AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಯ ಬಾಳಲ್ಲಿ ಮಿರಾಕಲ್ ಮಾಡಿದ್ದ ಗೋಲ್ಡನ್ ಸ್ಟಾರ್ ಗಣೇಶ್​; ಇಲ್ಲಿದೆ ಅಚ್ಚರಿಯ ವಿಚಾರ

Ganesh Birthday: ಗಣೇಶ್​ಗೆ ಅಭಿಮಾನಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ತೋರಿದ ಪ್ರೀತಿಯಿಂದ ಅಭಿಮಾನಿಯ ಜೀವ ಉಳಿದಿತ್ತು. ಈ ವಿಚಾರ ಜೀ ಕನ್ನಡ ವಾಹಿನಿಯ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ರಿವೀಲ್ ಆಗಿತ್ತು.

ಅಭಿಮಾನಿಯ ಬಾಳಲ್ಲಿ ಮಿರಾಕಲ್ ಮಾಡಿದ್ದ ಗೋಲ್ಡನ್ ಸ್ಟಾರ್ ಗಣೇಶ್​; ಇಲ್ಲಿದೆ ಅಚ್ಚರಿಯ ವಿಚಾರ
ಗಣೇಶ್
TV9 Web
| Edited By: |

Updated on:Jul 02, 2022 | 11:44 AM

Share

ಗೋಲ್ಡನ್ ಸ್ಟಾರ್ ಗಣೇಶ್ (Ganesh Birthday)​ ಅವರಿಗೆ ಇಂದು (ಜುಲೈ 2) ಬರ್ತ್​​​ಡೇ ಸಂಭ್ರಮ. ಈ ವಿಶೇಷ ದಿನದಂದು ಅವರಿಗೆ ಎಲ್ಲ ಕಡೆಯಿಂದ ಶುಭಾಶಯಗಳು ಬರುತ್ತಿವೆ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಫ್ಯಾನ್ಸ್​ಗೆ ಸ್ವಲ್ಪ ಬೇಸರ ಇದೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಕೋಟ್ಯಂತರ ಮಂದಿ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಗಣೇಶ್​ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಗೋಲ್ಡನ್ ಸ್ಟಾರ್ (Golden Star Ganesh)​ ಅಭಿಮಾನಿಯ ಬಾಳಲ್ಲಿ ಮಿರಾಕಲ್ ಮಾಡಿದ್ದರು ಅನ್ನೋದು ವಿಶೇಷ.

2003ರಲ್ಲಿ ಉದಯ ಟಿವಿಯಲ್ಲಿ ಪ್ರಸಾರವಾದ ‘ಕಾಮಿಡಿ ಟೈಮ್’ ಮೂಲಕ ಗಣೇಶ್​ಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತು. 2006ರಲ್ಲಿ ತೆರೆಗೆ ಬಂದ ‘ಚೆಲ್ಲಾಟ’ ಚಿತ್ರದಲ್ಲಿ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಹೀರೋ ಆಗಿ ಕಾಣಿಸಿಕೊಂಡರು. ಅದೇ ವರ್ಷ ರಿಲೀಸ್ ಆದ ‘ಮುಂಗಾರು ಮಳೆ’ ಸಿನಿಮಾ ಗಣೇಶ್ ಅವರ ಅದೃಷ್ಟ ಬದಲಿಸಿತು. ಆ ಬಳಿಕ ಅವರು ಹಿಂದಿರುಗಿ ನೋಡಲೇ ಇಲ್ಲ. ಗಣೇಶ್​ಗೆ ಅಭಿಮಾನಿಗಳನ್ನು ಕಂಡರೆ ಸಖತ್ ಪ್ರೀತಿ. ಅವರು ತೋರಿದ ಪ್ರೀತಿಯಿಂದ ಅಭಿಮಾನಿಯ ಜೀವ ಉಳಿದಿತ್ತು. ಈ ವಿಚಾರ ಜೀ ಕನ್ನಡ ವಾಹಿನಿಯ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ರಿವೀಲ್ ಆಗಿತ್ತು.

‘ವೀಕೆಂಡ್ ವಿತ್​ ರಮೇಶ್​’ ವೇದಿಕೆ ಏರಿದ್ದ ತಂದೆ-ಮಕ್ಕಳು ಗಣೇಶ್ ಮಾಡಿದ ಸಹಾಯದ ಕಥೆ ಹೇಳಿದ್ದರು. ‘ಇವನು ನನ್ನ ಮಗ ಶಶಾಂಕ್. ಗೋಲ್ಡನ್ ಸ್ಟಾರ್ ಗಣೇಶ್ ಎಂದರೆ ಪಂಚಪ್ರಾಣ. ಜ್ವರ ಬಂದು 25 ದಿನ ಆಸ್ಪತ್ರೆಯಲ್ಲೇ ಇದ್ದ. ಜ್ವರ ಕಡಿಮೆಯೇ ಆಗುತ್ತಿರಲಿಲ್ಲ. ಮಗನಿಗೆ ರಕ್ತದ ಕ್ಯಾನ್ಸರ್ ಇದೆ ಎಂಬ ವಿಚಾರ ಆ ಬಳಿಕ ತಿಳಿಯಿತು. ಮಗನ ಸ್ಥಿತಿ ತುಂಬಾ ಗಂಭೀರ ಆಗಿತ್ತು. ಗಣೇಶ್ ಅವರನ್ನು ನೋಡಬೇಕು ಎಂದು ಹೇಳುತ್ತಿದ್ದ. ಗಣೇಶ್ ಆ ದಿನ ಆಸ್ಪತ್ರೆಗೆ ಬಂದರು’ ಎಂದು ಶಶಾಂಕ್ ತಂದೆ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ
Image
Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​
Image
‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​
Image
‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್
Image
‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು

‘ನನ್ನ ಮಗನಿಗೆ ಎಷ್ಟೇ ಚಿಕಿತ್ಸೆ ಕೊಟ್ಟರೂ ಜ್ವರ ಕಡಿಮೆ ಆಗುತ್ತಿರಲಿಲ್ಲ. ಆರೋಗ್ಯಯುತ ವ್ಯಕ್ತಿಯ ದೇಹದಲ್ಲಿ ಪ್ಲೇಟ್​ಲೆಟ್​ಗಳು 1.50 ಲಕ್ಷ ಇರಬೇಕು. ಆದರೆ, ನನ್ನ ಮಗ ಡೇಂಜರ್​ಜೋನ್​ನಲ್ಲಿದ್ದ. ಅಂದು ಗಣೇಶ್ ಬಂದು ಮಗನನ್ನು ಮುಟ್ಟಿದರು. 3 ಗಂಟೆಗಳ ಕಾಲ ನನ್ನ ಮಗನ ಜತೆ ಇದ್ದರು. ಮರುದಿನದಿಂದ ಮಿರಾಕಲ್ ಆಯ್ತು. ಪ್ಲೇಟ್​ಲೆಟ್ ಸಮ ಪ್ರಮಾಣಕ್ಕೆ ಬಂತು. ನನ್ನ ಮಗ ಬದುಕೋಕೆ ಗಣೇಶ್ ಕಾರಣ’ ಎಂದು ಅವರು ಹೇಳಿಕೊಂಡಿದ್ದರು.

ಇದನ್ನೂ ಓದಿ: Ganesh Birthday: ಜನ್ಮದಿನದ ಸಲುವಾಗಿ ಅಭಿಮಾನಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡ ‘ಗೋಲ್ಡನ್​ ಸ್ಟಾರ್​’ ಗಣೇಶ್​

ಮತ್ತೆ ಕಿರುತೆರೆ ಕದ ತಟ್ಟಿದ ನಟ ಗಣೇಶ್; ‘ಇಸ್ಮಾರ್ಟ್​’ ಜೋಡಿಗಳ ಜತೆ ಬರಲಿದ್ದಾರೆ ‘ಗೋಲ್ಡನ್​ ಸ್ಟಾರ್​’

Published On - 11:06 am, Sat, 2 July 22

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?