AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?

ಈ ಹಿಂದೆ ನಿರ್ದೇಶಕ ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದೆ ‘ಚಮಕ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈಗ ಎರಡನೇ ಬಾರಿಗೆ ಅವರಿಬ್ಬರು ‘ಸಖತ್’ ಚಿತ್ರದಲ್ಲಿ ಒಂದಾಗಿದ್ದಾರೆ. ಈ ಸಿನಿಮಾದಲ್ಲಿ ಗಣೇಶ್​​ಗೆ ವಿಶೇಷ ಪಾತ್ರವಿದೆ.

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?
ಸಖತ್​ ಸಿನಿಮಾದಲ್ಲಿ ಗಣೇಶ್​
ಮದನ್​ ಕುಮಾರ್​
| Updated By: ಆಯೇಷಾ ಬಾನು|

Updated on: Mar 23, 2021 | 7:55 AM

Share

‘ಚೆಲ್ಲಾಟ’ ಸಿನಿಮಾದಿಂದ ನಾಯಕನಾದ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ಈವರೆಗೂ ಹಲವಾರು ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ಕಂಡಿದ್ದಾರೆ. ನಾನಾ ವೇಷದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಮತ್ತೊಂದು ಗೆಟಪ್​ನಲ್ಲಿ ಜನರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ವಿಶೇಷ ಏನೆಂದರೆ, ಈ ಬಾರಿ ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ ಅವರದ್ದು.

ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಸಖತ್​’ ಈಗಾಗಲೇ ಒಂದು ಪೋಸ್ಟರ್​ ಬಿಡುಗಡೆ ಮಾಡಿತ್ತು. ಅದರಲ್ಲಿ ಗಾಯಕನ ಗೆಟಪ್​ನಿಂದ ಗಣೇಶ್​ ಗಮನ ಸೆಳೆದಿದ್ದರು. ಆದರೆ ಈಗ ಹೊರಬಂದಿರುವ ಹೊಸ ಫೋಟೋಗಳಲ್ಲಿ ಗಣೇಶ್​ ಅಂಧನಾಗಿ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ ಲವರ್ ಬಾಯ್​ ಆಗಿ, ಸದಾ ಸ್ಟೈಲಿಶ್​ ಲುಕ್​ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಗಣೇಶ್​ ಅವರಿಗೆ ಈ ಸಿನಿಮಾದಲ್ಲಿ ನಿರ್ದೇಶಕ ಸುನಿ ಸಂಪೂರ್ಣ ಡಿಫರೆಂಟ್​ ಪಾತ್ರ ನೀಡಿದಂತಿದೆ.

ಇಂಥ ಪಾತ್ರ ಮಾಡುತ್ತಿರುವುದಕ್ಕೆ ಸ್ವತಃ ಗಣೇಶ್​ ತುಂಬ ಎಗ್ಸೈಟ್​ ಆಗಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ‘ನಾಯಕನಾಗಿ 15 ವರ್ಷಗಳಿಂದ ನಿಮ್ಮ ನೋಟಗಳಿಗೆ ಸೆರೆಯಾಗಿದ್ದೇನೆ. ಮೊದಲ ಬಾರಿಗೆ ನನ್ನ ನೋಟವನು ಕಟ್ಟಿಟ್ಟು ಕಾಣಿಸಿಕೊಳ್ಳುತ್ತಿದ್ದೇನೆ. ಮುಚ್ಚಿಟ್ಟ ಕಣ್ಗಳಿಗೆ, ಬಿಚ್ಚಿಟ್ಟ ಪ್ರೀತಿಯ ಬೆಳಕು ಚೆಲ್ಲಿ ಹಾರೈಸಿ’ ಎಂದು ಗಣೇಶ್​ ಟ್ವೀಟ್​ ಮಾಡಿದ್ದಾರೆ.

ಈ ಫೋಟೋಗಳನ್ನು ನೋಡಿದ ಬಳಿಕ ಗಣೇಶ್​ ಅಭಿಮಾನಿಗಳು ‘ಸಖತ್​’ ಸಿನಿಮಾ ಮೇಲೆ ಇಟ್ಟುಕೊಂಡಿದ್ದ ನಿರೀಕ್ಷೆ ಡಬಲ್​ ಆಗಿದೆ. ಈ ಚಿತ್ರಕ್ಕೆ ಮಾ.22ರಿಂದ ಶೂಟಿಂಗ್​ ಆರಂಭ ಆಗಿದೆ. ಗಣೇಶ್​ಗೆ ಜೋಡಿಯಾಗಿ ನಟಿ ನಿಶ್ವಿಕಾ ನಾಯ್ಡು ಅಭಿನಯಿಸುತ್ತಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಹಾಸ್ಯ ನಟ ಧರ್ಮಣ್ಣ ಕಾಣಿಸಿಕೊಳ್ಳಲಿದ್ದಾರೆ. ಅವರ ಫಸ್ಟ್​ಲುಕ್​ ಪೋಸ್ಟರ್​ ಕೂಡ ಈಗಾಗಲೇ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಈ ಹಿಂದೆ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ ‘ಚಮಕ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಆ ಕಾರಣದಿಂದಲೂ ಈ ಕಾಂಬಿನೇಷನ್​ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಇದಲ್ಲದೆ, ಯೋಗರಾಜ್​ ಭಟ್​ ನಿರ್ದೇಶನದ ‘ಗಾಳಿಪಟ 2’, ‘ತ್ರಿಬಲ್​ ರೈಡಿಂಗ್’​ ಮುಂತಾದ ಕೆಲಸಗಳಲ್ಲೂ ಗಣೇಶ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!