AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ

Ganesh Birthday: ಜು.2ರಂದು ಗೋಲ್ಡನ್​ ಸ್ಟಾರ್​ ಗಣೇಶ್​ ಜನ್ಮದಿನ. ಹಾಗಾಗಿ, ಹುಟ್ಟುಹಬ್ಬ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ಇಷ್ಟೊಂದು ಸಾವು-ನೋವಿನಲ್ಲಿ ಸಂಭ್ರಮಿಸುವುದು ಸರಿಯಲ್ಲ; ಅಭಿಮಾನಿಗಳಿಗೆ ಗಣೇಶ್​ ವಿಶೇಷ ಮನವಿ
ಗಣೇಶ್​
ಮದನ್​ ಕುಮಾರ್​
|

Updated on:Jun 29, 2021 | 10:07 AM

Share

ಕೊರೊನಾ ವೈರಸ್​ನಿಂದಾಗಿ ಎಲ್ಲ ಕ್ಷೇತ್ರಗಳ ರೀತಿ ಚಿತ್ರರಂಗ ಕೂಡ ತತ್ತರಿಸಿದೆ. ಆರ್ಥಿಕ ನಷ್ಟದ ಹೊಡೆತ ಒಂದುಕಡೆಯಾದರೆ, ಜನರು ಪ್ರಾಣಗಳನ್ನು ಕಳೆದುಕೊಂಡಿರುವ ನೋವು ಇನ್ನೊಂದು ಕಡೆ. ಈ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಬೇಡ ಎಂದು ನಟ ಗೋಲ್ಡನ್​ ಸ್ಟಾರ್​ ಗಣೇಶ್​ ಹೇಳಿದ್ದಾರೆ. ಜು.2ರಂದು ಅವರ ಜನ್ಮದಿನ. ಹಾಗಾಗಿ, ಹುಟ್ಟುಹಬ್ಬ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಎಲ್ಲರಿಗಾಗಿ ಪತ್ರ ಬರೆದಿದ್ದಾರೆ.

‘ಪ್ರೀತಿಯ ಅಭಿಮಾನಿ ಗೆಳೆಯರಿಗೆ… ಎಲ್ಲರಿಗೂ ನಿಮ್ಮ ಗಣೇಶ್​ ಮಾಡುವ ನಮಸ್ಕಾರಗಳು. ಮೊದಲಿಗೆ ನನಗೆ ಅರಿವಿದ್ದು ಅರಿವಿಲ್ಲದೆಯೋ ಈ ಕೊವಿಡ್​ ಸಮಯದಲ್ಲಿ ನನ್ನ ಹೆಸರಿನಲ್ಲಿ ಮಾಡಿರುವ ಕೆಲಸಗಳಿಗೆ ನಿಮಗೆ ಪ್ರಣಾಮಗಳು. ಈ ಮೂಲಕ ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಪ್ರತಿ ವರ್ಷ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿದ್ದೀರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಕ್ಕು ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು ಗೆಳೆಯರು ಬಲಿಯಾಗಿದ್ದು ನೋವು ತರಿಸಿದೆ. ಅದೆಷ್ಟೋ ಜನರ ಜೀವನ ನಲುಗಿ ಹೋಗಿದೆ’ ಎಂದು ಗಣೇಶ್​ ಹೇಳಿದ್ದಾರೆ.

‘ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲ ಎಂದೆನಿಸಿ, ಈ ವರ್ಷ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸಿರುತ್ತೇನೆ. ಅಲ್ಲದೇ ನಾನು ಜನ್ಮದಿನದಂದು ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿರುತ್ತೇನೆ. ಪ್ರತಿ ವರ್ಷವೂ ಹುಟ್ಟುಹಬ್ಬ ಆಚರಣೆಗೆ ಪ್ರೀತಿಯಿಂದ ನೀವು ತರುವ ಕೇಕ್​, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೇ ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿ ಇರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ. ಇಂತಿ ನಿಮ್ಮವ ಗಣೇಶ್​’ ಎಂದು ಪತ್ರದಲ್ಲಿ ಗೋಲ್ಡನ್​ ಸ್ಟಾರ್​ ಮನವಿ ಮಾಡಿಕೊಂಡಿದ್ದಾರೆ.

ಹಲವು ಸಿನಿಮಾ ಕೆಲಗಳಲ್ಲಿ ಗಣೇಶ್ ಬ್ಯುಸಿ ಆಗಿದ್ದಾರೆ. ಯೋಗರಾಜ್​ ಭಟ್​ ನಿರ್ದೇಶನ ಮಾಡುತ್ತಿರುವ ‘ಗಾಳಿಪಟ 2’ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ನಿರ್ದೇಶಕ ಸಿಂಪಲ್​ ಸುನಿ ಜೊತೆ ಅವರು ‘ಸಖತ್​’ ಚಿತ್ರ ಮಾಡುತ್ತಿದ್ದಾರೆ. ಆ ಸಿನಿಮಾದಲ್ಲಿ ಗಣೇಶ್​ಗೆ ಡಿಫರೆಂಟ್​ ಗೆಟಪ್​ ಇದೆ. ಈ ಸಿನಿಮಾ ತಂಡಗಳಿಂದ ಅವರ ಜನ್ಮದಿನ ಪ್ರಯುಕ್ತ ಹೊಸ ಪೋಸ್ಟರ್​ ಅಥವಾ ಟೀಸರ್​ಗಳ ಗಿಫ್ಟ್​ ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ:

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?

Published On - 9:54 am, Tue, 29 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ