Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಖತ್’​ ಸಿನಿಮಾ ಫಸ್ಟ್​ ಹಾಫ್​ ರಿಪೋರ್ಟ್​; ಗಣೇಶ್​-ಸುನಿ ಚಿತ್ರದ ಮೊದಲಾರ್ಧದಲ್ಲಿ ಏನುಂಟು, ಏನಿಲ್ಲ?

Sakath Movie Review: ‘ಗೋಲ್ಡನ್​ ಸ್ಟಾರ್​’ ಗಣೇಶ್​ ಮತ್ತು ನಿರ್ದೇಶಕ ಸಿಂಪಲ್​ ಸುನಿ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಸಖತ್​’ ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರನ್ನು ರಂಜಿಸುತ್ತಿದೆ. ಈ ಚಿತ್ರದ ಫಸ್ಟ್​ ಹಾಫ್​ ಹೇಗಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ..

‘ಸಖತ್’​ ಸಿನಿಮಾ ಫಸ್ಟ್​ ಹಾಫ್​ ರಿಪೋರ್ಟ್​; ಗಣೇಶ್​-ಸುನಿ ಚಿತ್ರದ ಮೊದಲಾರ್ಧದಲ್ಲಿ ಏನುಂಟು, ಏನಿಲ್ಲ?
‘ಗೋಲ್ಡನ್​ ಸ್ಟಾರ್​’ ಗಣೇಶ್​
Follow us
TV9 Web
| Updated By: ಮದನ್​ ಕುಮಾರ್​

Updated on: Nov 26, 2021 | 12:00 PM

ಇದೇ ಮೊದಲ ಬಾರಿಗೆ ನಟ ಗಣೇಶ್ (Golden Star Ganesh)​ ಅವರು ‘ಸಖತ್​’ (Sakath Kannada Movie) ಸಿನಿಮಾದಲ್ಲಿ ಅಂಧನ ಪಾತ್ರ ಮಾಡಿದ್ದಾರೆ. ಸಿಂಪಲ್​ ಸುನಿ (Simple Suni) ನಿರ್ದೇಶನ ಮಾಡಿರುವ ಈ ಚಿತ್ರ ಇಂದು (ನ.26) ರಾಜ್ಯಾದ್ಯಂತ ಬಿಡುಗಡೆ ಆಗಿದೆ. ಗಣೇಶ್​ಗೆ ನಾಯಕಿಯರಾಗಿ ನಿಶ್ವಿಕಾ ನಾಯ್ಡು ಮತ್ತು ಸುರಭಿ ಪುರಾಣಿಕ್​ ನಟಿಸಿದ್ದಾರೆ. ಚಿತ್ರದ ಹಾಡುಗಳಿಗೆ ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕಾಮಿಡಿ ನಟರಾದ ಸಾಧುಕೋಕಿಲ, ಧರ್ಮಣ್ಣ, ಕುರಿ ಪ್ರತಾಪ್​ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಹಾಸ್ಯದ ನಿರೂಪಣೆಯಲ್ಲಿ ಸಿನಿಮಾ ಮೂಡಿಬಂದಿದ್ದು, ಮೊದಲಾರ್ಧದಲ್ಲಿ ಪ್ರೇಕ್ಷಕರಿಗೆ ಇಷ್ಟ ಆಗುವಂತಹ ಅನೇಕ ಅಂಶಗಳಿವೆ. ಹಾಸ್ಯಕ್ಕೆ ಹೆಚ್ಚು ಮಹತ್ವ ನೀಡಲಾಗಿದೆ.

  • ಹೀರೋ ಪಾತ್ರದ ಇಂಟ್ರಡಕ್ಷನ್​ನಿಂದ ಮಧ್ಯಂತರದವರೆಗೂ ಸಿನಿಮಾದಲ್ಲಿ ಸಖತ್​ ಕಾಮಿಡಿ ಇದೆ. ಗಣೇಶ್​,  ಸಾಧುಕೋಕಿಲ, ಕುರಿ ಪ್ರತಾಪ್​ ಮತ್ತು ಧರ್ಮಣ್ಣ ಅವರು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತಾರೆ.
  • ಮೊದಲಾರ್ಧದಲ್ಲಿ ರಿಯಾಲಿಟಿ ಶೋ ಮತ್ತು ಸೋಶಿಯಲ್​ ಮೀಡಿಯಾ ಬಗ್ಗೆ ಅನೇಕ ವಿಚಾರಗಳನ್ನು ಹೇಳಲಾಗಿದೆ. ಅದು ಪ್ರೇಕ್ಷಕರಿಗೆ ಹೆಚ್ಚು ಕನೆಕ್ಟ್​ ಆಗುತ್ತದೆ. ನಿರೂಪಣೆ ತುಂಬ ಫನ್​ ಆಗಿ ಮೂಡಿಬಂದಿದೆ.
  • ಕುರುಡನ ರೀತಿ ನಟಿಸುವ ವ್ಯಕ್ತಿಯ ಪಾತ್ರದಲ್ಲಿ ಗಣೇಶ್​ ಕಾಣಿಸಿಕೊಂಡಿದ್ದಾರೆ. ಕಥಾನಾಯಕ ಆ ರೀತಿ ವರ್ತಿಸಲು ಕೂಡ ಒಂದು ಕಾರಣ ಇದೆ. ಆ ಕಾರಣ ಏನೆಂಬುದನ್ನು ಚಿತ್ರಮಂದಿರದಲ್ಲಿ ನೋಡಿ ತಿಳಿದರೆ ಉತ್ತಮ.
  • ಮಧ್ಯಂತರದ ವೇಳೆಗೆ ಒಂದು ಟ್ವಿಸ್ಟ್​ ನೀಡಲಾಗಿದೆ. ಆ ಮೂಲಕ ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿ, ದ್ವಿತೀಯಾರ್ಧಕ್ಕಾಗಿ ಕಾಯುವಂತೆ ಮಾಡಿದ್ದಾರೆ ನಿರ್ದೇಶಕ ಸುನಿ.
  • ಮೊದಲಾರ್ಧದಲ್ಲಿ ಮೂರು ಹಾಡುಗಳಿವೆ. ಆದರೆ ಯಾವುದೇ ಫೈಟಿಂಗ್​ ದೃಶ್ಯಗಳಿಲ್ಲ. ಕಾಮಿಡಿ ಸನ್ನಿವೇಶಗಳು ಅತ್ಯುತ್ತಮವಾಗಿ ಮೂಡಿಬಂದಿವೆ. ಡೈಲಾಗ್​ಗಳು ತುಂಬ ಆಕರ್ಷಿಸುತ್ತವೆ.
  • ಗಣೇಶ್ ಅವರ ಅಭಿನಯ ಮೆಚ್ಚುವಂತಿದೆ. ಹಲವು ದೃಶ್ಯಗಳಲ್ಲಿ ಅವರ ನಟನೆಗೆ ಪ್ರೇಕ್ಷಕರಿಂದ ಶಿಳ್ಳೆ, ಚಪ್ಪಾಳೆ ಸಿಗುತ್ತದೆ. ‘ಗೋಲ್ಡನ್​ ಸ್ಟಾರ್​’ ಅಭಿಮಾನಿಗಳಿಗೆ ಈ ಸಿನಿಮಾ ಹೆಚ್ಚು ಇಷ್ಟ ಆಗುತ್ತದೆ.

ಇದನ್ನೂ ಓದಿ:

ಬಾಕ್ಸ್​ ಆಫೀಸ್​ನಲ್ಲಿ ಸ್ಟಾರ್​ ಸಿನಿಮಾಗಳ ಪೈಪೋಟಿ; ಈ ವಾರ ಬಾಲಿವುಡ್​ ಮಂದಿ ಎದುರು ‘ಸಖತ್​’​ ಮುಖಾಮುಖಿ

‘ಸಖತ್​’ ಜತೆ ತೆರೆಕಂಡ ‘ಗೋರಿ’; ಉತ್ತರ ಕರ್ನಾಟಕ ಪ್ರತಿಭೆಗಳ ಕನಸಿನ ಕಿರಣ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು