AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಚಿನ್ನ ಸಾಗಣೆ ಕೇಸ್: ನಟಿ ರನ್ಯಾ ರಾವ್​ಗೆ 102.55 ಕೋಟಿ ರೂಪಾಯಿ ದಂಡ

ಕನ್ನಡದ ನಟಿ ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಹಾಗಾಗಿ ಅವರಿಂದ ದಂಡ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟಿಸ್ ನೀಡಲಾಗಿದೆ. ಬರೋಬ್ಬರಿ 102.55 ಕೋಟಿ ರೂ. ದಂಡ ಪಾವತಿಸುವಂತೆ ರನ್ಯಾ ರಾವ್​​ಗೆ ಡಿಆರ್​ಐ ಸೂಚಿಸಿದೆ.

ಅಕ್ರಮ ಚಿನ್ನ ಸಾಗಣೆ ಕೇಸ್: ನಟಿ ರನ್ಯಾ ರಾವ್​ಗೆ 102.55 ಕೋಟಿ ರೂಪಾಯಿ ದಂಡ
Ranya Rao
ಶಿವಪ್ರಸಾದ್​ ಬಿ.
| Edited By: |

Updated on: Sep 02, 2025 | 4:10 PM

Share

ನಟಿ ರನ್ಯಾ ರಾವ್ (Ranya Rao) ಅವರು ಅಕ್ರಮ ಚಿನ್ನ ಸಾಗಾಣಿಕೆ ಕೇಸ್​​ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ಅವರು ವಿದೇಶದಿಂದ ಅಕ್ರಮವಾಗಿ ಭಾರತಕ್ಕೆ ತಂದಿದ್ದರು. ಇದರ ತನಿಖೆ ನಡೆದಿದ್ದು, ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ (Gold Smuggling) ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರನ್ಯಾ ರಾವ್​ಗೆ ಡಿಆರ್​ಐ (Directorate of Revenue Intelligence) ಶಾಕ್ ಕೊಟ್ಟಿದೆ. ಬರೋಬ್ಬರಿ 102.55 ಕೋಟಿ ರೂ. ದಂಡ ಪಾವತಿಸುವಂತೆ ಡಿಆರ್​ಐ ನೋಟಿಸ್ ನೀಡಿದೆ.

ಡಿಆರ್​ಐ ಅಧಿಕಾರಿಗಳು ಅಡ್ ಜುಡಿಕೇಷನ್ ಮಾಡಿ ನೋಟಿಸ್ ನೀಡಿದ್ದಾರೆ. ಮಾರ್ಚ್ 4ರಂದು ಗೋಲ್ಡ್ ಸೀಜ್ ಮಾಡಿ ರನ್ಯಾ ರಾವ್ ಅವರನ್ನು ಡಿಆರ್​ಐ ಬಂಧಿಸಿತ್ತು. ಕಳ್ಳಸಾಗಣೆ ವಸ್ತುಗಳನ್ನು 6 ತಿಂಗಳಲ್ಲಿ ಡಿಆರ್​ಐ ಅಧಿಕಾರಿಗಳು ವಸೂಲಿ ಮಾಡಬೇಕಿದೆ. ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಿಂದ ದೃಢಪಟ್ಟಿದೆ.

102.55 ಕೋಟಿ ರೂ. ದಂಡ ಪಾವತಿಸುವಂತೆ DRIನಿಂದ ನೋಟಿಸ್ ಜಾರಿ ಆಗಿದೆ. ಇಂದು (ಸೆಪ್ಟೆಂಬರ್ 2) ಜೈಲಿಗೆ ತೆರಳಿ ರನ್ಯಾ ಸೇರಿ ನಾಲ್ವರೂ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಲು ಅವಕಾಶವಿದೆ. ಎ2 ಆರೋಪಿ ತರುಣ್ ಕೊಂಡುರು ರಾಜು 67.6 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡವಾಗಿದೆ.

ತರುಣ್ ಕೊಂಡುರು ರಾಜು ಗೆ 62 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಸಾಹಿಲ್ ಜೈಲ್ ಮತ್ತು ಭರತ್ ಜೈನ್ ತಲಾ 63.61 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡಪಟ್ಟಿದೆ. ಭರತ್ ಜೈನ್ ಹಾಗೂ ಸಾಹಿಲ್ ಜೈನ್ 53 ಕೋಟಿ ದಂಡ ಪಾವತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಜೊತೆಗೆ ಕ್ರಿಮಿನಲ್ ಕೇಸ್ ಕೂಡ ಮುಂದುವರಿಯುತ್ತೆ.

ಇದನ್ನೂ ಓದಿ: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಪತ್ತೆ: ನಟಿ ರನ್ಯಾ ರಾವ್​ಗೆ ಸೇರಿದ ಕೋಟ್ಯಾಂತರ ರೂ. ಆಸ್ತಿ ಜಪ್ತಿ

ನೋಟಿಸ್ ಸೇರಿ 2,500 ಪುಟಗಳ ದಾಖಲೆಗಳನ್ನ ನೀಡಿಲಾಗಿದೆ. ಇಂದು ಹೈಕೋರ್ಟ್​​ನಲ್ಲಿ ಕಾಫಿಪೋಸಾ ಅರ್ಜಿ ಕೂಡ ವಿಚಾರಣೆ ಆಗಿದೆ. ಕಾಫಿಪೋಸಾ ಅರ್ಜಿಯನ್ನು ಸೆ.11ಕ್ಕೆ ಮುಂದೂಡಲಾಗಿದೆ. ಡಿಅರ್ಐ ಅಧಿಕಾರಿಗಳು ಅತ್ಯಂತ ತ್ವರಿತ ಗತಿಯಲ್ಲಿ ತ‌ನಿಖೆ ನಡೆಸಿ ರಿಕವರಿಗೆ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್