AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 12 ದಿನಗಳಲ್ಲಿ ಗಳಿಸಿದ ಹಣ ಎಷ್ಟು? ಗೆದ್ದ ಗಣೇಶ್

Krishnam Pranaya Sakhi Box Office Collection: ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂಬ ಪ್ರಶ್ನೆ ಅಭಿಮಾನಿಗಳಿಗೆ ಮೂಡಿತ್ತು. ಕೊನೆಗೂ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಈ ಸಿನಿಮಾದ ಲೆಕ್ಕದ ಬಗ್ಗೆ sacnilk ವರದಿ ಮಾಡಿದೆ.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 12 ದಿನಗಳಲ್ಲಿ ಗಳಿಸಿದ ಹಣ ಎಷ್ಟು? ಗೆದ್ದ ಗಣೇಶ್
‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 12 ದಿನಗಳಲ್ಲಿ ಗಳಿಸಿದ ಹಣ ಎಷ್ಟು? ಗೆದ್ದ ಗಣೇಶ್
ರಾಜೇಶ್ ದುಗ್ಗುಮನೆ
| Edited By: |

Updated on:Aug 27, 2024 | 9:33 AM

Share

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್ ಹಿಟ್ ಆಗಿದೆ. ಗಣೇಶ್, ಮಾಳವಿಕಾ ನಾಯರ್, ಶರಣ್ಯಾ ಶೆಟ್ಟಿ, ಅವಿನಾಶ್, ಸಾಧು ಕೋಕಿಲ, ರಂಗಾಯಣ ರಘು, ಶ್ರೀನವಾಸ ಮೂರ್ತಿ, ಗಿರಿ ಶಿವಣ್ಣ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಆಗಸ್ಟ್ 15ರಂದು ರಿಲೀಸ್ ಆಯಿತು. ಈ ಸಿನಿಮಾ 12 ದಿನಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡಿ ಬೀಗಿದೆ. ಈ ಚಿತ್ರದಿಂದ ನಿರ್ಮಾಪಕರು ಲಾಭ ಕಂಡಿದ್ದಾರೆ.

‘ಕೃಷ್ಣಂ ಪ್ರಣಯ ಸಖಿ’ 12 ದಿನಗಳಲ್ಲಿ 12.74 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು sacnilk ವರದಿ ಮಾಡಿದೆ. ಈ ವಿಚಾರ ಕೇಳಿ ಗಣೇಶ್ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಚಿತ್ರ ವೀಕೆಂಡ್​ನಲ್ಲಿ ಎಲ್ಲ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ ಅನ್ನೋದು ವಿಶೇಷ. ಈ ಚಿತ್ರದಿಂದ ಗಣೇಶ್ ಅವರು ಗೆದ್ದು ಬೀಗಿದ್ದಾರೆ. ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಇತ್ತು. ಹೀಗಾಗಿ, ಮೊದಲ ದಿನವೇ ಸರ್ಕಾರಿ ರಜೆ ಇದ್ದಿದ್ದರಿಂದ ಚಿತ್ರಕ್ಕೆ ಒಳ್ಳೆಯ ಓಪನಿಂಗ್ ಸಿಕ್ಕಿತು. ಬಾಯಿಮಾತಿನ ಪ್ರಚಾರವೂ ಚಿತ್ರಕ್ಕೆ ಸಿಕ್ಕಿದೆ.

ಗಣೇಶ್ ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಕ್ಕಿರಲಿಲ್ಲ. ಈ ಕಾರಣಕ್ಕೆ ಅವರಿಗೆ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಮೂಲಕ ಗೆಲ್ಲಲೇ ಬೇಕಾದ ಅನಿವಾರ್ಯತೆ ಇತ್ತು. ಕೊನೆಗೂ ಸಿನಿಮಾ ಗೆಲುವು ಕಂಡಿದೆ. ವಾರದ ದಿನಗಳಲ್ಲಿ ಸಾಧಾರಣ ಗಳಿಕೆ ಮಾಡುತ್ತಿರುವ ಈ ಸಿನಿಮಾ, ವೀಕೆಂಡ್​ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ವಾರವೂ ಉತ್ತಮ ಗಳಿಕೆ ಆಗೋ ನಿರೀಕ್ಷೆ ಇದೆ.

ಇದನ್ನೂ ಓದಿ: ‘ಕೃಷ್ಣಂ ಪ್ರಣಯ ಸಖಿ’ ನೋಡಲು ಹೋಗಿ ಶರಣ್ಯ ಗ್ಲಾಮರ್​ಗೆ ಮರುಳಾದ ಪ್ರೇಕ್ಷಕರು

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದಲ್ಲಿ ಕಾಮಿಡಿ ಹೈಲೈಟ್ ಆಗಿದೆ. ಕಥೆ ಹಳೆಯದೇ ಆದರೂ ಅದನ್ನು ಹೇಳಿರುವ ರೀತಿ ಬೇರೆ ರೀತಿಯಲ್ಲಿದೆ. ಕಾಮಿಡಿಯಲ್ಲೂ ಹೊಸತನ ಕೂಡಿರುವುದರಿಂದ ಫ್ಯಾನ್ಸ್ ಚಿತ್ರವನ್ನು ಇಷ್ಟಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:30 am, Tue, 27 August 24

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ