AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್

‘ಉಗ್ರಾವತಾರ’ ಚಿತ್ರದಲ್ಲಿ ಖಡಕ್ ಪೋಲೀಸ್ ಇನ್ಸ್‌ಪೆಕ್ಟರ್ ಆಗಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ವಿಶೇಷ ಪ್ರಮೋಷನ್​ ಸಾಂಗ್​ ಒಂದನ್ನು ನಿರ್ದೇಶಕ ಗುರುಮೂರ್ತಿ ಪ್ಲ್ಯಾನ್​ ಮಾಡಿದ್ದಾರೆ.

ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್
ಪ್ರಿಯಾಂಕ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್
TV9 Web
| Edited By: |

Updated on:Jan 16, 2022 | 8:53 PM

Share

ದುನಿಯಾ ವಿಜಯ್​ (Duniya Vijay) ನಟನೆಯ ‘ಸಲಗ’ ಸಿನಿಮಾದ (Salaga Movie) ಪ್ರಮೋಷನಲ್​ ಸಾಂಗ್​ ‘ಟಿಣಿಂಗ ಮಿಣಿಂಗ ಟಿಶ್ಯಾ..’ ಹಾಡು ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿತ್ತು. ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಮಂಚಿಕೇರಿ ಗ್ರಾಮದ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ಈ ಹಾಡನ್ನು ಹಾಡಿದ್ದರು. ಅವರ ಧ್ವನಿ ಹಾಡಿಗೆ ಅದ್ಭುತವಾಗಿ ಒಪ್ಪಿತ್ತು. ಈಗ ಇದೇ ಸಹೋದರಿಯರಿಂದ ಮತ್ತೊಂದು ವಿಶೇಷ ಹಾಡು ಮೂಡಿ ಬರುತ್ತಿದೆ. ಪ್ರಿಯಾಂಕಾ ಉಪೇಂದ್ರ ಅಭಿನಯದ ‘ಉಗ್ರಾವತಾರ’ ಚಿತ್ರದ ಪ್ರಮೋಷನಲ್​ ಸಾಂಗ್​ ಅನ್ನು ಗೀತಾ ಸಿದ್ದಿ ಹಾಗೂ ಗಿರಿಜಾ ಸಿದ್ದಿ ಬರೆದು ಹಾಡಿದ್ದಾರೆ.

‘ಉಗ್ರಾವತಾರ’ ಚಿತ್ರದಲ್ಲಿ ಖಡಕ್ ಪೋಲೀಸ್ ಇನ್ಸ್‌ಪೆಕ್ಟರ್ ಆಗಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ವಿಶೇಷ ಪ್ರಮೋಷನ್​ ಸಾಂಗ್​ ಒಂದನ್ನು ನಿರ್ದೇಶಕ ಗುರುಮೂರ್ತಿ ಪ್ಲ್ಯಾನ್​ ಮಾಡಿದ್ದಾರೆ. ಈ ಹಾಡನ್ನು ಗಿರಿಜಾ ಸಿದ್ದಿ ಅವರೇ ಬರೆದಿದ್ದು, ರಾಧಾಕೃಷ್ಣ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಕೊಂಕಣಿ, ಉರ್ದು ಹಾಗೂ ಕನ್ನಡ ಸಾಹಿತ್ಯವನ್ನು ಈ ಹಾಡು ಹೊಂದಿದೆ. ‘ಅಯ್ಯೋ ಮಾಜೋದೇವ, ಅಯ್ಯೋಯ್ಯೋ ಮಾಜೋದೇವ’ ಎಂಬ ಗೀತೆ ಇದಾಗಿದ್ದು, ‘ಅಯ್ಯೋ ನನ್ನ ದೇವರೆ, ನಾವು ಕಷ್ಟದಲ್ಲಿ ಇದ್ದೇವೆ ನಮ್ಮನ್ನು ಬಂದು ಕಾಪಾಡು..’ ಎನ್ನುವ ಅರ್ಥವನ್ನು ಈ ಹಾಡು ನೀಡುತ್ತದೆ.

‘ಎರಡು ದಿನಗಳ ಹಿಂದೆ ಈ ಹಾಡಿನ ರೆಕಾರ್ಡಿಂಗ್​ ಆಗಿದೆ. ‘ಸಲಗ’ ಹಾಡು ಹಿಟ್​ ಆದ ನಂತರ ನಮಗೂ ಒಂದು ಪ್ರಮೋಷನಲ್​ ಸಾಂಗ್​ ಮಾಡಿಕೊಡಬೇಕು ಎಂದು ಗಿರಿಜಾ ಸಿದ್ದಿ ಬಳಿ ಕೇಳಿಕೊಂಡೆವು. ಅವರಿಗೆ ನಮ್ಮ ಸಿನಿಮಾದ ಕಂಟೆಂಟ್​ ಇಷ್ಟ ಆಯಿತು. ಅವರು ಅದಕ್ಕೆ ಒಪ್ಪಿಕೊಂಡರು. ಅವರೇ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಇದೇ ತಿಂಗಳಲ್ಲೇ ಶೂಟಿಂಗ್​ ನಡೆಯಲಿದೆ. ಇದಕ್ಕೆ ಸೆಟ್​ ಹಾಕಬೇಕು. ಮೂರು ದಿನ ಚಿತ್ರೀಕರಣ ಮಾಡುವ ಪ್ಲ್ಯಾನ್​ ಮಾಡಿದ್ದೇವೆ. ಸಿದ್ದಿ ತಂಡ ಮತ್ತು ಪ್ರಿಯಾಂಕಾ ಉಪೇಂದ್ರ ಅವರು ಈ ಹಾಡಿನಲ್ಲಿ ಇರುತ್ತಾರೆ. ಈ ಹಾಡು ಸಿನಿಮಾದಲ್ಲೂ ಬರಲಿದೆ’ ಎಂದಿದ್ದಾರೆ ನಿರ್ದೇಶಕ ಗುರುಮೂರ್ತಿ.

‘ಸಮಾಜ ಕೆಟ್ಟು ಹೋಗಿದೆ, ಬಂದು ಕಾಪಾಡು ಎಂದು ದೇವರ ಬಳಿ ಕೋರಿಕೊಳ್ಳುವ ಸಂದರ್ಭದಲ್ಲಿ ಈ ಹಾಡು ಬರುತ್ತದೆ. ಪ್ರಿಯಾಂಕಾ ಉಪೇಂದ್ರ ಅವರು ಈ ಹಾಡನ್ನು ತುಂಬಾನೇ ಇಷ್ಟಪಟ್ಟಿದ್ದಾರೆ. ಹಾಡಿನ ರೆಕಾರ್ಡಿಂಗ್​ ವೇಳೆ ಪ್ರಿಯಾಂಕಾ ಕೂಡ ಇನ್ವಾಲ್​ ಆಗಿಬಿಟ್ಟಿದ್ದರು. ಶೀಘ್ರದಲ್ಲೇ ಈ ಬಗ್ಗೆ ಅಪ್​ಡೇಟ್​ ನೀಡುತ್ತೇವೆ’ ಎಂದು ಹಾಡಿನ ಬಗ್ಗೆ ಮಾಹಿತಿ ನೀಡುತ್ತಾರೆ ಗುರುಮೂರ್ತಿ.

ತಾರಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮುಂತಾದವರು ಇದ್ದಾರೆ.  ನಂದಕುಮಾರ್ ಛಾಯಾಗ್ರಹಣ, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋಧ್-ಮಾಸ್‌ಮಾದ-ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ. ಸಿನಿಮಾದ ಬಹುತೇಕ ಶೂಟಿಂಗ್​ ಪೂರ್ಣಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್​ ಮಾಡೋ ಆಲೋಚನೆ ಚಿತ್ರತಂಡದ್ದು.

ಇದನ್ನೂ ಓದಿ: Girija Siddhi: ‘ಟಿಣಿಂಗ್ ಮಿಣಿಂಗ್ ಟಿಷ್ಯಾ’ ಮೂಲಕ ಕರುನಾಡ ಮನೆದ್ದಿರುವ ಗಿರಿಜಾ ಸಿದ್ದಿ ಮತ್ತು ತಂಡದವರ ವಿಶೇಷ ಸಂದರ್ಶನ

‘ಟಿಣಿಂಗಾ ಮಿಣಿಂಗಾ ಟಿಶ್ಯಾ..’ ಹಾಡು ನೋಡಿ ಮನಸಾರೆ ಎಂಜಾಯ್​ ಮಾಡಿದ ಫೈಟ್​ ಮಾಸ್ಟರ್​ ರಾಮ್​-ಲಕ್ಷ್ಮಣ್​

Published On - 8:49 pm, Sun, 16 January 22

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ