AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​Golden Star Ganesh: ಹುಟ್ಟುಹಬ್ಬದ ದಿನ ಹೊಸ ಗೆಟಪ್​​ನಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್​; ಭಿನ್ನವಾಗಿದೆ ‘ಕೃಷ್ಣಂ ಪ್ರಣಯ ಸಖಿ’ ಪೋಸ್ಟರ್​

Happy Birthday ​Golden Star Ganesh: ಗಣೇಶ್​ ಅವರ ಜನ್ಮದಿನಕ್ಕೆ ಈ ಪೋಸ್ಟರ್​ ಬಿಡುಗಡೆ ಆಗಿದೆ. ಇದನ್ನು ನೋಡಿದ ಎಲ್ಲರಿಗೂ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಕಥೆ ಬಗ್ಗೆ ಕೌತುಕ ಮೂಡಿದೆ.

​Golden Star Ganesh: ಹುಟ್ಟುಹಬ್ಬದ ದಿನ ಹೊಸ ಗೆಟಪ್​​ನಲ್ಲಿ ‘ಗೋಲ್ಡನ್​ ಸ್ಟಾರ್​’ ಗಣೇಶ್​; ಭಿನ್ನವಾಗಿದೆ ‘ಕೃಷ್ಣಂ ಪ್ರಣಯ ಸಖಿ’ ಪೋಸ್ಟರ್​
ಗೋಲ್ಡನ್​ ಸ್ಟಾರ್​ ಗಣೇಶ್​
TV9 Web
| Edited By: |

Updated on:Jul 02, 2023 | 10:06 AM

Share

ಕನ್ನಡದ ಖ್ಯಾತ ನಟ ಗಣೇಶ್​ (​Golden Star Ganesh) ಅವರಿಗೆ ಇಂದು (ಜುಲೈ 2) ಹುಟ್ಟುಹಬ್ಬದ ಸಂಭ್ರಮ. ಈ ದಿನವನ್ನು ಅವರ ಅಭಿಮಾನಿಗಳು ಖುಷಿಯಿಂದ ಸೆಲೆಬ್ರೇಟ್​ ಮಾಡುತ್ತಿದ್ದಾರೆ. ‘ಗೋಲ್ಡನ್​ ಸ್ಟಾರ್​’ ಎಂದೇ ಖ್ಯಾತಿ ಪಡೆದಿರುವ ಗಣೇಶ್​ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. 43ನೇ ವಸಂತಕ್ಕೆ ಕಾಲಿಟ್ಟಿರುವ ಅವರಿಗೆ ಎಲ್ಲ ಕಡೆಗಳಿಂದ ಜನ್ಮದಿನದ (​Ganesh Birthday) ಶುಭಾಶಯ ಹರಿದುಬರುತ್ತಿದೆ. ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ವಿಶ್​ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಸಿನಿಮಾ ತಂಡಗಳಿಂದ ಹೊಸ ಪೋಸ್ಟರ್​ಗಳು ಬಿಡುಗಡೆ ಆಗಿವೆ. ಆ ಪೈಕಿ ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಸಿನಿಮಾದ ಪೋಸ್ಟರ್​ ಗಮನ ಸೆಳೆಯುತ್ತಿದೆ.

ಗಣೇಶ್​ ಅವರು ‘ಚೆಲ್ಲಾಟ’ ಸಿನಿಮಾದಿಂದ ಈವರೆಗೆ ಹಲವಾರು ಬಗೆಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಅನಾವರಣ ಆಗಿರುವ ‘ಕೃಷ್ಣಂ ಪ್ರಣಯ ಸಖಿ’ ಪೋಸ್ಟರ್​ನಲ್ಲಿ ಅವರ ಗೆಟಪ್​ ಸಖತ್​ ಭಿನ್ನವಾಗಿದೆ. ತುಂಬ ಸ್ಟೈಲಿಶ್​ ಆಗಿ ಅವರು ಡ್ರೆಸ್​ ಮಾಡಿಕೊಂಡಿದ್ದಾರೆ. ಹಿಂಬದಿಯಲ್ಲಿ ಐಷಾರಾಮಿ ಕಾರು ಇದೆ. ಆದರೆ ಅಲ್ಲೊಂದು ಟ್ವಿಸ್ಟ್​ ಕೂಡ ಇದೆ. ಭಾರಿ ಶ್ರೀಮಂತನಂತೆ ಕಾಣಿಸಿಕೊಂಡ ಗಣೇಶ್​ ಅವರು ಕೈಯಲ್ಲಿ ಪೊರಕೆ, ನೆಲ ಒರೆಸುವ ಸ್ಟಿಕ್​ ಹಾಗೂ ಬಕೆಟ್​ ಹಿಡಿದುಕೊಂಡಿದ್ದಾರೆ. ಹಣೆಗೆ ಟವೆಲ್​ ಕಟ್ಟಿಕೊಂಡಿದ್ದಾರೆ. ಈ ಪೋಸ್ಟರ್​ ನೋಡಿದ ಎಲ್ಲರಿಗೂ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಕಥೆ ಬಗ್ಗೆ ಕೌತುಕ ಮೂಡಿದೆ.

‘ತ್ರಿಶೂಲ್ ಎಂಟರ್​ಟೇನ್ಮೆಂಟ್’ ಬ್ಯಾನರ್​ ಮೂಲಕ ಪ್ರಶಾಂತ್ ಜಿ. ರುದ್ರಪ್ಪ ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ದಂಡುಪಾಳ್ಯ’ ಖ್ಯಾತಿಯ ನಿರ್ದೇಶಕ ಶ್ರೀನಿವಾಸ್​ ರಾಜು ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಗಣೇಶ್​ ಅಭಿನಯದ 41ನೇ ಚಿತ್ರವಾಗಿ ‘ಕೃಷ್ಣಂ ಪ್ರಣಯ ಸಖಿ’ ಮೂಡಿಬರಲಿದೆ. ಅರ್ಜುನ್ ಜನ್ಯ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಗಣೇಶ್​​ ಅವರಿಗೆ ಜೋಡಿಯಾಗಿ ಮಾಳವಿಕಾ ನಾಯರ್ ಅಭಿನಯಿಸುತ್ತಿದ್ದಾರೆ. ಸಾಧುಕೋಕಿಲ, ಶಶಿಕುಮಾರ್, ರಂಗಾಯಣ ರಘು, ಸುಧಾರಾಣಿ, ಶ್ರುತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ, ಶ್ರೀನಿವಾಸಮೂರ್ತಿ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಮೈಸೂರು, ರಾಜಸ್ಥಾನ ಮತ್ತು ಯುರೋಪ್​ನಲ್ಲಿ ಕೂಡ ಶೂಟಿಂಗ್ ಮಾಡಲಾಗುವುದು. ಗಣೇಶ್​ ಮತ್ತು ಶ್ರೀನಿವಾಸ್​ ರಾಜು ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಮೂಡಿದೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಈ ಸಿನಿಮಾದ ಹೊಸ ಪೋಸ್ಟರ್​ ವೈರಲ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:59 am, Sun, 2 July 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?