Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ; ‘ಪಿನಾಕ’ ಚಿತ್ರದಲ್ಲಿ ಗಣೇಶ್​ಗೆ ಹಿಂದೆಂದೂ ನೋಡಿರದ ಗೆಟಪ್

ನಟ ಗಣೇಶ್ ಅವರು 'ಪಿನಾಕ' ಎಂಬ ಹೊಸ ಚಿತ್ರದ ಮೂಲಕ ಅತೀಂದ್ರಿಯ ಶಕ್ತಿಯ ಕಥೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಧನಂಜಯ್ ನಿರ್ದೇಶನ ಮಾಡುತ್ತಿದ್ದಾರೆ. ಪುರಾಣ ಮತ್ತು ಇತಿಹಾಸದ ಮಿಶ್ರಣದ ಈ ಚಿತ್ರದಲ್ಲಿ ಹಾಸ್ಯ ಮತ್ತು ರೋಮಾಂಚಕ ಅಂಶಗಳಿವೆ.

ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ; ‘ಪಿನಾಕ’ ಚಿತ್ರದಲ್ಲಿ ಗಣೇಶ್​ಗೆ ಹಿಂದೆಂದೂ ನೋಡಿರದ ಗೆಟಪ್
ಗಣೇಶ್ ಸಿನಿಮಾ
Follow us
ರಾಜೇಶ್ ದುಗ್ಗುಮನೆ
|

Updated on: Jan 02, 2025 | 2:49 PM

ನಟ ಗಣೇಶ್ ಅವರು ರೊಮ್ಯಾಂಟಿಕ್ ಚಿತ್ರಗಳ ಮೂಲಕ ಹೆಚ್ಚು ಗಮನ ಸೆಳೆದವರು. ಅವರು ಸಿನಿಮಾಗಳ ಮೂಲಕ ನಗಿಸಿದ್ದಾರೆ, ಅಳಿಸಿದ್ದಾರೆ, ಭಾವನಾತ್ಮಕವಾಗಿ ಸೆಳೆದುಕೊಂಡಿದ್ದಾರೆ. ಹಾಡುಗಳ ಮೂಲಕ ಮನಸೂರೆಗೊಂಡಿದ್ದಾರೆ. ಆದರೆ, ಪ್ರೇಕ್ಷಕರನ್ನು ಭಯ ಬೀಳಿಸುವ ಕೆಲಸ ಅವರಿಂದ ಆಗಿರಲಿಲ್ಲ. ಈಗ ಅವರ ಹೊಸ ಸಿನಿಮಾ ಅನೌನ್ಸ್ ಮಾಡಿದ್ದು, ಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಪಿನಾಕ’ ಎಂಬ ಶೀರ್ಷಿಕೆ ಇಡಲಾಗಿದೆ.

ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ‌ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಇತ್ತೀಚೆಗೆ ಗಣೇಶ್ ಜೊತೆ ಸಿನಿಮಾ ಮಾಡುವ ಬಗ್ಗೆ ಘೋಷಣೆ ಮಾಡಿತ್ತು. ಈಗ ಈ ಚಿತ್ರದ ಟೈಟಲ್ ಹಾಗೂ ಟೀಸರ್ ರಿಲೀಸ್ ಆಗಿದೆ. ಈ ಸಂಸ್ಥೆ ನಿರ್ಮಿಸುತ್ತಿರುವ 49ನೇ ಸಿನಿಮಾ ಇದಾಗಿದ್ದು, ಕನ್ನಡದಲ್ಲಿ ಇದು ಸಂಸ್ಥೆಯ ಎರಡನೇ ಪ್ರಯತ್ನ. ಈ ಚಿತ್ರಕ್ಕೆ ಧನಂಜಯ್ ನಿರ್ದೇಶನ ಮಾಡುತ್ತಿದ್ದಾರೆ. ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿರೋ ಅವರು ಈಗ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ.

ಈ ಚಿತ್ರದ ಟೀಸರ್ ನೋಡಿದ ಕೆಲವರಿಗೆ ಗಣೇಶ್ ಮಾಟಗಾರನಂತೆಯೂ ಇನ್ನೂ ಕೆಲವರಿಗೆ ಅಘೋರಿಯಂತೆಯೂ ಕಾಣಿಸುತ್ತಾರೆ. ಆದರೆ, ಸಿನಿಮಾದಲ್ಲಿ ಇರೋದೇ ಬೇರೆ ಅನ್ನೋದು ಗಣೇಶ್ ಅಭಿಪ್ರಾಯ. ಸದ್ಯ ಸಿನಿಮಾಗೆ ಕಥೆ-ಚಿತ್ರಕಥೆ ಪೂರ್ಣಗೊಂಡಿದ್ದು, ಫೆಬ್ರವರಿಯಲ್ಲಿ ಶೂಟಿಂಗ್ ಆರಂಭ ಆಗಲಿದೆ. ‘ಕ್ಷುದ್ರ ಶಕ್ತಿಯ ಎದುರು ರುದ್ರ ಶಕ್ತಿಯ ಸಮರ’ ಎಂಬ ಸಾಲು ಟೀಸರ್​ನಲ್ಲಿ ಬರುತ್ತದೆ. ಸಿನಿಮಾದಲ್ಲಿಯೂ ರುದ್ರ ಮತ್ತು ಕ್ಷುದ್ರದ ನಡುವಿನ ಸಂಘರ್ಷವಿದೆ ಎನ್ನುತ್ತಾರೆ ಗಣೇಶ್.

‘ಪಿನಾಕ’ ಪುರಾಣ ಮತ್ತು ಇತಿಹಾಸದ ಮಿಶ್ರಣದ ಕಥೆ ಹೊಂದಿದೆ. ಗಣೇಶ್ ಅವರಿಗೆ ರೊಮ್ಯಾಂಟಿಕ್ ಹೀರೋ ಪಾತ್ರಗಳನ್ನು ಮಾಡಿ ಅವರಿಗೆ ಏಕತಾನತೆ ಕಾಡಿತ್ತು. ಆಗ ಅವರಿಗೆ ಸಿಕ್ಕಿದ್ದು ಈ ಕಥೆ. ಈ ಚಿತ್ರದಲ್ಲಿ ಗಣೇಶ್ ಅವರಿಂದ ಬೇರೆಯದನ್ನೇ ನಿರೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಗಣೇಶ್ ಜೊತೆ ಕೈ ಜೋಡಿಸಿದ ತೆಲುಗು ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’

ಈ ಚಿತ್ರಕ್ಕೆ ವಿಶ್ವಪ್ರಸಾದ್‍ ನಿರ್ಮಾಣ ಮಾಡಿದ್ದಾರೆ. ಅತೀಂದ್ರೀಯ ಶಕ್ತಿ ಮತ್ತು ಆಧ್ಯಾತ್ಮವನ್ನು ಸೇರಿಸಿ ಕಥೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಚಿತ್ರದಲ್ಲಿ ಹಾಸ್ಯ, ಸೆಂಟಿಮೆಂಟ್ ಕೂಡ ಇರಲಿದೆಯಂತೆ. ಪೀಪಲ್‍ ಮೀಡಿಯಾ ಫ್ಯಾಕ್ಟರಿ ಈ ಮೊದಲು ‘ಕಾರ್ತಿಕೇಯ 2’, ‘ಓ ಬೇಬಿ’, ‘ಧಮಾಕಾ’ ರೀತಿಯ ಹಿಟ್ ಚಿತ್ರಗಳನ್ನು ನೀಡಿದೆ. ‘ಪಿನಾಕ’ ಕನ್ನಡದ ಜೊತೆ ತೆಲುಗಿನಲ್ಲೂ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ