AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್​ ಕಟ್ಟಡ ನಿರ್ಮಾಣ ವಿವಾದ: ಹೈಕೋರ್ಟ್​ನಲ್ಲಿ ವಿಚಾರಣೆ

ನಾಲ್ಕು ವಾರದಲ್ಲಿ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅರಣ್ಯ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಗಣೇಶ್ ಅವರಿಗೆ ಸಂಪೂರ್ಣ ರಿಲೀಫ್ ಸಿಗದಿದ್ದರೂ ಈಗ ಮತ್ತೆ ವಿವಾದ ಅರಣ್ಯ ಇಲಾಖೆಗೆ ವರ್ಗಾವಣೆಯಾಗಿದೆ. ಅರಣ್ಯ ಇಲಾಖೆ ಗಣೇಶ್ ಅಹವಾಲನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ.

ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್​ ಕಟ್ಟಡ ನಿರ್ಮಾಣ ವಿವಾದ: ಹೈಕೋರ್ಟ್​ನಲ್ಲಿ ವಿಚಾರಣೆ
ನಟ ಗಣೇಶ್
ರಮೇಶ್​ ಎಮ್​.
| Edited By: |

Updated on: Aug 21, 2023 | 2:29 PM

Share

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿರುವ ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್ (Golden Star Ganesh) ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟೀಸ್​ಗೆ ತಡೆಯಾಜ್ಞೆ ನೀಡುವಂತೆ ಗಣೇಶ್​ (Actor Ganesh) ಮನವಿ ಮಾಡಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಹಂಗಾಳ ಹೋಬಳಿಯ ಜಕ್ಕಳ್ಳಿ ಗ್ರಾಮದಲ್ಲಿ ಗಣೇಶ್ ಅವರು ಕಟ್ಟಡ ನಿರ್ಮಿಸುತ್ತಿದ್ದಾರೆ. ಪರಿಸರ ಸೂಕ್ಷ್ಮ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಿಸಬಾರದು. ಹೀಗಾಗಿ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆಯು (Forest Department) ಗಣೇಶ್ ಅವರಿಗೆ ನೋಟೀಸ್​ ನೀಡಿತ್ತು. ಇದನ್ನು ಪ್ರಶ್ನಿಸಿ ಗಣೇಶ್ ಪರ ಹಿರಿಯ ವಕೀಲ ಸಿ.ಕೆ. ನಂದಕುಮಾರ್ ಅವರು ಹೈಕೋರ್ಟ್​ನಲ್ಲಿ ವಾದ ಮಂಡಿಸಿದ್ದಾರೆ.

ವಕೀಲರ ವಾದವೇನು?

‘ನಟ ಗಣೇಶ್ ಅವರು ಅರಣ್ಯ ಪ್ರದೇಶದಲ್ಲಿ ಯಾವುದೇ ಕಟ್ಟಡ ನಿರ್ಮಿಸುತ್ತಿಲ್ಲ. 10 ಕಿಲೋ ಮೀಟರ್ ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಿಸಬಾರದೆಂಬ ಸುಪ್ರೀಂ ಕೋರ್ಟ್ ತೀರ್ಪು ಈಗ ಮಾರ್ಪಾಟಾಗಿದೆ. ಕೇವಲ ಭೂಮಿ ಸಮತಟ್ಟು ಮಾಡಿ ಸ್ಥಳಾಂತರಿಸಬಹುದಾದ ಸ್ಟೀಲ್ ಕಟ್ಟಡವನ್ನಷ್ಟೇ ನಿರ್ಮಿಸಲಾಗುತ್ತಿದೆ. ಹೀಗಾಗಿ ಅರಣ್ಯ ಇಲಾಖೆ ನೋಟೀಸ್​ಗೆ ತಡೆಯಾಜ್ಞೆ ನೀಡಬೇಕು’ ಎಂದು ಗಣೇಶ್ ಪರ ವಕೀಲರು ಮನವಿ ಮಾಡಿದರು.

Golden Star Ganesh: ಪ್ಯಾನ್​ ಇಂಡಿಯಾ ಸಿನಿಮಾ ಮಾಡಲು ಸಜ್ಜಾದ ಗಣೇಶ್​; ಈ ಚಿತ್ರಕ್ಕೆ ವಿಖ್ಯಾತ್​ ಬಂಡವಾಳ

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠವು ಗಣೇಶ್ ಸಲ್ಲಿಸಿದ್ದ ಕಾಮಗಾರಿಯ ಫೋಟೋಗಳನ್ನು ಪರಿಶೀಲಿಸಿದೆ. ‘ಕಾಂಕ್ರಿಟ್ ತಳಪಾಯದ ಕಟ್ಟಡದ ಕಾಮಗಾರಿ ನಡೆಸಲಾಗುತ್ತಿದೆ. ಶಾಶ್ವತ ಕಟ್ಟಡಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲವೆಂದು’ ಮೌಖಿಕವಾಗಿ ಕೋರ್ಟ್​ ಅಭಿಪ್ರಾಯಪಟ್ಟಿದೆ. ಅರಣ್ಯ ಇಲಾಖೆ ನೀಡಿರುವ ನೋಟೀಸ್​ಗೆ 1 ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ನಟ ಗಣೇಶ್​ಗೆ ಸೂಚಿಸಿದೆ.

ಗಣೇಶ್ ಹೊಸ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಶೀರ್ಷಿಕೆ ಫೈನಲ್; ಬರ್ತ್​ಡೇಗೂ ಮೊದಲು ಸ್ಪೆಷಲ್ ಗಿಫ್ಟ್

ನಾಲ್ಕು ವಾರದಲ್ಲಿ ವಿಚಾರಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅರಣ್ಯ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಗಣೇಶ್ ಅವರಿಗೆ ಸಂಪೂರ್ಣ ರಿಲೀಫ್ ಸಿಗದಿದ್ದರೂ ಈಗ ಮತ್ತೆ ವಿವಾದ ಅರಣ್ಯ ಇಲಾಖೆಗೆ ವರ್ಗಾವಣೆಯಾಗಿದೆ. ಅರಣ್ಯ ಇಲಾಖೆ ಗಣೇಶ್ ಅಹವಾಲನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ