AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MM Keeravani: ಕನ್ನಡದ ಚಿತ್ರಗಳಿಗೂ ಸಂಗೀತ ನೀಡಿರುವ ಗೋಲ್ಡನ್​ ಗ್ಲೋಬ್​ ವಿನ್ನರ್​ ಎಂಎಂ ಕೀರವಾಣಿ ಸಂಭಾವನೆ ಬಹುಕೋಟಿ

MM Keeravani Remuneration: ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಪಡೆದ ಎಂಎಂ ಕೀರವಾಣಿ ಅವರು ಟಾಲಿವುಡ್​ಗೆ ಮಾತ್ರ ಸೀಮಿತವಲ್ಲ. ಕನ್ನಡದ ಹಲವು ಚಿತ್ರಗಳಿಗೆ ಅವರು ಸಂಗೀತ ನೀಡಿದ್ದಾರೆ.

MM Keeravani: ಕನ್ನಡದ ಚಿತ್ರಗಳಿಗೂ ಸಂಗೀತ ನೀಡಿರುವ ಗೋಲ್ಡನ್​ ಗ್ಲೋಬ್​ ವಿನ್ನರ್​ ಎಂಎಂ ಕೀರವಾಣಿ ಸಂಭಾವನೆ ಬಹುಕೋಟಿ
ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದ ಖುಷಿಯಲ್ಲಿ ಎಂಎಂ ಕೀರವಾಣಿImage Credit source: RRRMovie twitter account
TV9 Web
| Edited By: |

Updated on:Jan 11, 2023 | 2:07 PM

Share

ಟಾಲಿವುಡ್​ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ (MM Keeravani) ಅವರು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಸಿನಿಮಾ ಲೋಕದಲ್ಲಿ ಬ್ಯುಸಿ ಆಗಿರುವ ಅವರು ಈಗ ಇನ್ನಷ್ಟು ಫೇಮಸ್​ ಆಗಿದ್ದಾರೆ. ಪ್ರತಿಷ್ಠಿತ ಗೋಲ್ಡನ್​ ಗ್ಲೋಬ್​ ಪ್ರಶಸ್ತಿ (Golden Globe Award) ಪಡೆದ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಅಭಿಮಾನಿಗಳ ಮನ ಗೆದ್ದ ‘ಆರ್​ಆರ್​ಆರ್​’ ಸಿನಿಮಾದ (RRR Movie) ‘ನಾಟು ನಾಟು..’ ಹಾಡಿಗೆ ‘ಅತ್ಯುತ್ತಮ ಒರಿಜಿನಲ್​ ಸಾಂಗ್​’ ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಸಿಕ್ಕಿದೆ. ಈ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದಿಗ್ಗಜ ನಟ ಅಮಿತಾಭ್​ ಬಚ್ಚನ್​ ಸೇರಿದಂತೆ ಅನೇಕರು ಶಹಭಾಷ್​ ಎಂದಿದ್ದಾರೆ. ಅನೇಕರಿಗೆ ತಿಳಿದಿರದ ಸಂಗತಿ ಏನೆಂದರೆ ಎಂಎಂ ಕೀರವಾಣಿ ಅವರು ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಲ್ಲ. ಕನ್ನಡದ ಅನೇಕ ಸಿನಿಮಾಗಳಿಗೆ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಎಂಎಂ ಕೀರವಾಣಿ ಅವರ ಕನ್ನಡ ಸಿನಿಮಾಗಳು:

ಚಿತ್ರರಂಗದಲ್ಲಿ ಎಂಎಂ ಕೀರವಾಣಿ ಅವರ ಅನುಭವ ಅಪಾರ. 1990ರಿಂದಲೂ ಅವರು ಸಕ್ರಿಯರಾಗಿದ್ದಾರೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದ ‘ಅಳಿಮಯ್ಯ’, ‘ಅಪ್ಪಾಜಿ’, ‘ಭೈರವ’, ‘ಸ್ವಾತಿ’, ‘ಕರ್ನಾಟಕ ಸುಪುತ್ರ’, ‘ದೀಪಾವಳಿ’, ‘ಜಮೀನ್ದಾರ್ರು’ ಮುಂತಾದ ಸಿನಿಮಾಗಳಿಗೆ ಸಂಗೀತ ನೀಡಿದ್ದು ಎಂಎಂ ಕೀರವಾಣಿ ಅವರೇ. ತೆಲುಗಿನಿಂದ ರಿಮೇಕ್​ ಆದ ‘ಮರ್ಯಾದೆ ರಾಮಣ್ಣ’ ಹಾಗೂ ‘ವೀರ ಮದಕರಿ’ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದು ಕೂಡ ಎಂಎಂ ಕೀರವಾಣಿ.

ಇದನ್ನೂ ಓದಿ: Golden Globe Awards: ‘RRR​’ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಜತೆ ‘ಗೋಲ್ಡನ್​ ಗ್ಲೋಬ್​’ ಪಡೆದವರ ಪೂರ್ತಿ ಲಿಸ್ಟ್​ ಇಲ್ಲಿದೆ

ಇದನ್ನೂ ಓದಿ
Image
Golden Globe Awards: ‘RRR​’ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಜತೆ ‘ಗೋಲ್ಡನ್​ ಗ್ಲೋಬ್​’ ಪಡೆದವರ ಪೂರ್ತಿ ಲಿಸ್ಟ್​ ಇಲ್ಲಿದೆ
Image
MM Keeravani: ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಪಡೆದ ‘ಆ​ರ್​ಆರ್​ಆರ್​’ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
Image
Golden Globes 2023: ಅತ್ಯುತ್ತಮ ಒರಿಜಿನಲ್ ಸಾಂಗ್ ಪ್ರಶಸ್ತಿ ಬಾಚಿಕೊಂಡ ಆರ್​ಆರ್​ಆರ್​ನ ನಾಟು ನಾಟು ಹಾಡು

ರಾಜಮೌಳಿಯ ಫೇವರಿಟ್​ ಸಂಗೀತ ನಿರ್ದೇಶಕ:

2001ರಲ್ಲಿ ರಾಜಮೌಳಿ ಮೊದಲ ಬಾರಿಗೆ ನಿರ್ದೇಶನ ಮಾಡಿದ ‘ಸ್ಟೂಡೆಂಟ್​ ನಂ.1’ ಸಿನಿಮಾದಿಂದ ಹಿಡಿದು ಕಳೆದ ವರ್ಷ ತೆರೆಕಂಡ ‘ಆರ್​ಆರ್​ಆರ್​’ ಚಿತ್ರದವರೆಗೆ ಎಲ್ಲ ಸಿನಿಮಾಗಳಿಗೂ ಎಂಎಂ ಕೀರವಾಣಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ರಾಜಮೌಳಿ ಅವರ ಗೆಲುವಿನಲ್ಲಿ ಕೀರವಾಣಿ ಅವರ ಕೊಡುಗೆಯೂ ಮಹತ್ವದ್ದಾಗಿದೆ.

ಇದನ್ನೂ ಓದಿ: MM Keeravani: ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಪಡೆದ ‘ಆ​ರ್​ಆರ್​ಆರ್​’ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

18 ಕೋಟಿ ರೂಪಾಯಿ ಮೀರಿದ ಕೀರವಾಣಿ ಸಂಭಾವನೆ:

ಒಮ್ಮೆ ರಾಷ್ಟ್ರ ಪ್ರಶಸ್ತಿ, 8 ಬಾರಿ ಫಿಲ್ಮ್​ಫೇರ್​ ಪ್ರಶಸ್ತಿ, 11 ಬಾರಿ ‘ನಂದಿ ಅವಾರ್ಡ್ಸ್​’ ಪಡೆದುಕೊಂಡ ಖ್ಯಾತಿ ಎಂಎಂ ಕೀರವಾಣಿ ಅವರಿಗೆ ಸಲ್ಲುತ್ತದೆ. ಈವರೆಗೂ ಅವರು ಒಂದು ಸಿನಿಮಾಗೆ ಬರೋಬ್ಬರಿ 18 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದರು ಎನ್ನಲಾಗಿದೆ. ಈಗ ಗೋಲ್ಡನ್​ ಗ್ಲೋಬ್ ಪ್ರಶಸ್ತಿ ಸಿಕ್ಕಿರುವುದರಿಂದ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆಯೇ ಸಂಭಾವನೆ ಕೂಡ ಜಾಸ್ತಿ ಆಗಲಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಕೀರವಾಣಿ ಮಿಂಚುತ್ತಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:07 pm, Wed, 11 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್