AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sakath: ಸಖತ್ ಟೈಟಲ್​ ಟ್ರ್ಯಾಕ್​ ರಿಲೀಸ್; ಗಣೇಶ್ ಮಸ್ತ್ ಸ್ಟೈಲ್​ಗೆ ಫ್ಯಾನ್ಸ್ ಫಿದಾ

Golden Star Ganesh: ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಚಿತ್ರದ ಟೈಟಲ್ ಸಾಂಗ್ ರಿಲೀಸ್ ಆಗಿದೆ. ಇದರಲ್ಲಿನ ಗಣೇಶ್ ಲುಕ್​ಗೆ ಅಭಿಮಾನಿಗಳು ಮನಸೋತಿದ್ದಾರೆ.

Sakath: ಸಖತ್ ಟೈಟಲ್​ ಟ್ರ್ಯಾಕ್​ ರಿಲೀಸ್; ಗಣೇಶ್ ಮಸ್ತ್ ಸ್ಟೈಲ್​ಗೆ ಫ್ಯಾನ್ಸ್ ಫಿದಾ
‘ಸಖತ್’ ಚಿತ್ರದಲ್ಲಿ ಗಣೇಶ್
TV9 Web
| Edited By: |

Updated on: Nov 14, 2021 | 3:24 PM

Share

ಗೋಲ್ಡನ್‌ ಸ್ಟಾರ್ ಗಣೇಶ್ (Ganesh) ಹಾಗೂ‌ ಸಿಂಪಲ್ ಸುನಿ‌ (simple Suni) ಕಾಂಬಿನೇಷನ್ ನಲ್ಲಿ‌ ಮೂಡಿಬರುತ್ತಿರುವ ‘ಸಖತ್’ (Sakath) ಚಿತ್ರ ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೀಗ ಚಿತ್ರತಂಡ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ್ದು, ಗಣೇಶ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಅದ್ದೂರಿ ಮೇಕಿಂಗ್ ಹಾಗೂ ಸಂಗೀತದಿಂದ ಹಾಡು ಮನಮುಟ್ಟುವಂತಿದೆ. ಹಾಡಿನಲ್ಲಿ ಆರ್​ಸಿಬಿ ಸೇರಿದಂತೆ ಕನ್ನಡಿಗರ ನೆಚ್ಚಿನ ವಿಚಾರಗಳ ಉಲ್ಲೇಖ ಇದ್ದು, ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಹಾಡಿಗೆ ಸುನಿ ಹಾಗೂ ಎಸ್​.ಐ.ಡಿ ರ್ಯಾಪರ್ ಸಾಹಿತ್ಯ ರಚಿಸಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಸಖತ್ ಚಿತ್ರವು ನವೆಂಬರ್ 26ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ.

‘ಸಖತ್’ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ನಿಶಾ ವೆಂಕಟ್ ಕೋಣಂಕಿ ಮತ್ತು ಸುಪ್ರಿತ್ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಎರಡು ಹಾಡುಗಳು ರಿಲೀಸ್ ಆಗಿದ್ದು, ಟೀಸರ್ ರಿಲೀಸ್ ಆಗಿದೆ. ನಿರ್ದೇಶ ಸಿಂಪಲ್ ಸುನಿ 2019ರಲ್ಲಿ ತೆರೆಕಂಡ ‘ಬಜಾರ್’ ಚಿತ್ರದ ನಂತರ ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡಿಲ್ಲ. ಆದ್ದರಿಂದಲೇ ಈ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಿದೆ.

ಸಖತ್ ಟೀಸರ್ ಇಲ್ಲಿದೆ:

ಸಖತ್ ಚಿತ್ರದಲ್ಲಿ ಗಣೇಶ್​ಗೆ ಜೊತೆಯಲ್ಲಿ ಸುರಭಿ ಪುರಾಣಿಕ್, ನಿಶ್ವಿಕಾ ನಾಯ್ಡು ಮೊದಲಾದವರು ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದ್ದು, ಶಾಂತು ಕುಮಾರ್ ಸಂಕಲನ ಮಾಡಿದ್ದಾರೆ. ದೀರ್ಘಕಾಲದ ನಂತರ ಗಣೇಶ್ ಬೆಳ್ಳಿ ತೆರೆಯ ಮೇಲೆ ಬರುತ್ತಿದ್ದು, ಅವರನ್ನು ಸ್ವಾಗತಿಸಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಇದನ್ನೂ ಓದಿ:

Sakath: ಮೋಡಿ ಮಾಡುವಂತಿದೆ ಗಣೇಶ್- ನಿಶ್ವಿಕಾ ಅಭಿನಯದ ‘ಸಖತ್’ ಚಿತ್ರದ ಹಾಡು; ವಿಡಿಯೋ ಸಾಂಗ್ ಇಲ್ಲಿದೆ

ಸಖತ್​ ಆಗಿದೆ ‘ಸಖತ್’ ಟೀಸರ್​; ಪ್ರೇಕ್ಷಕರ ತಲೆಗೆ ಕುತೂಹಲದ ಹುಳ ಬಿಟ್ಟ ಗಣೇಶ್​, ಸಿಂಪಲ್​ ಸುನಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ