AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗರಾಜ್ ಭಟ್ ಕಡೆಯಿಂದ ಬಂತು ಮತ್ತೊಂದು ಎಣ್ಣೆ ಸಾಂಗ್; ಹಾಡು ಬಿಡುಗಡೆ ಮಾಡಿದ ದುನಿಯಾ ವಿಜಯ್  

‘ಗ್ಲಾಸು ಗ್ಲಾಸಿಗೆ ತಾಗೋ ಟೈಮಲಿ ದೇಶ ಚಿಂತನೆ ಮಾಡೋಣ’ ಹಾಡನ್ನು ಇತ್ತೀಚೆಗೆ ದುನಿಯಾ ವಿಜಯ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಎ2 ಮ್ಯೂಸಿಕ್ ಸಂಸ್ಥೆ ಈ ಹಾಡನ್ನು ಹೊರತಂದಿದೆ.

ಯೋಗರಾಜ್ ಭಟ್ ಕಡೆಯಿಂದ ಬಂತು ಮತ್ತೊಂದು ಎಣ್ಣೆ ಸಾಂಗ್; ಹಾಡು ಬಿಡುಗಡೆ ಮಾಡಿದ ದುನಿಯಾ ವಿಜಯ್  
ಹಾಡು ಬಿಡುಗಡೆ ಮಾಡಿದ ದುನಿಯಾ ವಿಜಯ್  
TV9 Web
| Edited By: |

Updated on: May 03, 2022 | 2:00 PM

Share

ಯೋಗರಾಜ್ ಭಟ್ ಅವರು (Yogaraj Bhat) ಹಾಡಿಗೆ ಸಾಹಿತ್ಯ ಬರೆದರು ಎಂದರೆ ಅಲ್ಲೊಂದು ಭಿನ್ನತೆ ಇರುತ್ತದೆ. ಹಾಡಿನ ಸಾಲುಗಳು ಮತ್ತೆಮತ್ತೆ ಕಿವಿಯಲ್ಲಿ ಗುನುಗುತ್ತವೆ. ಶರಣ್ (Actor Sharan) ನಟನೆಯ ‘ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು..’ ಚಿತ್ರದ ಹಾಡು ಸಖತ್ ಹಿಟ್ ಆಗಿತ್ತು. ಈ ಹಾಡನ್ನು ಬರೆದಿದ್ದು ಯೋಗರಾಜ್​ ಭಟ್ ಅವರು. ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಈ ಹಾಡು ಮೆಚ್ಚುಗೆಯಾಗಿತ್ತು. ಈಗ ಯೋಗರಾಜ್ ಭಟ್ ಕಡೆಯಿಂದ ಮತ್ತೊಂದು ಎಣ್ಣೆ ಸಾಂಗ್ ಹೊರ ಬಂದಿದೆ. ‘ಗಿರ್ಕಿ’ ಚಿತ್ರಕ್ಕಾಗಿ (Girki Movie) ‘ಗ್ಲಾಸು ಗ್ಲಾಸಿಗೆ ತಾಗೋ ಟೈಮಲಿ ದೇಶ ಚಿಂತನೆ ಮಾಡೋಣ..’ ಎಂಬ ಹಾಡನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಧ್ವನಿ ಆಗಿದ್ದಾರೆ.

‘ಗ್ಲಾಸು ಗ್ಲಾಸಿಗೆ ತಾಗೋ ಟೈಮಲಿ ದೇಶ ಚಿಂತನೆ ಮಾಡೋಣ’ ಹಾಡನ್ನು ಇತ್ತೀಚೆಗೆ ದುನಿಯಾ ವಿಜಯ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಎ2 ಮ್ಯೂಸಿಕ್ ಸಂಸ್ಥೆ ಈ ಹಾಡನ್ನು ಹೊರತಂದಿದೆ. ಈ ಹಾಡಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಎಣ್ಣೆ ಪ್ರಿಯರಿಗೆ ಹೆಜ್ಜೆ ಹಾಕೋಕೆ ಮತ್ತೊಂದು ಹಾಡು ಸಿಕ್ಕಿದೆ. ಚಿತ್ರ ಸದ್ಯದಲ್ಲೇ ತೆರೆ ಕಾಣಲಿದೆ.

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ‘ಗಿರ್ಕಿ’ ಚಿತ್ರವನ್ನು  ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ಅವರ ಗರಡಿಯಲ್ಲಿ ಪಳಗಿದ ವೀರೇಶ್ ಪಿ.ಎಂ ಚಿತ್ರವನ್ನು ನಿರ್ದೇಶಿಸಿದ್ದಾರೆ‌. ಲವ್, ಥ್ರಿಲ್ಲರ್ ಹಾಗೂ ಕಾಮಿಡಿ, ಆ್ಯಕ್ಷನ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರಕ್ಕೆ ವೀರೇಶ್ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ವಾಸುಕಿ ಭುವನ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನ ಈ ಚಿತ್ರಕ್ಕೆ ಇದೆ. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ. ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ: ಅಜಯ್​ ದೇವಗನ್ ಟ್ವೀಟ್ ಬಗ್ಗೆ ನಿರ್ದೇಶಕ ಯೋಗರಾಜ್ ಭಟ್ ಹೇಳಿದ್ದೇನು?

ST Somashekar: ಗೆಳೆಯ ಬಿಸಿ ಪಾಟೀಲ್ ಒತ್ತಾಸೆಯಂತೆ ಯೋಗರಾಜ್ ಭಟ್ ‘ಗರಡಿ’ ಸೇರಿದ ಸಚಿವ ಎಸ್​ಟಿ ಸೋಮಶೇಖರ್!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ