AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ರೇಟಿಂಗ್, ಮೊದಲ ದಿನದ ಗಳಿಕೆ ಎಷ್ಟು?

ಗುರುವಾರ (ಆಗಸ್ಟ್​ 15) ಬಿಡುಗಡೆ ಆಗಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾವನ್ನು ನೋಡಿ ಜನರು ಇಷ್ಟಪಟ್ಟಿದ್ದಾರೆ. ಈ ಚಿತ್ರದಲ್ಲಿ ಶರಣ್ಯ ಶೆಟ್ಟಿ, ‘ಗೋಲ್ಡನ್​ ಸ್ಟಾರ್​’ ಗಣೇಶ್​ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದಿಂದ ಗಣೇಶ್ ಅವರು ಗೆಲುವು ಕಂಡಿದ್ದಾರೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ರೇಟಿಂಗ್, ಮೊದಲ ದಿನದ ಗಳಿಕೆ ಎಷ್ಟು?
ಗಣೇಶ್
ರಾಜೇಶ್ ದುಗ್ಗುಮನೆ
|

Updated on:Aug 16, 2024 | 9:02 AM

Share

ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಆಗಸ್ಟ್ 15ರಂದು ಬಿಡುಗಡೆ ಆಗಿದೆ. ಈ ಚಿತ್ರದಿಂದ ಅವರು ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಗಣೇಶ್ ಅವರ ನಟನೆಯನ್ನು ಎಲ್ಲರೂ ಹೊಗಳುತ್ತಿದ್ದಾರೆ. ಸಿನಿಮಾದಲ್ಲಿ ಭರ್ಜರಿ ಕಾಮಿಡಿ ಇದೆ ಎಂಬ ಅಭಿಪ್ರಾಯ ಅನೇಕರಿಂದ ವ್ಯಕ್ತವಾಗಿದೆ. ಮೊದಲ ದಿನ ಈ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ಗಳಿಕೆ ಮಾಡುವ ನಿರೀಕ್ಷೆ ಇದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಗಣೇಶ್, ರಂಗಾಯಣ ರಘು, ಸಾಧು ಕೋಕಿಲ, ಮಾಳವಿಕಾ ನಾಯರ್, ಶರಣ್ಯಾ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರ ಮೊದಲದಿನ 1.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು Sacnilk ವೆಬ್​ಸೈಟ್ ವರದಿ ಮಾಡಿದೆ. ಇಂದು (ಆಗಸ್ಟ್ 16), ಶನಿವಾರ (ಆಗಸ್ಟ್ 17), ಭಾನುವಾರ (ಆಗಸ್ಟ್ 18) ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಸಿನಿಮಾ ತಂಡದ ಕಡೆಯಿಂದ ಇನ್ನಷ್ಟೇ ಪಕ್ಕಾ ಲೆಕ್ಕ ಬರಬೇಕಿದೆ.

‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ ಸದ್ಯ (ಆಗಸ್ಟ್​ 16ರ ಮುಂಜಾನೆ 9 ಗಂಟೆ ವೇಳೆಗೆ) 9.2 ರೇಟಿಂಗ್ ಸಿಕ್ಕಿದೆ. ಇನ್ನು, ಐಎಂಡಿಬಿಯಲ್ಲಿ 8.7 ರೇಟಿಂಗ್ ಸಿಕ್ಕಿದೆ. ಶ್ರೀನಿವಾಸ್ ರಾಜು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಲ ಸಿಕ್ಕಿದೆ.

ಇದನ್ನೂ ಓದಿ: ಕೃಷ್ಣಂ ಪ್ರಣಯ ಸಖಿ ಸಿನಿಮಾ ನೋಡಲು ಬಂದ ಜನ ಸಾಗರ; ಶರಣ್ಯ ಶೆಟ್ಟಿಗೆ ಅಚ್ಚರಿ

ಇತ್ತೀಚೆಗೆ ಸಿನಿಮಾಗಳೇ ಇಲ್ಲದೆ ಕನ್ನಡ ಚಿತ್ರರಂಗ ಮಂಕಾಗಿದೆ. ಕಳೆದ ವಾರ ‘ಭೀಮ’ ಸಿನಿಮಾ ರಿಲೀಸ್ ಆಯಿತು. ಈ ವಾರ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಬಿಡುಗಡೆ ಕಂಡು ಯಶಸ್ಸು ಪಡೆದುಕೊಂಡಿದೆ. ಈ ಚಿತ್ರದಿಂದ ಗಣೇಶ್ ಗೆಲುವಿನ ನಗೆ ಬೀರಿದ್ದಾರೆ. ಮತ್ತೆ ಜನರು ಚಿತ್ರರಂಗದತ್ತ ಬರುತ್ತಿರುವುದು ಎಲ್ಲರ ಖುಷಿ ಹೆಚ್ಚಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:01 am, Fri, 16 August 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ