AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ, ಅವರು ಸೋಮಾರಿ ಆಗಲ್ಲ’; ಕಾಂಗ್ರೆಸ್ ಯೋಜನೆ ಬಗ್ಗೆ ಧನಂಜಯ್ ಮಾತು

ಶಾಲಾ ಪ್ರಾರಂಭೋತ್ಸವಕ್ಕೆ ಧನಂಜಯ್ ಅವರು ಚಾಲನೆ ನೀಡಿದರು. ಆ ಬಳಿಕ ರಾಜ್ಯ ಸರ್ಕಾರದಿಂದ ಉಚಿತವಾಗಿ 10 ಕೆಜಿ ಅಕ್ಕಿ ನೀಡುವ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

‘ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ, ಅವರು ಸೋಮಾರಿ ಆಗಲ್ಲ’; ಕಾಂಗ್ರೆಸ್ ಯೋಜನೆ ಬಗ್ಗೆ ಧನಂಜಯ್ ಮಾತು
ಧನಂಜಯ್​-ಸಿದ್ದಾರಾಮಯ್ಯ
TV9 Web
| Edited By: |

Updated on: May 31, 2023 | 12:19 PM

Share

ನಟ ಧನಂಜಯ್ (Dhananjay) ಅವರು ಸದಾ ವಿವಾದಗಳಿಂದ ದೂರ ಇರೋಕೆ ಬಯಸುತ್ತಾರೆ. ಅವರು ಸಿನಿಮಾ ಕೆಲಸಗಳ ಜೊತೆ ಹಲವು ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದರೆ ಆ ರೀತಿಯ ಕೆಲಸಗಳನ್ನು ಮಾಡಲು ಧನಂಜಯ್ ಹೆಚ್ಚು ಆದ್ಯತೆ ನೀಡುತ್ತಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಲುವರಸನಕೊಪ್ಪಲು ಗ್ರಾಮದಲ್ಲಿನ ಶಾಲೆ ಪ್ರಾರಂಭೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರು ಇಂದು (ಮೇ 31) ಚಾಲನೆ ನೀಡಿದ್ದಾರೆ. ಆ ಬಳಿಕ ಅವರು ಮಾಧ್ಯಮದ ಜೊತೆ ಮಾತನಾಡಿ ಹಲವು ವಿಚಾರ ಹಂಚಿಕೊಂಡಿದ್ದಾರೆ.

ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿವೆ. ಚಲುವರಸನಕೊಪ್ಪಲು ಗ್ರಾಮದ ಶಾಲೆಯನ್ನು ಮಾದರಿ ಶಾಲೆಯಾಗಿ ಬದಲಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟೇಪ್ ಕತ್ತರಿಸಿ ಶಾಲೆಗೆ ಚಾಲನೆ ನೀಡಿದ್ದಾರೆ ಡಾಲಿ. ಅವರು ಒಂದು ರೌಂಡ್ ಹಾಕಿ ಶಾಲಾ ಕಟ್ಟಡದ ವೀಕ್ಷಿಸಿದ್ದಾರೆ.

ಉಚಿತ ಅಕ್ಕಿ ಬಗ್ಗೆ ಮಾತನಾಡಿದ ಧನಂಜಯ್

ಧನಂಜಯ್ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದಿಂದ ಉಚಿತವಾಗಿ 10 ಕೆಜಿ ಅಕ್ಕಿ ನೀಡುವ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ಯಾವುದೇ ಪಕ್ಷದ ಪರವಾಗಿ ಅಥವಾ ವಿರೋಧವಾಗಿ ನಾನು ಮಾತನಾಡುವುದಿಲ್ಲ. ಸಾಮಾನ್ಯ ಮನುಷ್ಯನಾಗಿ ನಾನು‌ ಹೇಳ್ತೀನಿ. ಹಸಿವು ನೀಗಿಸಲು ಉಚಿತವಾಗಿ ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ. ಅಕ್ಕಿ ಕೊಟ್ಟರೆ ಜನರು ಸೋಮಾರಿ ಆಗ್ತಾರೆ ಅನ್ನೋದು ತಪ್ಪು. ಅಕ್ಕಿ ಕೊಟ್ಟರೆ ಹಸಿವು ನೀಗುತ್ತದೆ. ಇತರೆ ಖರ್ಚಿಗೆ ಬಡವರು ದುಡಿಯುತ್ತಾರೆ. ಬಡವರಿಗೆ ಅಕ್ಕಿ ಕೊಟ್ಟರೆ ಸೋಮಾರಿ ಆಗ್ತಾರೆ ಅನ್ನೋದು ತಪ್ಪು’ ಎಂದು ಧನಂಜಯ್ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಹತ್ತು ವರ್ಷ ಪೂರೈಸಿದ ಡಾಲಿ ಧನಂಜಯ್, 25 ಸಿನಿಮಾ ಮಾಡಿದ್ದು ಸಾಧನೆಯೇ?

‘ಸರ್ಕಾರಿ ಶಾಲೆಗಳಲ್ಲಿ‌ ಉತ್ತಮ ಶಿಕ್ಷಣ ಸಿಗುತ್ತಿದೆ. ಒಂದು ಕ್ಷೇತ್ರದಲ್ಲಿ ಎಲ್ಲವೂ ಸರಿ ಇರಲ್ಲ. ನ್ಯೂನ್ಯತೆಗಳನ್ನು ಸರಿಮಾಡಿಕೊಂಡು ಉತ್ತಮ ಶಿಕ್ಷಣ ಕೊಡಬೇಕು’ ಎಂದು ಧನಂಜಯ್ ಅಭಿಪ್ರಾಯಪಟ್ಟರು.

‘ಹೊಯ್ಸಳ’ದಿಂದ ಯಶಸ್ಸು

ಧನಂಜಯ್ ನಟನೆಯ ‘ಗುರುದೇವ್ ಹೊಯ್ಸಳ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಆಗಿ ಧನಂಜಯ್ ಗಮನ ಸೆಳೆದರು. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ‘ಕೆಆರ್​ಜಿ ಸ್ಟುಡಿಯೋ’ ಮೂಲಕ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ