ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್

‘ಉಗ್ರಾವತಾರ’ ಚಿತ್ರದಲ್ಲಿ ಖಡಕ್ ಪೋಲೀಸ್ ಇನ್ಸ್‌ಪೆಕ್ಟರ್ ಆಗಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ವಿಶೇಷ ಪ್ರಮೋಷನ್​ ಸಾಂಗ್​ ಒಂದನ್ನು ನಿರ್ದೇಶಕ ಗುರುಮೂರ್ತಿ ಪ್ಲ್ಯಾನ್​ ಮಾಡಿದ್ದಾರೆ.

ಪ್ರಿಯಾಂಕಾ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್​; ಬರುತ್ತಿದೆ ಮತ್ತೊಂದು ಕೊಂಕಣಿ ಸಾಂಗ್
ಪ್ರಿಯಾಂಕ ಉಪೇಂದ್ರ ‘ಉಗ್ರಾವತಾರ’ಕ್ಕೆ ಗಿರಿಜಾ ಸಿದ್ದಿ ಸಾತ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 16, 2022 | 8:53 PM

ದುನಿಯಾ ವಿಜಯ್​ (Duniya Vijay) ನಟನೆಯ ‘ಸಲಗ’ ಸಿನಿಮಾದ (Salaga Movie) ಪ್ರಮೋಷನಲ್​ ಸಾಂಗ್​ ‘ಟಿಣಿಂಗ ಮಿಣಿಂಗ ಟಿಶ್ಯಾ..’ ಹಾಡು ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿಕೊಂಡಿತ್ತು. ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಮಂಚಿಕೇರಿ ಗ್ರಾಮದ ಗೀತಾ ಸಿದ್ದಿ ಮತ್ತು ಗಿರಿಜಾ ಸಿದ್ದಿ ಈ ಹಾಡನ್ನು ಹಾಡಿದ್ದರು. ಅವರ ಧ್ವನಿ ಹಾಡಿಗೆ ಅದ್ಭುತವಾಗಿ ಒಪ್ಪಿತ್ತು. ಈಗ ಇದೇ ಸಹೋದರಿಯರಿಂದ ಮತ್ತೊಂದು ವಿಶೇಷ ಹಾಡು ಮೂಡಿ ಬರುತ್ತಿದೆ. ಪ್ರಿಯಾಂಕಾ ಉಪೇಂದ್ರ ಅಭಿನಯದ ‘ಉಗ್ರಾವತಾರ’ ಚಿತ್ರದ ಪ್ರಮೋಷನಲ್​ ಸಾಂಗ್​ ಅನ್ನು ಗೀತಾ ಸಿದ್ದಿ ಹಾಗೂ ಗಿರಿಜಾ ಸಿದ್ದಿ ಬರೆದು ಹಾಡಿದ್ದಾರೆ.

‘ಉಗ್ರಾವತಾರ’ ಚಿತ್ರದಲ್ಲಿ ಖಡಕ್ ಪೋಲೀಸ್ ಇನ್ಸ್‌ಪೆಕ್ಟರ್ ಆಗಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ವಿಶೇಷ ಪ್ರಮೋಷನ್​ ಸಾಂಗ್​ ಒಂದನ್ನು ನಿರ್ದೇಶಕ ಗುರುಮೂರ್ತಿ ಪ್ಲ್ಯಾನ್​ ಮಾಡಿದ್ದಾರೆ. ಈ ಹಾಡನ್ನು ಗಿರಿಜಾ ಸಿದ್ದಿ ಅವರೇ ಬರೆದಿದ್ದು, ರಾಧಾಕೃಷ್ಣ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಕೊಂಕಣಿ, ಉರ್ದು ಹಾಗೂ ಕನ್ನಡ ಸಾಹಿತ್ಯವನ್ನು ಈ ಹಾಡು ಹೊಂದಿದೆ. ‘ಅಯ್ಯೋ ಮಾಜೋದೇವ, ಅಯ್ಯೋಯ್ಯೋ ಮಾಜೋದೇವ’ ಎಂಬ ಗೀತೆ ಇದಾಗಿದ್ದು, ‘ಅಯ್ಯೋ ನನ್ನ ದೇವರೆ, ನಾವು ಕಷ್ಟದಲ್ಲಿ ಇದ್ದೇವೆ ನಮ್ಮನ್ನು ಬಂದು ಕಾಪಾಡು..’ ಎನ್ನುವ ಅರ್ಥವನ್ನು ಈ ಹಾಡು ನೀಡುತ್ತದೆ.

‘ಎರಡು ದಿನಗಳ ಹಿಂದೆ ಈ ಹಾಡಿನ ರೆಕಾರ್ಡಿಂಗ್​ ಆಗಿದೆ. ‘ಸಲಗ’ ಹಾಡು ಹಿಟ್​ ಆದ ನಂತರ ನಮಗೂ ಒಂದು ಪ್ರಮೋಷನಲ್​ ಸಾಂಗ್​ ಮಾಡಿಕೊಡಬೇಕು ಎಂದು ಗಿರಿಜಾ ಸಿದ್ದಿ ಬಳಿ ಕೇಳಿಕೊಂಡೆವು. ಅವರಿಗೆ ನಮ್ಮ ಸಿನಿಮಾದ ಕಂಟೆಂಟ್​ ಇಷ್ಟ ಆಯಿತು. ಅವರು ಅದಕ್ಕೆ ಒಪ್ಪಿಕೊಂಡರು. ಅವರೇ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಇದೇ ತಿಂಗಳಲ್ಲೇ ಶೂಟಿಂಗ್​ ನಡೆಯಲಿದೆ. ಇದಕ್ಕೆ ಸೆಟ್​ ಹಾಕಬೇಕು. ಮೂರು ದಿನ ಚಿತ್ರೀಕರಣ ಮಾಡುವ ಪ್ಲ್ಯಾನ್​ ಮಾಡಿದ್ದೇವೆ. ಸಿದ್ದಿ ತಂಡ ಮತ್ತು ಪ್ರಿಯಾಂಕಾ ಉಪೇಂದ್ರ ಅವರು ಈ ಹಾಡಿನಲ್ಲಿ ಇರುತ್ತಾರೆ. ಈ ಹಾಡು ಸಿನಿಮಾದಲ್ಲೂ ಬರಲಿದೆ’ ಎಂದಿದ್ದಾರೆ ನಿರ್ದೇಶಕ ಗುರುಮೂರ್ತಿ.

‘ಸಮಾಜ ಕೆಟ್ಟು ಹೋಗಿದೆ, ಬಂದು ಕಾಪಾಡು ಎಂದು ದೇವರ ಬಳಿ ಕೋರಿಕೊಳ್ಳುವ ಸಂದರ್ಭದಲ್ಲಿ ಈ ಹಾಡು ಬರುತ್ತದೆ. ಪ್ರಿಯಾಂಕಾ ಉಪೇಂದ್ರ ಅವರು ಈ ಹಾಡನ್ನು ತುಂಬಾನೇ ಇಷ್ಟಪಟ್ಟಿದ್ದಾರೆ. ಹಾಡಿನ ರೆಕಾರ್ಡಿಂಗ್​ ವೇಳೆ ಪ್ರಿಯಾಂಕಾ ಕೂಡ ಇನ್ವಾಲ್​ ಆಗಿಬಿಟ್ಟಿದ್ದರು. ಶೀಘ್ರದಲ್ಲೇ ಈ ಬಗ್ಗೆ ಅಪ್​ಡೇಟ್​ ನೀಡುತ್ತೇವೆ’ ಎಂದು ಹಾಡಿನ ಬಗ್ಗೆ ಮಾಹಿತಿ ನೀಡುತ್ತಾರೆ ಗುರುಮೂರ್ತಿ.

ತಾರಗಣದಲ್ಲಿ ಸುಮನ್, ಪವಿತ್ರಾ ಲೋಕೇಶ್, ಶೋಭ, ನಟರಾಜ್ ಮುಂತಾದವರು ಇದ್ದಾರೆ.  ನಂದಕುಮಾರ್ ಛಾಯಾಗ್ರಹಣ, ಕಿನ್ನಾಳ್‌ರಾಜ್ ಸಾಹಿತ್ಯ ಮತ್ತು ಸಂಭಾಷಣೆ, ವಿನೋಧ್-ಮಾಸ್‌ಮಾದ-ಅಶೋಕ್ ಸಾಹಸ, ವೆಂಕಿ.ಯುಡಿವಿ ಸಂಕಲನ ಚಿತ್ರಕ್ಕಿದೆ. ಸಿನಿಮಾದ ಬಹುತೇಕ ಶೂಟಿಂಗ್​ ಪೂರ್ಣಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್​ ಮಾಡೋ ಆಲೋಚನೆ ಚಿತ್ರತಂಡದ್ದು.

ಇದನ್ನೂ ಓದಿ: Girija Siddhi: ‘ಟಿಣಿಂಗ್ ಮಿಣಿಂಗ್ ಟಿಷ್ಯಾ’ ಮೂಲಕ ಕರುನಾಡ ಮನೆದ್ದಿರುವ ಗಿರಿಜಾ ಸಿದ್ದಿ ಮತ್ತು ತಂಡದವರ ವಿಶೇಷ ಸಂದರ್ಶನ

‘ಟಿಣಿಂಗಾ ಮಿಣಿಂಗಾ ಟಿಶ್ಯಾ..’ ಹಾಡು ನೋಡಿ ಮನಸಾರೆ ಎಂಜಾಯ್​ ಮಾಡಿದ ಫೈಟ್​ ಮಾಸ್ಟರ್​ ರಾಮ್​-ಲಕ್ಷ್ಮಣ್​

Published On - 8:49 pm, Sun, 16 January 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್