AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ, ಅವರು ಸೋಮಾರಿ ಆಗಲ್ಲ’; ಕಾಂಗ್ರೆಸ್ ಯೋಜನೆ ಬಗ್ಗೆ ಧನಂಜಯ್ ಮಾತು

ಶಾಲಾ ಪ್ರಾರಂಭೋತ್ಸವಕ್ಕೆ ಧನಂಜಯ್ ಅವರು ಚಾಲನೆ ನೀಡಿದರು. ಆ ಬಳಿಕ ರಾಜ್ಯ ಸರ್ಕಾರದಿಂದ ಉಚಿತವಾಗಿ 10 ಕೆಜಿ ಅಕ್ಕಿ ನೀಡುವ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

‘ಬಡವರಿಗೆ ಅಕ್ಕಿ ಕೊಟ್ಟರೆ ತಪ್ಪಲ್ಲ, ಅವರು ಸೋಮಾರಿ ಆಗಲ್ಲ’; ಕಾಂಗ್ರೆಸ್ ಯೋಜನೆ ಬಗ್ಗೆ ಧನಂಜಯ್ ಮಾತು
ಧನಂಜಯ್​-ಸಿದ್ದಾರಾಮಯ್ಯ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 31, 2023 | 12:19 PM

ನಟ ಧನಂಜಯ್ (Dhananjay) ಅವರು ಸದಾ ವಿವಾದಗಳಿಂದ ದೂರ ಇರೋಕೆ ಬಯಸುತ್ತಾರೆ. ಅವರು ಸಿನಿಮಾ ಕೆಲಸಗಳ ಜೊತೆ ಹಲವು ಸಾಮಾಜಿಕ ಕೆಲಸಗಳಲ್ಲೂ ತೊಡಗಿಕೊಂಡಿದ್ದಾರೆ. ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದರೆ ಆ ರೀತಿಯ ಕೆಲಸಗಳನ್ನು ಮಾಡಲು ಧನಂಜಯ್ ಹೆಚ್ಚು ಆದ್ಯತೆ ನೀಡುತ್ತಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಲುವರಸನಕೊಪ್ಪಲು ಗ್ರಾಮದಲ್ಲಿನ ಶಾಲೆ ಪ್ರಾರಂಭೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರು ಇಂದು (ಮೇ 31) ಚಾಲನೆ ನೀಡಿದ್ದಾರೆ. ಆ ಬಳಿಕ ಅವರು ಮಾಧ್ಯಮದ ಜೊತೆ ಮಾತನಾಡಿ ಹಲವು ವಿಚಾರ ಹಂಚಿಕೊಂಡಿದ್ದಾರೆ.

ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿವೆ. ಚಲುವರಸನಕೊಪ್ಪಲು ಗ್ರಾಮದ ಶಾಲೆಯನ್ನು ಮಾದರಿ ಶಾಲೆಯಾಗಿ ಬದಲಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟೇಪ್ ಕತ್ತರಿಸಿ ಶಾಲೆಗೆ ಚಾಲನೆ ನೀಡಿದ್ದಾರೆ ಡಾಲಿ. ಅವರು ಒಂದು ರೌಂಡ್ ಹಾಕಿ ಶಾಲಾ ಕಟ್ಟಡದ ವೀಕ್ಷಿಸಿದ್ದಾರೆ.

ಉಚಿತ ಅಕ್ಕಿ ಬಗ್ಗೆ ಮಾತನಾಡಿದ ಧನಂಜಯ್

ಧನಂಜಯ್ ಅವರು ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದಿಂದ ಉಚಿತವಾಗಿ 10 ಕೆಜಿ ಅಕ್ಕಿ ನೀಡುವ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ಯಾವುದೇ ಪಕ್ಷದ ಪರವಾಗಿ ಅಥವಾ ವಿರೋಧವಾಗಿ ನಾನು ಮಾತನಾಡುವುದಿಲ್ಲ. ಸಾಮಾನ್ಯ ಮನುಷ್ಯನಾಗಿ ನಾನು‌ ಹೇಳ್ತೀನಿ. ಹಸಿವು ನೀಗಿಸಲು ಉಚಿತವಾಗಿ ಅಕ್ಕಿ ಕೊಟ್ಟರೆ ತಪ್ಪಾಗಿ ಕಾಣಲ್ಲ. ಅಕ್ಕಿ ಕೊಟ್ಟರೆ ಜನರು ಸೋಮಾರಿ ಆಗ್ತಾರೆ ಅನ್ನೋದು ತಪ್ಪು. ಅಕ್ಕಿ ಕೊಟ್ಟರೆ ಹಸಿವು ನೀಗುತ್ತದೆ. ಇತರೆ ಖರ್ಚಿಗೆ ಬಡವರು ದುಡಿಯುತ್ತಾರೆ. ಬಡವರಿಗೆ ಅಕ್ಕಿ ಕೊಟ್ಟರೆ ಸೋಮಾರಿ ಆಗ್ತಾರೆ ಅನ್ನೋದು ತಪ್ಪು’ ಎಂದು ಧನಂಜಯ್ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಹತ್ತು ವರ್ಷ ಪೂರೈಸಿದ ಡಾಲಿ ಧನಂಜಯ್, 25 ಸಿನಿಮಾ ಮಾಡಿದ್ದು ಸಾಧನೆಯೇ?

‘ಸರ್ಕಾರಿ ಶಾಲೆಗಳಲ್ಲಿ‌ ಉತ್ತಮ ಶಿಕ್ಷಣ ಸಿಗುತ್ತಿದೆ. ಒಂದು ಕ್ಷೇತ್ರದಲ್ಲಿ ಎಲ್ಲವೂ ಸರಿ ಇರಲ್ಲ. ನ್ಯೂನ್ಯತೆಗಳನ್ನು ಸರಿಮಾಡಿಕೊಂಡು ಉತ್ತಮ ಶಿಕ್ಷಣ ಕೊಡಬೇಕು’ ಎಂದು ಧನಂಜಯ್ ಅಭಿಪ್ರಾಯಪಟ್ಟರು.

‘ಹೊಯ್ಸಳ’ದಿಂದ ಯಶಸ್ಸು

ಧನಂಜಯ್ ನಟನೆಯ ‘ಗುರುದೇವ್ ಹೊಯ್ಸಳ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಆಗಿ ಧನಂಜಯ್ ಗಮನ ಸೆಳೆದರು. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆ ಪಡೆದಿದೆ. ‘ಕೆಆರ್​ಜಿ ಸ್ಟುಡಿಯೋ’ ಮೂಲಕ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ