AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದ್ದ ರನ್ಯಾ ರಾವ್ ಹೇಗಾದ್ರು ನೋಡಿ: ಜೈಲು ಸೇರಿದ ಎರಡೇ ದಿನಕ್ಕೆ ಮಂಕಾದ ನಟಿ

ಚಿನ್ನ ಕಳ್ಳ ಸಾಗಾಣಿಕೆ ಕೇಸ್​ನಲ್ಲಿ ಸಿಕ್ಕಿ ಬಿದ್ದಿರುವ ರನ್ಯಾ ರಾವ್ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಜೈಲು ಸೇರಿದ ಬಳಿಕ ಅವರು ಸೊರಗಿದ್ದಾರೆ. ಸರಿಯಾಗಿ ಊಟ, ನಿದ್ರೆ ಮಾಡುತ್ತಿಲ್ಲ. ಹಾಗಾಗಿ ಕಣ್ಣುಗಳ ಸುತ್ತ ಡಾರ್ಕ್ ಸರ್ಕಲ್ ಜಾಸ್ತಿ ಆಗಿದೆ. ಜೈಲಿನಿಂದ ರನ್ಯಾ ಅವರ ಫೋಟೋ ವೈರಲ್ ಆಗಿದೆ.

ಹೇಗಿದ್ದ ರನ್ಯಾ ರಾವ್ ಹೇಗಾದ್ರು ನೋಡಿ: ಜೈಲು ಸೇರಿದ ಎರಡೇ ದಿನಕ್ಕೆ ಮಂಕಾದ ನಟಿ
Ranya Rao
ಮದನ್​ ಕುಮಾರ್​
|

Updated on: Mar 06, 2025 | 5:41 PM

Share

ಸೆಲೆಬ್ರಿಟಿಗಳ ಜೀವನ ಶೈಲಿ ಐಷಾರಾಮಿ ಆಗಿರುತ್ತದೆ. ಆದರೆ ಅಂಥವರು ತಪ್ಪು ಮಾಡಿ ಜೈಲು ಸೇರಿಕೊಂಡರೆ ಅಲ್ಲಿನ ಜೀವನಕ್ಕೆ ಹೊಂದಿಕೊಳ್ಳುವುದು ಕಷ್ಟ ಆಗುತ್ತದೆ. ಕನ್ನಡದ ನಟಿ ರನ್ಯಾ ರಾವ್  (Ranya Rao) ಅವರ ಪರಿಸ್ಥಿತಿ ಕೂಡ ಹಾಗೆಯೇ ಆಗಿದೆ. ರನ್ಯಾ ಅವರದ್ದು ಹೈಪ್ರೊಫೈಲ್ ಕುಟುಂಬ. ಆಗಾಗ ಅವರು ವಿದೇಶಕ್ಕೆ ಹೋಗಿಬರುತ್ತಿದ್ದರು. ಬಿಂದಾಸ್ ಆಗಿ ಜೀವನ ನಡೆಸುತ್ತಿದ್ದರು. ಆದರೆ ಈಗ ಅವರು ಚಿನ್ನ ಕಳ್ಳ ಸಾಗಾಣಿಕೆ (Gold Smuggling) ಕೇಸ್​ನಲ್ಲಿ ಆರೋಪಿಯಾಗಿ ಜೈಲು ಸೇರಿದ್ದಾರೆ. ನಟಿಯಾಗಿದ್ದಾಗ ಪಳಪಳ ಹೊಳೆಯುತ್ತಿದ್ದ ರನ್ಯಾ ಅವರು ಈಗ ಮಂಕಾಗಿದ್ದಾರೆ. ಜೈಲಿನಲ್ಲಿರುವ ಅವರ ಫೋಟೋ ಲಭ್ಯವಾಗಿದೆ. ಇದು ನಿಜಕ್ಕೂ ರನ್ಯಾ ಅವರೇನಾ ಎಂದು ಅನುಮಾನ ಮೂಡುವ ರೀತಿಯಲ್ಲಿ ಅವರ ಮುಖ ಬದಲಾಗಿದೆ.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಜೈಲು ಸೇರಿರುವ ರಮ್ಯಾ ಅವರಿಗೆ ಜೈಲಿನ ಊಟ ಅಡ್ಜೆಸ್ಟ್ ಆಗುತ್ತಿಲ್ಲವಂತೆ. ಈ ಮೊದಲು ಮಿಲ್ಕಿ ಬ್ಯೂಟಿ ರೀತಿ ಇದ್ದ ಅವರು ಈಗ ಕೇವಲ ಎರಡು ದಿನಗಳ ಜೈಲುವಾಸಕ್ಕೆ ಸುಸ್ತಾಗಿದ್ದಾರೆ. ಎರಡೇ ದಿನಕ್ಕೆ ಅವರು ಸೊರಗಿದ್ದಾರೆ. ಡಿಆರ್​ಐ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಾಗಿನಿಂದ ರನ್ಯಾ ಅವರು ಸರಿಯಾಗಿ ಊಟ ಮತ್ತು ನಿದ್ದೆ ಮಾಡಿಲ್ಲ.

ಊಟ, ನಿದ್ರೆ ಸರಿಯಾಗಿ ಮಾಡದೇ ಇರುವ ಕಾರಣದಿಂದ ರನ್ಯಾ ಅವರು ಸೊರಗಿದ್ದಾರೆ. ಜೈಲಿನ ವಾತಾವರಣ ಅವರಿಗೆ ಹಿಡಿಸುತ್ತಿಲ್ಲ. ಅಲ್ಲಿ ನಿದ್ದೆಯಿಲ್ಲದೇ ರನ್ಯಾ ಅವರ ಕಣ್ಣುಗಳು ಕೆಂಪಾಗಿ ಊದಿಕೊಂಡಿವೆ. ಕಣ್ಣುಗಳ ಸುತ್ತ ರಕ್ತ ಹೆಪ್ಪುಗಟ್ಟಿ ಡಾರ್ಕ್ ಸರ್ಕಲ್ ಹೆಚ್ಚಾಗಿದೆ. ರನ್ಯಾ ಅರೆಸ್ಟ್ ಆದ ಬಳಿಕ ಜೈಲನಲ್ಲಿರುವ ಅವರ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ
Image
ಅಪ್ಪ ಪೋಲಿಸ್.. ಮಗಳು ಕಳ್ಳಿ.. ನಟಿ ರನ್ಯಾ ಚಿನ್ನದ ರಹಸ್ಯ!
Image
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್​ನಲ್ಲಿ ಮಲತಂದೆ ಡಿಜಿಪಿಯ ಕೈವಾಡವೂ ಇತ್ತೇ?
Image
ರನ್ಯಾ ರಾವ್ ಪ್ರಕರಣ, ಚಿನ್ನ, ನಗದು ಸೇರಿ 17.29 ಕೋಟಿ ಪತ್ತೆ
Image
ಚಿನ್ನ ಕಳ್ಳಸಾಗಣೆ: ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್​ಗೆ ನ್ಯಾಯಾಂಗ ಬಂಧನ

ಈ ನಡುವೆ ರನ್ಯಾ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅವರಿಗೆ ಬೇಲ್ ನೀಡಬಾರದು ಎಂದು ಡಿಆರ್​ಐ ಅಧಿಕಾರಿಗಳ ಪರ ವಕೀಲರು ವಾದ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ದಂಧೆಯಲ್ಲಿ ರನ್ಯಾ ರಾವ್ ಜೊತೆ ಅನೇಕರು ಭಾಗಿಯಾಗಿರುವ ಶಂಕೆ ಇದೆ. ಆ ಕುರಿತು ತನಿಖೆ ಮಾಡುವುದು ಬಾಕಿ ಇದೆ. ಹಾಗಾಗಿ ಅವರನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಡಿಆರ್​ಐ ಅಧಿಕಾರಿಗಳು ಕೋರ್ಟ್​ಗೆ ಕೇಳಿದ್ದಾರೆ.

ಇದನ್ನೂ ಓದಿ: ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾಗೆ ಜಾಮೀನು ನೀಡಿದರೆ ಎಸ್ಕೇಪ್ ಆಗ್ತಾರಾ ಪ್ರಭಾವಿಗಳು?

ಐಪಿಎಸ್​ ಅಧಿಕಾರಿ, ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ಮಲಮಗಳಾದ ರನ್ಯಾ ರಾವ್ ಅವರು ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡು ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದಾರೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಈ ಮೊದಲು ರನ್ಯಾ ದುಬೈಗೆ ಹೋಗಿದ್ದಕ್ಕೆ ಕಾರಣ ಏನು ಎಂಬುದನ್ನು ಕೂಡ ಬಾಯಿ ಬಿಡಿಸಲಾಗುತ್ತಿದೆ. ಕೆಲವೇ ದಿನಗಳ ಅಂತರದಲ್ಲಿ ಅವರು ಹಲವು ಬಾರಿ ದುಬೈಗೆ ಹೋಗಿ ಬಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ