗಿವೆ. ಶಿವರಾಜ್​ಕುಮಾರ್​ ಅವರ ಎರಡು ಗೆಟಪ್​ಗಳನ್ನು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗಿದೆ. ಹಿನ್ನೆಲೆ ಸಂಗೀತ ಕೂಡ ಗಮನ ಸೆಳೆದಿದೆ. ಅದ್ದೂರಿ ಮೇಕಿಂಗ್​ ಮತ್ತು ಮೈನವಿರೇಳಿಸುವಂತಹ ಆ್ಯಕ್ಷನ್​ ಸನ್ನಿವೇಶಗಳ ಝಲಕ್​ ಈ ಟ್ರೇಲರ್​ನಲ್ಲಿ ಕಾಣಿಸಿದೆ. ಸಂದೇಶ್​ ಎನ್​. ಅವರು ನಿರ್ಮಾಣ ಮಾಡಿದ್ದಾರೆ. ಅರ್ಜುನ್​ ಜನ್ಯ ಸಂಗೀತ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು