ಬಿಡುಗಡೆಗೆ ಹತ್ತಿರವಾಗುತ್ತಿದೆ ‘ಗೋಲ್ಡನ್​ ಸ್ಟಾರ್’ ಗಣೇಶ್​ ನಟನೆಯ ಹೊಸ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’

‘ಗೋಲ್ಡನ್​ ಸ್ಟಾರ್’ ಗಣೇಶ್​ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ಶ್ರೀನಿವಾಸ್​ ರಾಜು ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಾಕಷ್ಟು ಕಾರಣಗಳಿಂದಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಸದ್ಯಕ್ಕೆ ಈ ಸಿನಿಮಾಗೆ ಚಿತ್ರೀಕರಣ ಮುಕ್ತಾಯ ಆಗಿದೆ. ಡಬ್ಬಿಂಗ್ ಕಾರ್ಯ ಕೂಡ ಮುಕ್ತಾಯ ಹಂತವನ್ನು ತಲುಪಿದೆ.

ಬಿಡುಗಡೆಗೆ ಹತ್ತಿರವಾಗುತ್ತಿದೆ ‘ಗೋಲ್ಡನ್​ ಸ್ಟಾರ್’ ಗಣೇಶ್​ ನಟನೆಯ ಹೊಸ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’
ಮಾಳವಿಕಾ ನಾಯರ್, ಗಣೇಶ್​
Follow us
|

Updated on: Dec 06, 2023 | 3:02 PM

ನಟ ‘ಗೋಲ್ಡನ್ ಸ್ಟಾರ್​’ ಗಣೇಶ್​ (Golden Star Ganesh) ಅವರ ಸಿನಿಮಾಗಳೆಂದರೆ ಫ್ಯಾಮಿಲಿ ಪ್ರೇಕ್ಷಕರಿಗೆ ತುಂಬ ಇಷ್ಟ. ಆ ರೀತಿಯ ಕಥೆಗಳನ್ನೇ ಆಯ್ಕೆ ಮಾಡಿಕೊಂಡು ಗಣೇಶ್​ ಸಿನಿಮಾ ಮಾಡುತ್ತಾರೆ. ಆ ಕಾರಣದಿಂದ ಅವರ ಪ್ರತಿ ಸಿನಿಮಾ ಮೇಲೂ ಫ್ಯಾಮಿಲಿ ಪ್ರೇಕ್ಷಕರು ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಈಗ ಗಣೇಶ್​ ಅವರು ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರಿಗೆ ಜೋಡಿಯಾಗಿ ಮಾಳವಿಕಾ ನಾಯರ್ (Malvika Nair) ಅಭಿನಯಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ಯಾವ ಹಂತದಲ್ಲಿ ಸಾಗುತ್ತಿವೆ ಎಂಬ ಬಗ್ಗೆ ಚಿತ್ರತಂಡದಿಂದ ಅಪ್​ಡೇಟ್​ ಸಿಕ್ಕಿದೆ. ಆ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ..

ಕನ್ನಡ ಚಿತ್ರರಂಗದ ಖ್ಯಾತ ಡೈರೆಕ್ಟರ್​ ಶ್ರೀನಿವಾಸ್​ ರಾಜು ಅವರು ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಾಕಷ್ಟು ಕಾರಣಗಳಿಂದಾಗಿ ಈ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಸದ್ಯಕ್ಕೆ ಈ ಸಿನಿಮಾಗೆ ಚಿತ್ರೀಕರಣ ಮುಕ್ತಾಯ ಆಗಿದೆ. ಆ ಮೂಲಕ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಲಾಗಿದೆ. ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಬೆಂಗಳೂರು, ಇಟಲಿ ಮತ್ತು ಮಾಲ್ಟಾದಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಸಾಧುಕೋಕಿಲ, ಶರಣ್ಯ ಶೆಟ್ಟಿ, ಶಶಿಕುಮಾರ್, ರಂಗಾಯಣ ರಘು, ಶ್ರುತಿ, ಭಾವನಾ, ರಾಮಕೃಷ್ಣ, ಅಶೋಕ್, ಮಾನಸಿ ಸುಧೀರ್, ಶಿವಧ್ವಜ್, ರಘುರಾಮ್, ಗಿರಿ ಶಿವಣ್ಣ, ಅಂಬುಜಾ ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸದ್ಯಕ್ಕೆ ಶೂಟಿಂಗ್​ ಮುಗಿಸಿಕೊಂಡಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ತಂಡವು ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ತೊಡಗಿಕೊಂಡಿದೆ. ಸಿನಿಮಾದ ಡಬ್ಬಿಂಗ್ ಕಾರ್ಯ ಕೂಡ ಮುಕ್ತಾಯ ಹಂತವನ್ನು ತಲುಪಿದೆ. ಶೀಘ್ರದಲ್ಲೇ ಈ ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಅಪ್​ಡೇಟ್​ ಸಿಗಲಿದೆ. ಅದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ. ವೆಂಕಟ್ ಪ್ರಸಾದ್ ಅವರ ಛಾಯಾಗ್ರಹಣ ಮತ್ತು ಕೆ.ಎಂ. ಪ್ರಕಾಶ್ ಅವರ ಸಂಕಲನ ಈ ಸಿನಿಮಾಗಿದೆ.

ಇದನ್ನೂ ಓದಿ: ‘ಅನುಬಂಧ’ ವೇದಿಕೆ ಮೇಲೆ ‘ಮುಂಗಾರು ಮಳೆ’ ಮರು ಸೃಷ್ಟಿ; ಗಣೇಶ್ ಡೈಲಾಗ್​ಗೆ ಅಭಿಮಾನಿಗಳು ಖುಷ್

‘ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ 5 ಹಾಡುಗಳು ಇರಲಿವೆ. ‘ತ್ರಿಶೂಲ್ ಎಂಟರ್​ಟೇನ್ಮೆಂಟ್​’ ಮೂಲಕ ಪ್ರಶಾಂತ್ ಜಿ. ರುದ್ರಪ್ಪ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಈ ಸಂಸ್ಥೆಯಿಂದ ನಿರ್ಮಾಣ ಆಗುತ್ತಿರುವ 3ನೇ ಸಿನಿಮಾ. ‘ಗೋಲ್ಡನ್ ಸ್ಟಾರ್’ ಗಣೇಶ್ ನಟನೆಯ 41ನೇ ಚಿತ್ರವಾಗಿ ‘ಕೃಷ್ಣಂ ಪ್ರಣಯ ಸಖಿ’ ಮೂಡಿಬರುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಹಾರಾಷ್ಟ್ರದಲ್ಲೂ ಭಾರೀ ಮಳೆ, ಬಂದರು ನಗರ ರತ್ನಗಿರಿ ಸಂಪೂರ್ಣವಾಗಿ ಜಲಾವೃತ
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಮಾಧ್ಯಮಗಳಿಗಾಗಿ ತನಿಖೆಯನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗಲ್ಲ: ಪರಮೇಶ್ವರ್
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಬೆಳಗಾವಿ ಬಳಿ ಘಾಟ್ ರಸ್ತೆಯಲ್ಲಿ ಕುಡುಕನ ಹುಚ್ಚಾಟ, ವಾಹನ ಸವಾರಿಗೆ ಸಮಸ್ಯೆ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ