ಅಭಿಮಾನಿಯ ಬಾಳಲ್ಲಿ ಮಿರಾಕಲ್ ಮಾಡಿದ್ದ ಗೋಲ್ಡನ್ ಸ್ಟಾರ್ ಗಣೇಶ್​; ಇಲ್ಲಿದೆ ಅಚ್ಚರಿಯ ವಿಚಾರ

Ganesh Birthday: ಗಣೇಶ್​ಗೆ ಅಭಿಮಾನಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ತೋರಿದ ಪ್ರೀತಿಯಿಂದ ಅಭಿಮಾನಿಯ ಜೀವ ಉಳಿದಿತ್ತು. ಈ ವಿಚಾರ ಜೀ ಕನ್ನಡ ವಾಹಿನಿಯ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ರಿವೀಲ್ ಆಗಿತ್ತು.

ಅಭಿಮಾನಿಯ ಬಾಳಲ್ಲಿ ಮಿರಾಕಲ್ ಮಾಡಿದ್ದ ಗೋಲ್ಡನ್ ಸ್ಟಾರ್ ಗಣೇಶ್​; ಇಲ್ಲಿದೆ ಅಚ್ಚರಿಯ ವಿಚಾರ
ಗಣೇಶ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jul 02, 2022 | 11:44 AM

ಗೋಲ್ಡನ್ ಸ್ಟಾರ್ ಗಣೇಶ್ (Ganesh Birthday)​ ಅವರಿಗೆ ಇಂದು (ಜುಲೈ 2) ಬರ್ತ್​​​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರಿಗೆ ಎಲ್ಲ ಕಡೆಯಿಂದ ಶುಭಾಶಯಗಳು ಬರುತ್ತಿವೆ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಫ್ಯಾನ್ಸ್​ಗೆ ಸ್ವಲ್ಪ ಬೇಸರ ಇದೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಕೋಟ್ಯಂತರ ಮಂದಿ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಗಣೇಶ್​ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಗೋಲ್ಡನ್ ಸ್ಟಾರ್ (Golden Star Ganesh)​ ಅಭಿಮಾನಿಯ ಬಾಳಲ್ಲಿ ಮಿರಾಕಲ್ ಮಾಡಿದ್ದರು ಅನ್ನೋದು ವಿಶೇಷ.

2003ರಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾದ ‘ಕಾಮಿಡಿ ಟೈಮ್’ ಮೂಲಕ ಗಣೇಶ್​ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. 2006ರಲ್ಲಿ ತೆರೆಗೆ ಬಂದ ‘ಚೆಲ್ಲಾಟ’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಹೀರೋ ಆಗಿ ಕಾಣಿಸಿಕೊಂಡರು. ಅದೇ ವರ್ಷ ರಿಲೀಸ್ ಆದ ‘ಮುಂಗಾರು ಮಳೆ’ ಸಿನಿಮಾ ಗಣೇಶ್ ಅವರ ಅದೃಷ್ಟ ಬದಲಿಸಿತು. ಆ ಬಳಿಕ ಅವರು ಹಿಂದಿರುಗಿ ನೋಡಲೇ ಇಲ್ಲ. ಗಣೇಶ್​ಗೆ ಅಭಿಮಾನಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ತೋರಿದ ಪ್ರೀತಿಯಿಂದ ಅಭಿಮಾನಿಯ ಜೀವ ಉಳಿದಿತ್ತು. ಈ ವಿಚಾರ ಜೀ ಕನ್ನಡ ವಾಹಿನಿಯ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ರಿವೀಲ್ ಆಗಿತ್ತು.

‘ವೀಕೆಂಡ್ ವಿತ್​ ರಮೇಶ್​’ ವೇದಿಕೆ ಏರಿದ್ದ ತಂದೆ-ಮಕ್ಕಳು ಗಣೇಶ್ ಮಾಡಿದ ಸಹಾಯದ ಕಥೆ ಹೇಳಿದ್ದರು. ‘ಇವನು ನನ್ನ ಮಗ ಶಶಾಂಕ್. ಗೋಲ್ಡನ್ ಸ್ಟಾರ್ ಗಣೇಶ್ ಎಂದರೆ ಪಂಚಪ್ರಾಣ. ಜ್ವರ ಬಂದು 25 ದಿನ ಆಸ್ಪತ್ರೆಯಲ್ಲೇ ಇದ್ದ. ಜ್ವರ ಕಡಿಮೆಯೇ ಆಗುತ್ತಿರಲಿಲ್ಲ. ಮಗನಿಗೆ ರಕ್ತದ ಕ್ಯಾನ್ಸರ್ ಇದೆ ಎಂಬ ವಿಚಾರ ಆ ಬಳಿಕ ತಿಳಿಯಿತು. ಮಗನ ಸ್ಥಿತಿ ತುಂಬಾ ಗಂಭೀರ ಆಗಿತ್ತು. ಗಣೇಶ್ ಅವರನ್ನು ನೋಡಬೇಕು ಎಂದು ಹೇಳುತ್ತಿದ್ದ. ಗಣೇಶ್ ಆ ದಿನ ಆಸ್ಪತ್ರೆಗೆ ಬಂದರು’ ಎಂದು ಶಶಾಂಕ್ ತಂದೆ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ
Image
Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​
Image
‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​
Image
‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್
Image
‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು

‘ನನ್ನ ಮಗನಿಗೆ ಎಷ್ಟೇ ಚಿಕಿತ್ಸೆ ಕೊಟ್ಟರೂ ಜ್ವರ ಕಡಿಮೆ ಆಗುತ್ತಿರಲಿಲ್ಲ. ಆರೋಗ್ಯಯುತ ವ್ಯಕ್ತಿಯ ದೇಹದಲ್ಲಿ ಪ್ಲೇಟ್​ಲೆಟ್​ಗಳು 1.50 ಲಕ್ಷ ಇರಬೇಕು. ಆದರೆ, ನನ್ನ ಮಗ ಡೇಂಜರ್​ಜೋನ್​ನಲ್ಲಿದ್ದ. ಅಂದು ಗಣೇಶ್ ಬಂದು ಮಗನನ್ನು ಮುಟ್ಟಿದರು. 3 ಗಂಟೆಗಳ ಕಾಲ ನನ್ನ ಮಗನ ಜತೆ ಇದ್ದರು. ಮರುದಿನದಿಂದ ಮಿರಾಕಲ್ ಆಯ್ತು. ಪ್ಲೇಟ್​ಲೆಟ್ ಸಮ ಪ್ರಮಾಣಕ್ಕೆ ಬಂತು. ನನ್ನ ಮಗ ಬದುಕೋಕೆ ಗಣೇಶ್ ಕಾರಣ’ ಎಂದು ಅವರು ಹೇಳಿಕೊಂಡಿದ್ದರು.

ಇದನ್ನೂ ಓದಿ: Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​

ಮತ್ತೆ ಕಿರುತೆರೆ ಕದ ತಟ್ಟಿದ ನಟ ಗಣೇಶ್; ‘ಇಸ್ಮಾರ್ಟ್​’ ಜೋಡಿಗಳ ಜತೆ ಬರಲಿದ್ದಾರೆ ‘ಗೋಲ್ಡನ್​ ಸ್ಟಾರ್​’

Published On - 11:06 am, Sat, 2 July 22

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ