AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡೆವಿಲ್’ ಚಿತ್ರದಲ್ಲಿ ಗಿಲ್ಲಿ ನಟ; ಪೋಸ್ಟರ್ ರಿಲೀಸ್ ಮಾಡಿದ ದರ್ಶನ್ ಟೀಂ

ಬಿಗ್ ಬಾಸ್ ಕನ್ನಡ 12ರಲ್ಲಿ ಮಿಂಚುತ್ತಿರುವ ಗಿಲ್ಲಿ ನಟ, ದರ್ಶನ್ ಅವರ 'ಡೆವಿಲ್' ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ದರ್ಶನ್ ಜಾಮೀನಿನ ನಂತರ ಶೂಟಿಂಗ್ ಪೂರ್ಣಗೊಳಿಸಿದ್ದು, ಗಿಲ್ಲಿಯ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಡಿಸೆಂಬರ್ 12ಕ್ಕೆ 'ಡೆವಿಲ್' ತೆರೆಗೆ ಬರಲಿದ್ದು, ರೇಣುಕಾಸ್ವಾಮಿ ಕೇಸ್ ನಂತರ ದರ್ಶನ್ ಮೊದಲ ಚಿತ್ರ ಇದಾಗಲಿದೆ.

‘ಡೆವಿಲ್’ ಚಿತ್ರದಲ್ಲಿ ಗಿಲ್ಲಿ ನಟ; ಪೋಸ್ಟರ್ ರಿಲೀಸ್ ಮಾಡಿದ ದರ್ಶನ್ ಟೀಂ
ಡೆವಿಲ್
ರಾಜೇಶ್ ದುಗ್ಗುಮನೆ
|

Updated on: Nov 05, 2025 | 8:35 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಗಿಲ್ಲಿ ನಟ ಅವರು ಮಿಂಚುತ್ತಿದ್ದಾರೆ. ಅವರು ಒಳಗೆ ಉತ್ತಮ ಆಟ ಆಡುತ್ತಿರುವಾಗಲೇ ಹೊರಗೆ ಒಂದು ವಿಶೇಷ ವಿಚಾರ ರಿವೀಲ್ ಆಗಿದೆ. ಅವರು ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದಲ್ಲಿ ನಟಿಸಿರುವ ಬಗ್ಗೆ ಅಪ್​​ಡೇಟ್ ನೀಡಲಾಗಿದೆ. ಜೊತೆಗೆ ಪೋಸ್ಟರ್ ಕೂಡ ಬಿಡುಗಡೆ ಆಗಿದೆ. ಈ ಪೋಸ್ಟರ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಕಳೆದ ವರ್ಷ ದರ್ಶನ್ ಜೈಲು ಸೇರಿದರು. ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನು ಪಡೆದು ಹೊರಗೆ ಬಂದ ಅವರು, ‘ಡೆವಿಲ್’ ಚಿತ್ರದ ಶೂಟ್ ಪೂರ್ಣಗೊಳಿಸಿದ್ದರು. ಜೊತೆಗೆ ಡಬ್ಬಿಂಗ್ ಕೂಡ ಪೂರ್ಣಗೊಳಿಸಿದ್ದಾರೆ. ಈಗ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಇದೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸಿದ ಕಲಾವಿದರ ಪೋಸ್ಟರ್ ರಿಲೀಸ್ ಮಾಡಲಾಗುತ್ತಿದೆ.

ಗಿಲ್ಲಿ ನಟ ಕೂಡ ದರ್ಶನ್ ಜೊತೆ ‘ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವನ್ನು ಅವರು ಮಾಡುತ್ತಿದ್ದಾರೆ ಎಂದು ತಂಡ ಮಾಹಿತಿ ನೀಡಿದೆ. ಶರ್ಟ್ ಹಾಕಿ, ಅದಕ್ಕೆ ಟೈ ಹಾಕಿ ಗಿಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ.

ಈ ಸಿನಿಮಾ ಬಿಡುಗಡೆ ರಿಲೀಸ್ ದಿನಾಂಕ ಮುಂದಕ್ಕೆ ಹೊಗಲಿದೆ ಎಂಬ ಮಾಹಿತಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆದರೆ, ಇದನ್ನು ನಂಬಂದಂತೆ ಫ್ಯಾನ್ಸ್ ಕೋರಿಕೊಂಡಿದ್ದರು. ಈಗ ರಿಲೀಸ್ ಆಗಿರೋ ಪೋಸ್ಟರ್​ನಲ್ಲಿ ಡಿಸೆಂಬರ್ 12ರಂದೇ ಸಿನಿಮಾ ಬಿಡುಗಡೆ ಕಾಣಲಿದೆ ಎಂಬ ಸ್ಪಷ್ಟ ಉಲ್ಲೇಖ ಇದೆ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರೋ ಕಾವ್ಯಾ ಶೈವ ಅವರ ಫೇವರಿಟ್ ಹೀರೋ ಯಾರು ಗೊತ್ತಾ?

ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಕಾಶ್ ವೀರ್ ಅವರು ನಿರ್ದೇಶನ ಮಾಡಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ. ಅಲ್ಲದೇ, ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು ಕೂಡ ಬಿಡುಗಡೆಯಾಗಿ ಧೂಳೆಬ್ಬಿಸುತ್ತಿದೆ. ಈ ಚಿತ್ರಕ್ಕೆ ಮಿಲನಾ ಪ್ರಕಾಶ್ ನಿರ್ದೇಶನ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ