AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್ ಜೊತೆ ಕೈ ಜೋಡಿಸಿದ ತೆಲುಗು ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’

‘ಗೋಲ್ಡನ್‌ ಸ್ಟಾರ್‌’ ಗಣೇಶ್ ಅವರು ಟಾಲಿವುಡ್​ನ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಪ್ರೊಡಕ್ಷನ್ ಹೌಸ್ ಜೊತೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಲಿದ್ದು, ಹೊಸ ವರ್ಷದ ಹೊಸ್ತಿಲಲ್ಲಿ ಈ ಸಿನಿಮಾ ಅನೌನ್ಸ್ ಆಗಿದೆ. ನೃತ್ಯ ನಿರ್ದೇಶಕ ಧನಂಜಯ್‌ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

ಗಣೇಶ್ ಜೊತೆ ಕೈ ಜೋಡಿಸಿದ ತೆಲುಗು ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’
Golden Star Ganesh
ಮದನ್​ ಕುಮಾರ್​
|

Updated on: Dec 27, 2024 | 6:17 PM

Share

ನಟ ‘ಗೋಲ್ಡನ್‌ ಸ್ಟಾರ್‌’ ಗಣೇಶ್ ಅವರು ನಟಿಸಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್​ ಹಿಟ್​ ಆಯಿತು. ಆ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಅವರಿಗೆ ಬೇಡಿಕೆ ಕೂಡ ಹೆಚ್ಚಾಗಿದೆ. ‘ಕೃಷ್ಣಂ ಪ್ರಣಯ ಸಖಿ’ 100 ದಿನ ಯಶಸ್ವಿ ಪ್ರದರ್ಶನ ಕಂಡಿದ್ದೂ ಅಲ್ಲದೇ, ಒಟಿಟಿಯಲ್ಲಿಯೂ ಜನರ ಮೆಚ್ಚುಗೆ ಪಡೆದಿದೆ. ಈ ನಡುವೆ ಗಣೇಶ್ ಅವರ ಅಭಿಮಾನಿಗಳಿಗೆ ಒಂದು ಹೊಸ ಸುದ್ದಿ ಸಿಕ್ಕಿದೆ. ಟಾಲಿವುಡ್​ನ ಪ್ರತಿಷ್ಠಿತ ಪ್ರೊಡಕ್ಷನ್​ ಹೌಸ್​ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಜತೆಗೆ ಗಣೇಶ್‌ ಹೊಸ ಸಿನಿಮಾ ಮಾಡಲಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ.

‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆ ಬಂಡವಾಳ ಹೂಡಲಿರುವ #PMF49 ಚಿತ್ರದಲ್ಲಿ ಗಣೇಶ್‌ ಅಭಿನಯಿಸಲಿದ್ದಾರೆ. ಈ ಸಿನಿಮಾದ ಮೂಲಕ ‘ಪೀಪಲ್‌ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಕನ್ನಡದಲ್ಲಿಯೂ ದೊಡ್ಡ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ. ‘ಕಾರ್ತಿಕೇಯ 2’, ‘ವೆಂಕಿ ಮಾಮ’, ‘ಓ ಬೇಬಿ’, ‘ಧಮಾಕಾ’ ಮುಂತಾದ ಸೂಪರ್​ ಹಿಟ್ ಸಿನಿಮಾಗಳನ್ನು ಈ ಸಂಸ್ಥೆ ನೀಡಿದೆ.

ತೆಲುಗು ಚಿತ್ರೋದ್ಯಮಕ್ಕೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಅಪಾರ ಕೊಡುಗೆ ನೀಡಿದೆ. ಈಗ ಗಣೇಶ್​ ನಟನೆಯ ಸಿನಿಮಾದ ಮೂಲಕ ಸ್ಯಾಂಡಲ್​ವುಡ್​ನಲ್ಲೂ ಈ ಸಂಸ್ಥೆ ಅದ್ದೂರಿ ಸಿನಿಮಾವನ್ನು ನಿರ್ಮಿಸಲು ಬಂದಿದೆ. ಕನ್ನಡದ ಚಿತ್ರರಂಗದ ಸಾಮರ್ಥ್ಯವನ್ನು ಇನ್ನಷ್ಟು ಹಿರಿದಾಗಿಸುವ ಧ್ಯೇಯದೊಂದಿಗೆ, ಟಿಜಿ ವಿಶ್ವ ಪ್ರಸಾದ್ ನೇತೃತ್ವದ ಈ ಸಂಸ್ಥೆಯು ಒಳ್ಳೆಯ ಕಥೆ ಹಾಗೂ ಅತ್ಯಾಧುನಿಕ ಗುಣಮುಟ್ಟದ ನಿರ್ಮಾಣದ ಮೂಲಕ ಸ್ಯಾಂಡಲ್​ವುಡ್​ಗೆ ಪ್ರವೇಶಿಸುತ್ತಿದೆ.

ಇದನ್ನೂ ಓದಿ: Krishnam Pranaya Sakhi Review: ಫ್ಯಾಮಿಲಿ ಪ್ರೇಕ್ಷಕರಿಗೊಂದು ಟಿಪಿಕಲ್​ ಗಣೇಶ್​ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’

ಪ್ರಸಿದ್ಧ ಡ್ಯಾನ್ಸ್ ಕೊರಿಯೋಗ್ರಾಫರ್​ ಧನಂಜಯ್‌ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. ಈ ಮೂಲಕ ಅವರು ದೊಡ್ಡ ಪ್ರಾಜೆಕ್ಟ್‌ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಟಿಜಿ ವಿಶ್ವ ಪ್ರಸಾದ್ ನಿರ್ಮಾಣದ ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಲಿದೆ. ಈ ಸಿನಿಮಾದ ಶೀರ್ಷಿಕೆ ಏನು? ಪಾತ್ರವರ್ಗದಲ್ಲಿ ಗಣೇಶ್ ಜೊತೆ ಯಾರೆಲ್ಲ ಇರಲಿದ್ದಾರೆ ಮುಂದಿನ ದಿನಗಳಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್
ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್