AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ್ ಜೊತೆ ಕೈ ಜೋಡಿಸಿದ ತೆಲುಗು ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’

‘ಗೋಲ್ಡನ್‌ ಸ್ಟಾರ್‌’ ಗಣೇಶ್ ಅವರು ಟಾಲಿವುಡ್​ನ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಪ್ರೊಡಕ್ಷನ್ ಹೌಸ್ ಜೊತೆ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಲಿದ್ದು, ಹೊಸ ವರ್ಷದ ಹೊಸ್ತಿಲಲ್ಲಿ ಈ ಸಿನಿಮಾ ಅನೌನ್ಸ್ ಆಗಿದೆ. ನೃತ್ಯ ನಿರ್ದೇಶಕ ಧನಂಜಯ್‌ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

ಗಣೇಶ್ ಜೊತೆ ಕೈ ಜೋಡಿಸಿದ ತೆಲುಗು ನಿರ್ಮಾಣ ಸಂಸ್ಥೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’
Golden Star Ganesh
ಮದನ್​ ಕುಮಾರ್​
|

Updated on: Dec 27, 2024 | 6:17 PM

Share

ನಟ ‘ಗೋಲ್ಡನ್‌ ಸ್ಟಾರ್‌’ ಗಣೇಶ್ ಅವರು ನಟಿಸಿದ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್​ ಹಿಟ್​ ಆಯಿತು. ಆ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಅವರಿಗೆ ಬೇಡಿಕೆ ಕೂಡ ಹೆಚ್ಚಾಗಿದೆ. ‘ಕೃಷ್ಣಂ ಪ್ರಣಯ ಸಖಿ’ 100 ದಿನ ಯಶಸ್ವಿ ಪ್ರದರ್ಶನ ಕಂಡಿದ್ದೂ ಅಲ್ಲದೇ, ಒಟಿಟಿಯಲ್ಲಿಯೂ ಜನರ ಮೆಚ್ಚುಗೆ ಪಡೆದಿದೆ. ಈ ನಡುವೆ ಗಣೇಶ್ ಅವರ ಅಭಿಮಾನಿಗಳಿಗೆ ಒಂದು ಹೊಸ ಸುದ್ದಿ ಸಿಕ್ಕಿದೆ. ಟಾಲಿವುಡ್​ನ ಪ್ರತಿಷ್ಠಿತ ಪ್ರೊಡಕ್ಷನ್​ ಹೌಸ್​ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಜತೆಗೆ ಗಣೇಶ್‌ ಹೊಸ ಸಿನಿಮಾ ಮಾಡಲಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ.

‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆ ಬಂಡವಾಳ ಹೂಡಲಿರುವ #PMF49 ಚಿತ್ರದಲ್ಲಿ ಗಣೇಶ್‌ ಅಭಿನಯಿಸಲಿದ್ದಾರೆ. ಈ ಸಿನಿಮಾದ ಮೂಲಕ ‘ಪೀಪಲ್‌ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಕನ್ನಡದಲ್ಲಿಯೂ ದೊಡ್ಡ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ. ‘ಕಾರ್ತಿಕೇಯ 2’, ‘ವೆಂಕಿ ಮಾಮ’, ‘ಓ ಬೇಬಿ’, ‘ಧಮಾಕಾ’ ಮುಂತಾದ ಸೂಪರ್​ ಹಿಟ್ ಸಿನಿಮಾಗಳನ್ನು ಈ ಸಂಸ್ಥೆ ನೀಡಿದೆ.

ತೆಲುಗು ಚಿತ್ರೋದ್ಯಮಕ್ಕೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಸಂಸ್ಥೆಯು ಅಪಾರ ಕೊಡುಗೆ ನೀಡಿದೆ. ಈಗ ಗಣೇಶ್​ ನಟನೆಯ ಸಿನಿಮಾದ ಮೂಲಕ ಸ್ಯಾಂಡಲ್​ವುಡ್​ನಲ್ಲೂ ಈ ಸಂಸ್ಥೆ ಅದ್ದೂರಿ ಸಿನಿಮಾವನ್ನು ನಿರ್ಮಿಸಲು ಬಂದಿದೆ. ಕನ್ನಡದ ಚಿತ್ರರಂಗದ ಸಾಮರ್ಥ್ಯವನ್ನು ಇನ್ನಷ್ಟು ಹಿರಿದಾಗಿಸುವ ಧ್ಯೇಯದೊಂದಿಗೆ, ಟಿಜಿ ವಿಶ್ವ ಪ್ರಸಾದ್ ನೇತೃತ್ವದ ಈ ಸಂಸ್ಥೆಯು ಒಳ್ಳೆಯ ಕಥೆ ಹಾಗೂ ಅತ್ಯಾಧುನಿಕ ಗುಣಮುಟ್ಟದ ನಿರ್ಮಾಣದ ಮೂಲಕ ಸ್ಯಾಂಡಲ್​ವುಡ್​ಗೆ ಪ್ರವೇಶಿಸುತ್ತಿದೆ.

ಇದನ್ನೂ ಓದಿ: Krishnam Pranaya Sakhi Review: ಫ್ಯಾಮಿಲಿ ಪ್ರೇಕ್ಷಕರಿಗೊಂದು ಟಿಪಿಕಲ್​ ಗಣೇಶ್​ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’

ಪ್ರಸಿದ್ಧ ಡ್ಯಾನ್ಸ್ ಕೊರಿಯೋಗ್ರಾಫರ್​ ಧನಂಜಯ್‌ ಅವರು ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. ಈ ಮೂಲಕ ಅವರು ದೊಡ್ಡ ಪ್ರಾಜೆಕ್ಟ್‌ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಟಿಜಿ ವಿಶ್ವ ಪ್ರಸಾದ್ ನಿರ್ಮಾಣದ ಈ ಸಿನಿಮಾ ಅದ್ದೂರಿಯಾಗಿ ನಿರ್ಮಾಣ ಆಗಲಿದೆ. ಈ ಸಿನಿಮಾದ ಶೀರ್ಷಿಕೆ ಏನು? ಪಾತ್ರವರ್ಗದಲ್ಲಿ ಗಣೇಶ್ ಜೊತೆ ಯಾರೆಲ್ಲ ಇರಲಿದ್ದಾರೆ ಮುಂದಿನ ದಿನಗಳಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು