AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ

‘ಸರ್ಕಾರಿ ಶಾಲೆ ಹೆಚ್8’ ಸಿನಿಮಾದಲ್ಲಿ ಗಿಲ್ಲಿ ನಟ ಅಭಿನಯಿಸಿದ್ದಾರೆ. ಆದರೆ ಅದರ ಪ್ರಚಾರದಲ್ಲಿ ಅವರು ಭಾಗಿಯಾಗಿಲ್ಲ. ಹಾಗಾಗಿ ಗಿಲ್ಲಿ ವಿರುದ್ಧ ಚಿತ್ರತಂಡದವರು ಗರಂ ಆಗಿ, ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಅದಕ್ಕೆ ಗಿಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ನನ್ನ ಜಾಗದಲ್ಲಿ ಇದ್ದವರಿಗೆ ಮಾತ್ರ ನನ್ನ ಪರಿಸ್ಥಿತಿ ಏನು ಎಂಬುದು ಗೊತ್ತಾಗುತ್ತದೆ’ ಎಂದು ಗಿಲ್ಲಿ ನಟ ಹೇಳಿದ್ದಾರೆ.

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ
Gilli Nata
ಮದನ್​ ಕುಮಾರ್​
|

Updated on:Feb 09, 2026 | 6:52 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್​8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು ಚಿತ್ರತಂಡ ಗರಂ ಆಗಿದೆ. ಕರ್ನಾಟಕ ಚಲನಚಿತ್​ರ ವಾಣಿಜ್ಯ ಮಂಡಳಿಗೆ ದೂರು ಕೂಡ ನೀಡಲಾಗಿದೆ. ಆ ಬಗ್ಗೆ ಗಿಲ್ಲಿ ನಟ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಗಿಲ್ಲಿ ನಟ ಪ್ರಮುಖ ಪಾತ್ರ ಮಾಡಿರುವ ‘ಸೂಪರ್ ಹಿಟ್’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಆ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಗಿಲ್ಲಿ ಅವರಿಗೆ ಹಲವು ಪ್ರಶ್ನೆ ಎದುರಾಯಿತು. ‘ಸರ್ಕಾರಿ ಶಾಲೆ ಹೆಚ್​8’ ಚಿತ್ರದ ಪ್ರಚಾರಕ್ಕೆ ಯಾಕೆ ಹೋಗಿಲ್ಲ ಎಂಬ ಪ್ರಶ್ನೆಗೆ ಅವರು ಉತ್ತರ ನೀಡಿದರು.

‘ಸರ್ಕಾರಿ ಶಾಲೆ ಹೆಚ್​8 ಸಿನಿಮಾ ಮಾಡಿ ನನ್ನ ಪ್ರಕಾರ 2ರಿಂದ ಎರಡೂವರೆ ವರ್ಷ ಆಗಿರಬಹುದು. ಅದರಲ್ಲಿ ನಟನೆ ಮಾಡಿದ್ದೇನೆ. ನಾನು ನನ್ನ ಬೈಟ್ಸ್ ಕಳಿಸಿದ್ದೇನೆ. ಹಾಗಿದ್ದರೂ ಕೂಡ ಅವರು ಯಾಕೆ ದೂರು ನೀಡಿದರೋ ಗೊತ್ತಿಲ್ಲ. ನನಗೂ ಒಂದಷ್ಟು ಕೆಲಸಗಳ ಒತ್ತಡ ಇತ್ತು. ನಾನು ಫೋನ್ ಎತ್ತಿಲ್ಲ ಎಂಬ ಕಾರಣಕ್ಕೆ ಪಾಪ ಅವರಿಗೆ ಆ ರೀತಿ ಆಗಿರಬಹುದು. ಅವರದ್ದು ತಪ್ಪಿಲ್ಲ’ ಎಂದು ಗಿಲ್ಲಿ ನಟ ಹೇಳಿದ್ದಾರೆ.’

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ತಮ್ಮ ವಿರುದ್ಧ ದೂರು ದಾಖಲಾಗಿದ್ದರೂ ಕೂಡ ಗಿಲ್ಲಿ ನಟ ಅವರು ‘ಸರ್ಕಾರಿ ಶಾಲೆ ಹೆಚ್8’ ಚಿತ್ರತಂಡವನ್ನು ಸಂಪರ್ಕಿಸಲಿಲ್ಲ. ‘ಬೇರೆ ಕೆಲಸಗಳಲ್ಲಿ ನಾನು ಒಂದಷ್ಟು ಬ್ಯುಸಿ ಆದೆ. ವಾಣಿಜ್ಯ ಮಂಡಳಿಗೆ ನಾನು ಉತ್ತರ ಕೊಡಬೇಕಿತ್ತು. ಅದನ್ನು ನೀಡಿದ್ದೇನೆ’ ಎಂದು ಗಿಲ್ಲಿ ನಟ ಅವರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮುಗಿದು ಇಷ್ಟು ದಿನವಾದ್ರೂ ಕಡಿಮೆ ಆಗಿಲ್ಲ ಗಿಲ್ಲಿ ನಟ ಹವಾ

ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಅನೇಕರು ಫಿದಾ ಆಗಿದ್ದರು. ಹಲವು ಅಭಿಮಾನಿಗಳು ಗಿಲ್ಲಿಯ ಭಾವಚಿತ್ರವನ್ನು ಟ್ಯಾಟೂ ಹಾಕಿಸಿಕೊಂಡಿದ್ದರು. ಆ ಪೈಕಿ ಒಬ್ಬ ಅಭಿಮಾನಿಯನ್ನು ಭೇಟಿ ಆಗುವುದಾಗಿ ಗಿಲ್ಲಿ ಹೇಳಿದ್ದರು. ಆದರೆ ಬಿಗ್ ಬಾಸ್ ಮುಗಿದು ಇಷ್ಟು ದಿನ ಕಳೆದರೂ ಆ ಅಭಿಮಾನಿಯನ್ನು ಗಿಲ್ಲಿ ಭೇಟಿ ಆಗಿಲ್ಲ. ಅದಕ್ಕೂ ಅವರು ಸ್ಪಷ್ಟನೆ ನೀಡಿದ್ದಾರೆ. ‘ವಾಹಿನಿ ಕಡೆಯಿಂದ ಅವರೆಲ್ಲರನ್ನೂ ಕರೆಸಲು ಪ್ಲ್ಯಾನ್ ಆಗಿತ್ತು. ಆ ಅಭಿಮಾನಿಗೂ ಕರೆ ಮಾಡಲಾಗಿತ್ತು. ಆದರೆ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಎಲ್ಲರನ್ನೂ ಭೇಟಿ ಆಗುತ್ತೇನೆ. ತಕ್ಷಣಕ್ಕೆ ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ’ ಎಂದಿದ್ದಾರೆ ಗಿಲ್ಲಿ ನಟ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:46 pm, Mon, 9 February 26

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ