Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?

ಈ ಹಿಂದೆ ನಿರ್ದೇಶಕ ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದೆ ‘ಚಮಕ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈಗ ಎರಡನೇ ಬಾರಿಗೆ ಅವರಿಬ್ಬರು ‘ಸಖತ್’ ಚಿತ್ರದಲ್ಲಿ ಒಂದಾಗಿದ್ದಾರೆ. ಈ ಸಿನಿಮಾದಲ್ಲಿ ಗಣೇಶ್​​ಗೆ ವಿಶೇಷ ಪಾತ್ರವಿದೆ.

ಕಣ್ಣಿಲ್ಲದ ವ್ಯಕ್ತಿ ಪಾತ್ರದಲ್ಲಿ ಗೋಲ್ಡನ್​ ಸ್ಟಾರ್​ ಗಣೇಶ್​! ಯಾವ ಸಿನಿಮಾ? ಯಾರದ್ದು ನಿರ್ದೇಶನ?
ಸಖತ್​ ಸಿನಿಮಾದಲ್ಲಿ ಗಣೇಶ್​
Follow us
ಮದನ್​ ಕುಮಾರ್​
| Updated By: ಆಯೇಷಾ ಬಾನು

Updated on: Mar 23, 2021 | 7:55 AM

‘ಚೆಲ್ಲಾಟ’ ಸಿನಿಮಾದಿಂದ ನಾಯಕನಾದ ‘ಗೋಲ್ಡನ್​ ಸ್ಟಾರ್​’ ಗಣೇಶ್​ ಅವರು ಈವರೆಗೂ ಹಲವಾರು ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಅನೇಕ ಏಳು-ಬೀಳುಗಳನ್ನು ಅವರು ಕಂಡಿದ್ದಾರೆ. ನಾನಾ ವೇಷದಲ್ಲಿ ತಮ್ಮ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈಗ ಮತ್ತೊಂದು ಗೆಟಪ್​ನಲ್ಲಿ ಜನರ ಮುಂದೆ ಬರಲು ಸಜ್ಜಾಗುತ್ತಿದ್ದಾರೆ. ವಿಶೇಷ ಏನೆಂದರೆ, ಈ ಬಾರಿ ಕಣ್ಣು ಕಾಣದ ವ್ಯಕ್ತಿಯ ಪಾತ್ರದ ಮೂಲಕ ಮನರಂಜಿಸುವ ಪ್ರಯತ್ನ ಅವರದ್ದು.

ಸಿಂಪಲ್​ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಎರಡನೇ ಸಿನಿಮಾ ‘ಸಖತ್​’ ಈಗಾಗಲೇ ಒಂದು ಪೋಸ್ಟರ್​ ಬಿಡುಗಡೆ ಮಾಡಿತ್ತು. ಅದರಲ್ಲಿ ಗಾಯಕನ ಗೆಟಪ್​ನಿಂದ ಗಣೇಶ್​ ಗಮನ ಸೆಳೆದಿದ್ದರು. ಆದರೆ ಈಗ ಹೊರಬಂದಿರುವ ಹೊಸ ಫೋಟೋಗಳಲ್ಲಿ ಗಣೇಶ್​ ಅಂಧನಾಗಿ ಕಾಣಿಸಿಕೊಂಡಿದ್ದಾರೆ. ಇಷ್ಟು ದಿನ ಲವರ್ ಬಾಯ್​ ಆಗಿ, ಸದಾ ಸ್ಟೈಲಿಶ್​ ಲುಕ್​ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಗಣೇಶ್​ ಅವರಿಗೆ ಈ ಸಿನಿಮಾದಲ್ಲಿ ನಿರ್ದೇಶಕ ಸುನಿ ಸಂಪೂರ್ಣ ಡಿಫರೆಂಟ್​ ಪಾತ್ರ ನೀಡಿದಂತಿದೆ.

ಇಂಥ ಪಾತ್ರ ಮಾಡುತ್ತಿರುವುದಕ್ಕೆ ಸ್ವತಃ ಗಣೇಶ್​ ತುಂಬ ಎಗ್ಸೈಟ್​ ಆಗಿದ್ದಾರೆ. ಆ ಬಗ್ಗೆ ಅವರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ‘ನಾಯಕನಾಗಿ 15 ವರ್ಷಗಳಿಂದ ನಿಮ್ಮ ನೋಟಗಳಿಗೆ ಸೆರೆಯಾಗಿದ್ದೇನೆ. ಮೊದಲ ಬಾರಿಗೆ ನನ್ನ ನೋಟವನು ಕಟ್ಟಿಟ್ಟು ಕಾಣಿಸಿಕೊಳ್ಳುತ್ತಿದ್ದೇನೆ. ಮುಚ್ಚಿಟ್ಟ ಕಣ್ಗಳಿಗೆ, ಬಿಚ್ಚಿಟ್ಟ ಪ್ರೀತಿಯ ಬೆಳಕು ಚೆಲ್ಲಿ ಹಾರೈಸಿ’ ಎಂದು ಗಣೇಶ್​ ಟ್ವೀಟ್​ ಮಾಡಿದ್ದಾರೆ.

ಈ ಫೋಟೋಗಳನ್ನು ನೋಡಿದ ಬಳಿಕ ಗಣೇಶ್​ ಅಭಿಮಾನಿಗಳು ‘ಸಖತ್​’ ಸಿನಿಮಾ ಮೇಲೆ ಇಟ್ಟುಕೊಂಡಿದ್ದ ನಿರೀಕ್ಷೆ ಡಬಲ್​ ಆಗಿದೆ. ಈ ಚಿತ್ರಕ್ಕೆ ಮಾ.22ರಿಂದ ಶೂಟಿಂಗ್​ ಆರಂಭ ಆಗಿದೆ. ಗಣೇಶ್​ಗೆ ಜೋಡಿಯಾಗಿ ನಟಿ ನಿಶ್ವಿಕಾ ನಾಯ್ಡು ಅಭಿನಯಿಸುತ್ತಿದ್ದಾರೆ. ಮತ್ತೊಂದು ಪ್ರಮುಖ ಪಾತ್ರದಲ್ಲಿ ಹಾಸ್ಯ ನಟ ಧರ್ಮಣ್ಣ ಕಾಣಿಸಿಕೊಳ್ಳಲಿದ್ದಾರೆ. ಅವರ ಫಸ್ಟ್​ಲುಕ್​ ಪೋಸ್ಟರ್​ ಕೂಡ ಈಗಾಗಲೇ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಈ ಹಿಂದೆ ಸುನಿ ಮತ್ತು ಗಣೇಶ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿದ್ದ ‘ಚಮಕ್​’ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಆ ಕಾರಣದಿಂದಲೂ ಈ ಕಾಂಬಿನೇಷನ್​ ಮೇಲೆ ಅಭಿಮಾನಿಗಳಿಗೆ ಹೆಚ್ಚು ನಿರೀಕ್ಷೆ ಇದೆ. ಇದಲ್ಲದೆ, ಯೋಗರಾಜ್​ ಭಟ್​ ನಿರ್ದೇಶನದ ‘ಗಾಳಿಪಟ 2’, ‘ತ್ರಿಬಲ್​ ರೈಡಿಂಗ್’​ ಮುಂತಾದ ಕೆಲಸಗಳಲ್ಲೂ ಗಣೇಶ್​ ಬ್ಯುಸಿ ಆಗಿದ್ದಾರೆ.

ಇದನ್ನೂ ಓದಿ: National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ

VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ