AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ. ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ […]

ತಲ್ವಾರ್​ನಿಂದ ಕೇಕ್ ಕತ್ತರಿಸಿದ ಕರಿ ಚಿರತೆ, ನೋಟಿಸ್ ನೀಡಲು ಗಿರಿನಗರ ಪೊಲೀಸರ ಸಿದ್ಧತೆ
ಸಾಧು ಶ್ರೀನಾಥ್​
|

Updated on:Jan 20, 2020 | 11:01 AM

Share

ಬೆಂಗಳೂರು: ನಟ ದುನಿಯಾ ವಿಜಯ್ ಇಂದು ತಮ್ಮ 46ನೇ ವರ್ಷದ ಹುಟ್ಟುಹಬ್ಬವನ್ನು ಹೊಸಕೇರಿಹಳ್ಳಿಯ ತಮ್ಮ ನಿವಾಸದಲ್ಲಿ ಆಚರಿಸಿಕೊಂಡಿದ್ದಾರೆ. ಆದರೆ ಈ ಸೆಲಬ್ರೇಷನ್​ನಿಂದ ವಿಜಿಗೆ ಸಂಕಷ್ಟ ಎದುರಾಗಿದೆ. ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾರೆ. ಆದರೆ ಸಂಕಷ್ಟತಂದಿದ್ದು, ಕೇಕ್ ಕತ್ತರಿಸಲು ಬಳಸಿದ ಲಾಂಗ್​ನಿಂದ.

ನಿನ್ನೆ ತಡರಾತ್ರಿ ಅಭಿಮಾನಿಗಳ ಜೊತೆ ಬರ್ತಡೇ ಸೆಲಬ್ರೇಷನ್ ಮಾಡಿಕೊಂಡ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಾರೆ. ಈ ಹಿನ್ನೆಲೆ ನಟ ದುನಿಯಾ ವಿಜಯ್‌ಗೆ ನೋಟಿಸ್ ನೀಡಲು ಸೂಚನೆ ನೀಡಲಾಗಿದೆ. ನೋಟಿಸ್ ನೀಡಿ ವಿಚಾರಣೆ ನಡೆಸುವಂತೆ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್ ಬೆಂಗಳೂರಿನ ಗಿರಿನಗರ ಪೊಲೀಸರಿಗೆ ಸೂಚಿಸಿದ್ದಾರೆ.

ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದಕ್ಕೆ ಕ್ಷಮೆಯಾಚಿಸಿದ ವಿಜಯ್: ದುನಿಯಾ ವಿಜಯ್ ತಲ್ವಾರ್‌ನಿಂದ ಕೇಕ್ ಕತ್ತರಿಸಿದಕ್ಕೆ ಕ್ಷಮೆಯಾಚಿಸಿದ್ದಾರೆ. ಹುಟ್ಟುಹಬ್ಬ ಆಚರಣೆಯ ವೇಳೆ ಯಾರೋ ತಲ್ವಾರ್ ಕೊಟ್ರು. ಈ ವೇಳೆ ನಾನು ಗೊತ್ತಿಲ್ಲದೆ ಕೇಕ್ ಕಟ್ ಮಾಡಿದ್ದೇನೆ. ಇದಕ್ಕೆ ನಾನು ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಪೊಲೀಸರಿಗೂ ನಾನು ಸ್ಪಷ್ಟನೆಯನ್ನು ನೀಡುತ್ತೇನೆ ಎಂದು ನಟ ದುನಿಯಾ ವಿಜಯ್ ಕ್ಷಮೆಯಾಚಿಸಿದ್ದಾರೆ.

ಹುಟ್ಟುಹಬ್ಬದಂದೆ ಸಲಗ ಟೀಸರ್ ರಿಲೀಸ್: ನಿನ್ನೆ ತಡರಾತ್ರಿ ರಾಜ್ಯದ ಅನೇಕ ಕಡೆಗಳಿಂದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮನೆಗೆ ತೆರಳಿ ದುನಿಯಾ ವಿಜಿಯ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಇದೇ ವೇಳೆ ಸಲಗ ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಿದ್ದು, ಟೀಸರ್ ನೋಡಿ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ನನ್ನ ಬರ್ತಡೇ ಅನ್ನೋದಕ್ಕಿಂತ ಇದು ಸಲಗ ಚಿತ್ರದ ಬರ್ತಡೆ. ಸ್ನೇಹದಲ್ಲಿ ಬದುಕೋದು ನನಗೆ ಇಷ್ಟ. ಚಿತ್ರದ ನಿರ್ದೇಶಕನಾದ ಮೇಲೆ ಇದು ಮೊದಲ ಹುಟ್ಟುಹಬ್ಬ. ಹೀಗಾಗಿ ಸಲಗದ ಹುಟ್ಟುಹಬ್ಬವಿದು. ಫೆಬ್ರವರಿ 14ಕ್ಕೆ ಮತ್ತೊಂದು ಸಾಂಗ್ ಟ್ರೈಲರ್ ಬಿಡ್ತೇವೆ. ನಮ್ಮ ಚಿತ್ರ ತಂಡ ನನಗೆ ಬಲ ತಂದು ಕೊಟ್ಟಿದೆ ಎಂದು ವಿಜಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

Published On - 10:52 am, Mon, 20 January 20

ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ