AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?

ಈ ಹಿಂದೆ ನಿರ್ದೇಶಕ ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದೆ ‘ಚಮಕ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈಗ ಎರಡನೇ ಬಾರಿಗೆ ಅವರಿಬ್ಬರು ‘ಸಖತ್’ ಚಿತ್ರದಲ್ಲಿ ಒಂದಾಗಿದ್ದಾರೆ. ಈ ಸಿನಿಮಾದಲ್ಲಿ ಗಣೇಶ್​​ಗೆ ವಿಶೇಷ ಪಾತ್ರವಿದೆ.

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?
ಸಖತ್​ ಸಿನಿಮಾದಲ್ಲಿ ಗಣೇಶ್​
ಮದನ್​ ಕುಮಾರ್​
| Edited By: |

Updated on: Mar 23, 2021 | 7:55 AM

Share

‘ಚೆಲ್ಲಾಟ’ ಸಿನಿಮಾದಿಂದ ನಾಯಕನಾದ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ಈವರೆಗೂ ಹಲವಾರು ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ಕಂಡಿದ್ದಾರೆ. ನಾನಾ ವೇಷದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಮತ್ತೊಂದು ಗೆಟಪ್​ನಲ್ಲಿ ಜನರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ವಿಶೇಷ ಏನೆಂದರೆ, ಈ ಬಾರಿ ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ ಅವರದ್ದು.

ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಸಖತ್​’ ಈಗಾಗಲೇ ಒಂದು ಪೋಸ್ಟರ್​ ಬಿಡುಗಡೆ ಮಾಡಿತ್ತು. ಅದರಲ್ಲಿ ಗಾಯಕನ ಗೆಟಪ್​ನಿಂದ ಗಣೇಶ್​ ಗಮನ ಸೆಳೆದಿದ್ದರು. ಆದರೆ ಈಗ ಹೊರಬಂದಿರುವ ಹೊಸ ಫೋಟೋಗಳಲ್ಲಿ ಗಣೇಶ್​ ಅಂಧನಾಗಿ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ ಲವರ್ ಬಾಯ್​ ಆಗಿ, ಸದಾ ಸ್ಟೈಲಿಶ್​ ಲುಕ್​ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಗಣೇಶ್​ ಅವರಿಗೆ ಈ ಸಿನಿಮಾದಲ್ಲಿ ನಿರ್ದೇಶಕ ಸುನಿ ಸಂಪೂರ್ಣ ಡಿಫರೆಂಟ್​ ಪಾತ್ರ ನೀಡಿದಂತಿದೆ.

ಇಂಥ ಪಾತ್ರ ಮಾಡುತ್ತಿರುವುದಕ್ಕೆ ಸ್ವತಃ ಗಣೇಶ್​ ತುಂಬ ಎಗ್ಸೈಟ್​ ಆಗಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ‘ನಾಯಕನಾಗಿ 15 ವರ್ಷಗಳಿಂದ ನಿಮ್ಮ ನೋಟಗಳಿಗೆ ಸೆರೆಯಾಗಿದ್ದೇನೆ. ಮೊದಲ ಬಾರಿಗೆ ನನ್ನ ನೋಟವನು ಕಟ್ಟಿಟ್ಟು ಕಾಣಿಸಿಕೊಳ್ಳುತ್ತಿದ್ದೇನೆ. ಮುಚ್ಚಿಟ್ಟ ಕಣ್ಗಳಿಗೆ, ಬಿಚ್ಚಿಟ್ಟ ಪ್ರೀತಿಯ ಬೆಳಕು ಚೆಲ್ಲಿ ಹಾರೈಸಿ’ ಎಂದು ಗಣೇಶ್​ ಟ್ವೀಟ್​ ಮಾಡಿದ್ದಾರೆ.

ಈ ಫೋಟೋಗಳನ್ನು ನೋಡಿದ ಬಳಿಕ ಗಣೇಶ್​ ಅಭಿಮಾನಿಗಳು ‘ಸಖತ್​’ ಸಿನಿಮಾ ಮೇಲೆ ಇಟ್ಟುಕೊಂಡಿದ್ದ ನಿರೀಕ್ಷೆ ಡಬಲ್​ ಆಗಿದೆ. ಈ ಚಿತ್ರಕ್ಕೆ ಮಾ.22ರಿಂದ ಶೂಟಿಂಗ್​ ಆರಂಭ ಆಗಿದೆ. ಗಣೇಶ್​ಗೆ ಜೋಡಿಯಾಗಿ ನಟಿ ನಿಶ್ವಿಕಾ ನಾಯ್ಡು ಅಭಿನಯಿಸುತ್ತಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಹಾಸ್ಯ ನಟ ಧರ್ಮಣ್ಣ ಕಾಣಿಸಿಕೊಳ್ಳಲಿದ್ದಾರೆ. ಅವರ ಫಸ್ಟ್​ಲುಕ್​ ಪೋಸ್ಟರ್​ ಕೂಡ ಈಗಾಗಲೇ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಈ ಹಿಂದೆ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ ‘ಚಮಕ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಆ ಕಾರಣದಿಂದಲೂ ಈ ಕಾಂಬಿನೇಷನ್​ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಇದಲ್ಲದೆ, ಯೋಗರಾಜ್​ ಭಟ್​ ನಿರ್ದೇಶನದ ‘ಗಾಳಿಪಟ 2’, ‘ತ್ರಿಬಲ್​ ರೈಡಿಂಗ್’​ ಮುಂತಾದ ಕೆಲಸಗಳಲ್ಲೂ ಗಣೇಶ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ