Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ. ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ […]

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ
Follow us
ಸಾಧು ಶ್ರೀನಾಥ್​
|

Updated on:Jan 20, 2020 | 11:01 AM

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ.

ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ ನಡೆಸುವಂತೆ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಬೆಂಗಳೂರಿನ ಗಿರಿನಗರ ಪೊಲೀಸರಿಗೆ ಸೂಚಿಸಿದ್ದಾರೆ.

ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಕ್ಕೆ ಕ್ಷಮೆಯಾಚಿಸಿದ ವಿಜಯ್: ದುನಿಯಾ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದಕ್ಕೆ ಕ್ಷಮೆಯಾಚಿಸಿದ್ದಾರೆ. ಹುಟ್ಟುಹಬ್ಬ ಆಚರಣೆಯ ವೇಳೆ ಯಾರೋ ತಲ್ವಾರ್ ಕೊಟ್ರು. ಈ ವೇಳೆ ನಾನು ಗೊತ್ತಿಲ್ಲದೆ ಕೇಕ್ ಕಟ್ ಮಾಡಿದ್ದೇನೆ. ಇದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಪೊಲೀಸರಿಗೂ ನಾನು ಸ್ಪಷ್ಟನೆಯನ್ನು ನೀಡುತ್ತೇನೆ ಎಂದು ನಟ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ.

ಹುಟ್ಟುಹಬ್ಬದಂದೆ ಸಲಗ ಟೀಸರ್ ರಿಲೀಸ್: ನಿನ್ನೆ ತಡರಾತ್ರಿ ರಾಜ್ಯದ ಅನೇಕ ಕಡೆಗಳಿಂದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮನೆಗೆ ತೆರಳಿ ದುನಿಯಾ ವಿಜಿಯ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಇದೇ ವೇಳೆ ಸಲಗ ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಿದ್ದು, ಟೀಸರ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ನನ್ನ ಬರ್ತಡೇ ಅನ್ನೋದಕ್ಕಿಂತ ಇದು ಸಲಗ ಚಿತ್ರದ ಬರ್ತಡೆ. ಸ್ನೇಹದಲ್ಲಿ ಬದುಕೋದು ನನಗೆ ಇಷ್ಟ. ಚಿತ್ರದ ನಿರ್ದೇಶಕನಾದ ಮೇಲೆ ಇದು ಮೊದಲ ಹುಟ್ಟುಹಬ್ಬ. ಹೀಗಾಗಿ ಸಲಗದ ಹುಟ್ಟುಹಬ್ಬವಿದು. ಫೆಬ್ರವರಿ 14ಕ್ಕೆ ಮತ್ತೊಂದು ಸಾಂಗ್ ಟ್ರೈಲರ್ ಬಿಡ್ತೇವೆ. ನಮ್ಮ ಚಿತ್ರ ತಂಡ ನನಗೆ ಬಲ ತಂದು ಕೊಟ್ಟಿದೆ ಎಂದು ವಿಜಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

Published On - 10:52 am, Mon, 20 January 20

ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ