AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gaalipata 2: ಯೋಗರಾಜ್​ ಭಟ್​ ಲೇಖನಿಯಲ್ಲಿ ಮತ್ತೊಂದು ಎಣ್ಣೆ ಸಾಂಗ್​; ‘ಗಾಳಿಪಟ 2’ ಚಿತ್ರದಲ್ಲಿ ಹಿಟ್​ ಕಾಂಬಿನೇಷನ್​

Gaalipata 2 Songs: ‘ಗಾಳಿಪಟ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರೇಕ್ಷಕರೆಲ್ಲರೂ ಈಗ ‘ಗಾಳಿಪಟ 2’ ಚಿತ್ರಕ್ಕಾಗಿ ಕಾದಿದ್ದಾರೆ. ಹಾಡುಗಳ ಮೂಲಕ ಈ ಚಿತ್ರತಂಡ ಸದ್ದು ಮಾಡುತ್ತಿದೆ.

Gaalipata 2: ಯೋಗರಾಜ್​ ಭಟ್​ ಲೇಖನಿಯಲ್ಲಿ ಮತ್ತೊಂದು ಎಣ್ಣೆ ಸಾಂಗ್​; ‘ಗಾಳಿಪಟ 2’ ಚಿತ್ರದಲ್ಲಿ ಹಿಟ್​ ಕಾಂಬಿನೇಷನ್​
ಪವನ್​ ಕುಮಾರ್​, ಗಣೇಶ್​, ದಿಗಂತ್​
TV9 Web
| Edited By: |

Updated on: Jul 12, 2022 | 1:41 PM

Share

ನಿರ್ದೇಶಕ ಯೋಗರಾಜ್​ ಭಟ್​ ಅವರು ಬರೆದ ಹಾಡುಗಳಲ್ಲಿ ಏನೋ ಒಂದು ಬಗೆಯ ಕಿಕ್​ ಇರುತ್ತದೆ. ಪ್ರೇಮ ಕವಿತೆಯೇ ಆಗಿರಲಿ, ಐಟಂ ಸಾಂಗ್​ ಆಗಿರಲಿ.. ಅವುಗಳಲ್ಲಿ ಯೋಗರಾಜ್​ ಭಟ್​ (Yogaraj Bhat) ಅವರದ್ದೇ ಒಂದು ಶೈಲಿ ಇರುತ್ತದೆ. ಇನ್ನು, ಎಣ್ಣೆ ಸಾಂಗ್​ ಬರೆಯೋದರಲ್ಲಿ ಅವರು ಸಿಕ್ಕಾಪಟ್ಟೆ ಫೇಮಸ್​. ‘ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು..’ ಹಾಗೂ ‘ನಾವ್​ ಮನೇಗ್​ ಹೋಗೋದಿಲ್ಲ..’ ಹಾಡುಗಳ ಮೂಲಕ ಅವರ ಭರ್ಜರಿ ಮನರಂಜನೆ ನೀಡಿದ್ದರು. ಈಗ ಅವರ ಲೇಖನಿಯಿಂದ ಮತ್ತೊಂದು ಎಣ್ಣೆ ಸಾಂಗ್​ ಹೊರಬರುತ್ತಿದೆ. ಹೌದು, ‘ಗಾಳಿಪಟ 2’ (Gaalipata 2) ಸಿನಿಮಾದಲ್ಲಿ ಇಂಥದ್ದೊಂದು ಹಾಡು ಇರಲಿದ್ದು, ಅದು ಜುಲೈ 14ರಂದು ಬಿಡುಗಡೆ ಆಗಲಿದೆ. ಆ ಮೂಲಕ ‘ಗೋಲ್ಡನ್​ ಸ್ಟಾರ್​’ ಗಣೇಶ್​ (Golden Star Ganesh) ಅಭಿಮಾನಿಗಳಿಗೆ ಸ್ಪೆಷಲ್​ ಟ್ರೀಟ್​ ಸಿಗಲಿದೆ.

‘ಗಾಳಿಪಟ 2’ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ರಿಲೀಸ್​ ಆಗಿರುವ ‘ಎಕ್ಸಾಂ ಸಾಂಗ್​’ ಹಾಗೂ ‘ನಾನಾಡದ ಮಾತೆಲ್ಲವ..’ ಹಾಡುಗಳು ಸಖತ್​ ಹಿಟ್​ ಆಗಿವೆ. ಈಗ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗುತ್ತಿದೆ. ಆ ಗೀತೆಗೆ ವಿಜಯ್​ ಪ್ರಕಾಶ್​ ಧ್ವನಿ ನೀಡಿದ್ದಾರೆ. ಯೋಗರಾಜ್​ ಭಟ್​ ಸಾಹಿತ್ಯ, ಅರ್ಜುನ್​ ಜನ್ಯ ಸಂಗೀತ, ವಿಜಯ್​ ಪ್ರಕಾಶ್​ ಗಾಯನ ಎಂದರೆ ಅದು ಸಖತ್​ ಕಾಂಬಿನೇಷನ್​. ‘ಗಾಳಿಪಟ 2’ ಚಿತ್ರದ ಎಣ್ಣೆ ಸಾಂಗ್​ನಲ್ಲಿ ಈ ಮೂವರು ಮತ್ತೆ ಒಂದಾಗಿದ್ದಾರೆ.

‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ದಿಗಂತ್, ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ವೈಭವಿ ಶಾಂಡಿಲ್ಯ, ಸಂಯುಕ್ತಾ ಮೆನನ್ ಮುಂತಾದವರು ನಟಿಸಿದ್ದಾರೆ. ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ. ರಮೇಶ್ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ. ಆನಂದ್​ ಆಡಿಯೋ ಮೂಲಕ ಸಾಂಗ್​ ಬಿಡುಗಡೆ ಆಗಲಿದೆ.

ಇದನ್ನೂ ಓದಿ
Image
‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​
Image
‘ಸಖತ್’​ ವೇದಿಕೆಯಲ್ಲಿ ಗಣೇಶ್​ ಕೋರಿಕೆ ಮೇರೆಗೆ ‘ಎಕ್ಸ್​ಕ್ಯೂಸ್​ಮೀ’ ಹಾಡು ಹೇಳಿದ ಪ್ರೇಮ್
Image
‘ಚಿತ್ರರಂಗ ಇರುವವರೆಗೂ ಪವರ್​ ಸ್ಟಾರ್​ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್​ ಅಭಿಮಾನದ ಮಾತು
Image
‘ಲಕ್ಷಣ’ ಧಾರಾವಾಹಿಗೆ ಡಬಲ್​ ಸಂಭ್ರಮ; ನಟ ಗಣೇಶ್​ಗೆ ಧನ್ಯವಾದ ತಿಳಿಸಿದ ಜಗನ್​

‘ಗಾಳಿಪಟ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರೇಕ್ಷಕರೆಲ್ಲರೂ ಈಗ ‘ಗಾಳಿಪಟ 2’ ಚಿತ್ರಕ್ಕಾಗಿ ಕಾದಿದ್ದಾರೆ. ಆಗಸ್ಟ್​ 12ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಗಣೇಶ್​ ಮತ್ತು ಯೋಗರಾಜ್​ ಭಟ್​ ಕಾಂಬಿನೇಷನ್​ ಇಷ್ಟಪಡುವ ಎಲ್ಲರೂ ಈ ಚಿತ್ರದ ಮೇಲೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿ ಯೋಗರಾಜ್​ ಭಟ್​ ಅವರು ಯಾವ ಕಥೆಯನ್ನು ತೆರೆಗೆ ತಂದಿದ್ದಾರೆ ಎಂದು ನೋಡಲು ಅಭಿಮಾನಿಗಳಲ್ಲಿ ಕಾತರ ಮೂಡಿದೆ.

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ