AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿ ಕಹಾನಿ ಇರುವ ‘ಮಾರ್ನಮಿ’ ಸಿನಿಮಾದಲ್ಲಿ ರಿತ್ವಿಕ್ ಮಠದ್; ಹೇಗಿದೆ ನೋಡಿ ಟೀಸರ್

‘ಮಾರ್ನಮಿ’ ಸಿನಿಮಾದ ಹೊಸ ಟೀಸರ್ ಅನಾವರಣ ಆಗಿದೆ. ಇದರಲ್ಲಿ ನಟ ರಿತ್ವಿಕ್ ಮಠದ್ ಅವರ ಪಾತ್ರ ಪರಿಚಯ ಮಾಡಲಾಗಿದೆ. ರಿಶಿತ್ ಶೆಟ್ಟಿ ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ರಿತ್ವಿಕ್ ಮಠದ್ ಜೊತೆ ಚೈತ್ರಾ ಜೆ. ಆಚಾರ್, ಸುಮನ್ ತಲ್ವಾರ್, ಪ್ರಕಾಶ್ ತುಮಿನಾಡು, ಸೋನು ಗೌಡ ಮುಂತಾದ ಕಲಾವಿದರು ನಟಿಸಿದ್ದಾರೆ.

ಕರಾವಳಿ ಕಹಾನಿ ಇರುವ ‘ಮಾರ್ನಮಿ’ ಸಿನಿಮಾದಲ್ಲಿ ರಿತ್ವಿಕ್ ಮಠದ್; ಹೇಗಿದೆ ನೋಡಿ ಟೀಸರ್
Marnami Movie Team
ಮದನ್​ ಕುಮಾರ್​
|

Updated on: Jun 11, 2025 | 7:09 PM

Share

ಕನ್ನಡದ ಕಿರುತೆರೆಯಲ್ಲಿ ನಟ ರಿತ್ವಿಕ್ ಮಠದ್ (Rithvik Mathad) ಅವರು ಫೇಮಸ್ ಆಗಿದ್ದಾರೆ. ‘ಅನುರೂಪ’, ‘ನಿನಗಾಗಿ’, ‘ಗಿಣಿರಾಮ’ ಸೀರಿಯಲ್​ಗಳಿಂದ ಅವರು ಜನರನ್ನು ರಂಜಿಸಿದ್ದಾರೆ. ಜೊತೆಗೆ ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ಹಿರಿತೆರೆಯಲ್ಲಿ ಈಗ ಅವರು ‘ಮಾರ್ನಮಿ’ (Marnami Movie) ಸಿನಿಮಾದಲ್ಲಿ ರಗಡ್ ಪಾತ್ರ ಮಾಡಿದ್ದಾರೆ. ‘ಗಿಫ್ಟ್ ಬಾಕ್ಸ್’ ಸಿನಿಮಾದ ನಂತರ ಸಮಯ ತೆಗೆದುಕೊಂಡು ಕಿರುತೆರೆಯಿಂದ ಈಗ ರಿತ್ವಿಕ್ ಮಠದ್ ಅವರು ಹಿರಿತೆರೆಗೆ ಮರಳಿದ್ದಾರೆ. ಒಂದೊಳ್ಳೆಯ ಕಥೆ ಮತ್ತು ತಂಡದ ಜೊತೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಮಾರ್ನಮಿ’ ಸಿನಿಮಾದ ಟೀಸರ್ (Marnami Movie Teaser) ಬಿಡುಗಡೆ ಆಗಿದೆ. ರಿತ್ವಿಕ್ ಮಠದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ಪಾತ್ರವನ್ನು ಪರಿಚಯ ಮಾಡಿಸುವಂತಹ ಟೀಸರ್ ಬಿಡುಗಡೆ ಮಾಡಲಾಗಿದೆ.

‘ಗುಣಾದ್ಯಾ ಪ್ರೊಡಕ್ಷನ್ಸ್’ ಯೂಟ್ಯೂಬ್ ಚಾನೆಲ್ ಮೂಲಕ ‘ಮಾರ್ನಮಿ’ ಟೀಸರ್ ವೀಕ್ಷಣೆಗೆ ಲಭ್ಯವಾಗಿದೆ. ಈ ಟೀಸರ್​ನಿಂದ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ ಆಗಿದೆ. ನಿರ್ದೇಶಕರು ಕಥೆಯ ರಹಸ್ಯವನ್ನು ಬಿಟ್ಟುಕೊಟ್ಟಿಲ್ಲ. ಆದರೂ ಕೂಡ ಕೌತುಕ ಮೂಡಿಸುವಲ್ಲಿ ಯಶಸ್ವಿ ಆಗಿದ್ದಾರೆ. ಚರಣ್ ರಾಜ್ ಅವರು ಸಂಗೀತ ನೀಡಿರುವುದು ಚಿತ್ರತಂಡಕ್ಕೆ ಪ್ಲಸ್ ಆಗಿದೆ.

‘ಮಾರ್ನಮಿ’ ಸಿನಿಮಾಗೆ ರಿಶಿತ್ ಶೆಟ್ಟಿ ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ. ಚಿತ್ರಕತೆ ಹಾಗೂ ಸಂಭಾಷಣೆ ಕೂಡ ಅವರದ್ದೇ. ಈ ಸಿನಿಮಾದಲ್ಲಿ ರಿತ್ವಿಕ್ ಮತ್ತು ಚೈತ್ರಾ ಜೆ. ಆಚಾರ್ ಜೋಡಿಯಾಗಿದ್ದಾರೆ. ಸುಮನ್ ತಲ್ವಾರ್, ಸೋನು ಗೌಡ, ಪ್ರಕಾಶ್ ತುಮಿನಾಡು, ಜ್ಯೋತೀಶ್ ಶೆಟ್ಟಿ, ಸ್ವರಾಜ್ ಶೆಟ್ಟಿ, ರೋಚಿತ್, ಮೈಮ್ ರಾಮದಾಸ್, ಚೈತ್ರಾ ಶೆಟ್ಟಿ ಮುಂತಾದ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ
Image
ಸೀರಿಯಲ್ ಟಿಆರ್​ಪಿಯಲ್ಲಿ ಈ ಧಾರಾವಾಹಿಯೇ ನಂಬರ್ 1; ದಾಖಲೆಗಳೆಲ್ಲ ಉಡೀಸ್
Image
‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ನಿಲ್ಲಿಸಲು ಬೇಡಿಕೆ ಇಟ್ಟ ವೀಕ್ಷಕರು; ಕಾರಣ?
Image
ಸಿಹಿಯ ಆತ್ಮ ಹಿಡಿದುಕೊಂಡ ಅಘೋರಿ; ಪ್ರಯಾಗ್​ರಾಜ್​​ನಲ್ಲಿ ‘ಸೀತಾ ರಾಮ’ ತಂಡ
Image
ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ನಟ

ಶಿವಸೇನ ಅವರು ಛಾಯಾಗ್ರಹಣ ಮಾಡಿದ್ದಾರೆ. ವರ್ಷಾ ಆಚಾರ್ ವಸ್ತ್ರ ವಿನ್ಯಾಸ ಮಾಡಿದ್ದಾರೆ. ‘ಗುಣಾಧ್ಯ ಪ್ರೊಡಕ್ಷನ್ಸ್’ ಮೂಲಕ ಶಿಲ್ಪಾ ನಿಶಾಂತ್ ಅವರು ‘ಮಾರ್ನಮಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಕಾರ್ತಿಕ್ ಮಹೇಶ್, ಕೆಪಿ ಅರವಿಂದ್, ದಿವ್ಯ ಉರುಡುಗ ಮುಂತಾದವರು ಸಾಕ್ಷಿಯಾದರು.

ನಿರ್ಮಾಪಕ ನಿಶಾಂತ್ ಅವರು ಸಿನಿಮಾ ಬಗ್ಗೆ ಮಾತನಾಡಿದರು. ‘ಶೀಘ್ರದಲ್ಲೇ ಟ್ರೇಲರ್ ಬರಲಿದೆ. ನಮ್ಮ ಸಿನಿಮಾದಲ್ಲಿ ಅತ್ಯುತ್ತಮ ಪಾತ್ರವರ್ಗ ಮತ್ತು ತಂತ್ರಜ್ಞರು ಇದ್ದಾರೆ. ನಿರ್ಮಾಣದಲ್ಲಿ ನನ್ನ ಪತ್ನಿ ಸಾಥ್ ನೀಡಿದರು. ಚಿತ್ರೀಕರಣ ಮುಕ್ತಾಯ ಆಗಿದೆ. ಸೆಪ್ಟೆಂಬರ್​ನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುವ ಗುರಿ ಇದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಗಿಣಿರಾಮ’ ಸೀರಿಯಲ್​ ನಟ ರಿತ್ವಿಕ್​ಗೆ ಜಿಮ್​ನಲ್ಲಿ ಎದುರಾಗಿತ್ತು ವಿಚಿತ್ರ ಪ್ರಶ್ನೆ

ಈ ಮೊದಲು ಬಿಡುಗಡೆ ಮಾಡಿದ್ದ ಎರಡು ಟೀಸರ್​ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿರುವುದು ನಿರ್ದೇಶಕ ರಿಶಿತ್ ಶೆಟ್ಟಿ ಅವರಿಗೆ ಖುಷಿ ನೀಡಿದೆ. ಸಿನಿಮಾ ಮೂಡಿಬರುತ್ತಿರುವ ರೀತಿಗೆ ನಟ ರಿತ್ವಿಕ್ ಮಠದ್ ಅವರು ಸಂತಸ ವ್ಯಕ್ತಪಡಿಸಿದರು. ಒಂದೊಳ್ಳೆಯ ಟೀಮ್ ಜೊತೆ ಕೆಲಸ ಮಾಡಿದ್ದಕ್ಕೆ ನಟಿ ಚೈತ್ರಾ ಜೆ. ಆಚಾರ್ ಅವರಿಗೂ ಖುಷಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!