AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೆನ್​ ಮ್ಯಾಕ್ಸ್​​ವೆಲ್​​ಗೆ ಗೊತ್ತು ಸೆಂಚುರಿ ಸ್ಟಾರ್​ ಶಿವರಾಜ್​ಕುಮಾರ್​; ಶಿವಣ್ಣನ ಬಗ್ಗೆ ಮ್ಯಾಕ್ಸಿ ಹೇಳಿದ್ದೇನು?

ರಾಯಲ್​ ಚಾಲೆಂಜರ್ಸ್​ ತಂಡ ಮೈದಾನದಲ್ಲಿ ಮನರಂಜನೆ ನೀಡುವುದು ಮಾತ್ರವಲ್ಲ, ಯೂಟ್ಯೂಬ್​ನಲ್ಲೂ ಎಂಟರ್​ಟೇನ್​ಮೆಂಟ್​ ನೀಡುತ್ತಿದೆ. ಆರ್​ಸಿಬಿ ತಂಡದ ಇನ್​ಸೈಡರ್​ ಆಗಿರುವ ದ್ಯಾನಿಶ್​​ ಸೇಠ್​ ಮಿಸ್ಟರ್​ ನ್ಯಾಗ್ಸ್​ ಆಗಿ ಎಲ್ಲರನ್ನೂ ನಗಿಸುತ್ತಿದ್ದಾರೆ. ಪ್ರ

ಗ್ಲೆನ್​ ಮ್ಯಾಕ್ಸ್​​ವೆಲ್​​ಗೆ ಗೊತ್ತು ಸೆಂಚುರಿ ಸ್ಟಾರ್​ ಶಿವರಾಜ್​ಕುಮಾರ್​; ಶಿವಣ್ಣನ ಬಗ್ಗೆ ಮ್ಯಾಕ್ಸಿ ಹೇಳಿದ್ದೇನು?
ಗ್ಲೆನ್​ ಮ್ಯಾಕ್ಸ್​ವೆಲ್​-ಶಿವರಾಜ್​ಕುಮಾರ್​
ರಾಜೇಶ್ ದುಗ್ಗುಮನೆ
|

Updated on: May 07, 2021 | 6:33 PM

Share

ಸೆಂಚುರಿ ಸ್ಟಾರ್​ ಶಿವರಾಜ್​ಕುಮಾರ್ ಖ್ಯಾತಿ ಕರ್ನಾಟಕಕ್ಕೆ ಮಾತ್ರ ಸೀಮಿತಾಗಿಲ್ಲ. ಅವರ ಸಾಕಷ್ಟು ಸಿನಿಮಾಗಳು ಬೇರೆಬೇರೆ ಭಾಷೆಗೆ ಡಬ್​ ಆಗಿ ತೆರೆಕಂಡಿವೆ. ಹೀಗಾಗಿ ಅವರು ಪರ ಭಾಷೆಯವರಿಗೂ ಗೊತ್ತು. ವಿಶೇಷ ಎಂದರೆ, ಆಸ್ಟ್ರೇಲಿಯಾದ ಪ್ರಮುಖ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್​​ಗೂ ಶಿವರಾಜ್​ಕುಮಾರ್​ ಹಾಡಿನ​ ಪರಿಚಯ ಇದೆಯಂತೆ!   

ರಾಯಲ್​ ಚಾಲೆಂಜರ್ಸ್​ ತಂಡ ಮೈದಾನದಲ್ಲಿ ಮನರಂಜನೆ ನೀಡುವುದು ಮಾತ್ರವಲ್ಲ, ಯೂಟ್ಯೂಬ್​ನಲ್ಲೂ ಎಂಟರ್​ಟೇನ್​ಮೆಂಟ್​ ನೀಡುತ್ತಿದೆ. ಆರ್​ಸಿಬಿ ತಂಡದ ಇನ್​ಸೈಡರ್​ ಆಗಿರುವ ದ್ಯಾನಿಶ್​​ ಸೇಠ್​ ಮಿಸ್ಟರ್​ ನ್ಯಾಗ್ಸ್​ ಆಗಿ ಎಲ್ಲರನ್ನೂ ನಗಿಸುತ್ತಿದ್ದಾರೆ. ಪ್ರತಿ ಆಟಗಾರರನ್ನೂ ಸಂದರ್ಶನ ಮಾಡುವ ಅವರು ಭರಪೂರ ಮನರಂಜನೆ ನೀಡುತ್ತಿದ್ದಾರೆ. ನಾನಾ ರೀತಿಯ ಕಾಮಿಡಿ ಮಾಡಿ ಜನರನ್ನು ನಗಿಸುತ್ತಿದ್ದಾರೆ. ನ್ಯಾಗ್ಸ್​ ಕ್ಯಾರೆಕ್ಟರ್​ ಬಹುತೇಕರಿಗೆ ಇಷ್ಟವಾಗಿದೆ. ಅವರು ಈ ಬಾರಿ ಮ್ಯಾಕ್ಸ್​ವೆಲ್​ ಸಂದರ್ಶನ ಮಾಡಿದ್ದಾರೆ.

ಈ ವಿಡಿಯೋವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಯೂಟ್ಯೂಬ್​ನಲ್ಲಿ ಹಂಚಿಕೊಂಡಿದೆ. ಈ ವಿಡಿಯೋದಲ್ಲಿ ಜೋಗಿ ಸಿನಿಮಾದ ಹೊಡಿ ಮಗ ಹಾಡನ್ನು ಮ್ಯಾಕ್ಸ್​ವೆಲ್​ಗೆ ಕಲಿಸಿಕೊಡುವ ಪ್ರಯತ್ನ ಮಾಡಿದ್ದಾರೆ ದ್ಯಾನಿಶ್​. ‘ಹೊಡಿ ಮಗ.. ಹೊಡಿ ಮಗ.. ಹೊಡಿ ಮಗ.. ಹೊಡಿ ಮಗ.. ಬಿಡಬೇಡ ಅವ್ನ…’ ಇದು ಕನ್ನಡದ ಹಾಡು. ಇದನ್ನು ಹೇಳಿ ಎಂದು ಮ್ಯಾಕ್ಸ್​ವೆಲ್​ಗೆ ದ್ಯಾನಿಶ್ ಸೂಚಿಸಿದ್ದಾರೆ . ಆಗ ಮ್ಯಾಕ್ಸಿ, ಇದೇನು ಮೂರು ಸೆಕೆಂಡ್​ ಇದೆ. ಇದನ್ನು ಯಾರಾದರೂ ಹಾಡು ಎನ್ನುತ್ತಾರಾ ಎಂದು ಪ್ರಶ್ನೆ ಮಾಡಿದ್ದಾರೆ. ಅಯ್ಯೋ ನಾನು ಹಾಡಿನ ಪೂರ್ತಿ ಲಿರಿಕ್ಸ್​ ಹೇಳಿದರೆ ನಾಳೆವರೆಗೂ ನಾವು ಇಲ್ಲಿಯೇ ಇರಬೇಕಾಗುತ್ತದೆ ಎಂದು ದ್ಯಾನಿಶ್ ಉತ್ತರಿಸಿದರು​. ಅಂತೂ 37ನೇ ಟೇಕ್​ಗೆ ಮ್ಯಾಕ್ಸ್​ವೆಲ್​ ಜೋಗಿ ಸಿನಿಮಾದ ಹಾಡಿನ ಸಾಲನ್ನು ಹಾಡಿದರು.

ಈ ಹಾಡು ಯಾರ ಸಿನಿಮಾದ್ದು ಎಂದು ಗೊತ್ತೇ ಎನ್ನುವ ಪ್ರಶ್ನೆಯನ್ನು ದ್ಯಾನಿಶ್​ ಕೇಳಿದರು. ಇದಕ್ಕೆ ಮ್ಯಾಕ್ಸಿ, ಶಿವಣ್ಣ ಎಂದು ಉತ್ತರಿಸಿದರು. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ. ಅನೇಕರು ಮ್ಯಾಕ್ಸಿಗೆ ಶಿವಣ್ಣ ಗೊತ್ತೇ ಎಂದು ಕೇಳಿದ್ದಾರೆ.

ಕೊರೊನಾ ಕಾರಣದಿಂದ ಐಪಿಎಲ್​ ರದ್ದಾಗಿದೆ. ಹೀಗಾಗಿ, ಆರ್​ಸಿಬಿ ತಂಡ ಆಸ್ಟ್ರೇಲಿಯಾ ಆಟಗಾರರನ್ನು ವಿಶೇಷ ವಿಮಾನದಲ್ಲಿ ಆಟಗಾರರನ್ನು ಮಾಲ್ಡೀವ್ಸ್​ಗೆ ಕಳುಹಿಸಿದೆ. ಅಲ್ಲಿ ಅವರು ಕ್ವಾರಂಟೈನ್​ ಆದ ನಂತರ ಆಸ್ಟ್ರೆಲಿಯಾಗೆ ತೆರಳಲಿದ್ದಾರೆ.

ಇದನ್ನೂ ಓದಿ: Glenn Maxwell: ಭಾರತದಲ್ಲಿ ಹೆಚ್ಚಿದ ಕೊರೊನಾ; ಮನೆಗೆ ಹೋಗಲು ಹೊಸ ಉಪಾಯ ಮಾಡಿದ ಗ್ಲೆನ್ ಮ್ಯಾಕ್ಸ್​ವೆಲ್

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ